AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಗರ್ಜಿಸಿದ ಜಲಪಾತ, ಸೇತುವೆ ಮೇಲಿಂದ ಚಿಮ್ಮಿದ ನೀರು!

ಮೇಘಾಲಯ ಮೌಸಿನ್ರಾಮ್‌ನಲ್ಲಿ ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಜಲಪಾತವೊಂದು ಭೋರ್ಗರೆದಿದೆ. ಇದರ ವಿಡಿಯೋ ವೈರಲ್ ಆಗುತ್ತಿದ್ದು, ಈ ಸುದ್ದಿ ಮೂಲಕ ವಿಡಿಯೋ ವೀಕ್ಷಣೆ ಮಾಡಿ.

Viral Video: ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಗರ್ಜಿಸಿದ ಜಲಪಾತ, ಸೇತುವೆ ಮೇಲಿಂದ ಚಿಮ್ಮಿದ ನೀರು!
ಭೋರ್ಗರೆದ ಜಲಪಾತ
Follow us
TV9 Web
| Updated By: Rakesh Nayak Manchi

Updated on:Jun 19, 2022 | 6:41 PM

ಮೇಘಾಲಯ ಮೌಸಿನ್ರಾಮ್‌ (Mawsynram)ನಲ್ಲಿ ದಾಖಲೆಯ ಮಳೆಯ ನಂತರ ಬೆಚ್ಚಿಬೀಳಿಸುವಂತೆ ಗರ್ಜಿಸುವ ಜಲಪಾತ (Waterfall)ದ ವಿಡಿಯೋ ವೈರಲ್ (Video Viral) ಆಗುತ್ತಿದೆ. ಒಂದು ವಾರದಿಂದ ಈಶಾನ್ಯ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಜೂನ್ 16 ರಂದು ಬೆಳಿಗ್ಗೆ ಆರಂಭವಾದ ಮಳೆ ನಿರಂತರವಾಗಿ 24 ಗಂಟೆಗಳ ಕಾಲ ಧಾರಾಕಾರವಾಗಿ ಸುರಿದಿದೆ. ಈ ಅವಧಿಯಲ್ಲಿ ಭೂಮಿಯ ಮೇಲಿನ ಅತ್ಯಂತ ತೇವಭರಿತ ಸ್ಥಳವಾದ ಮೇಘಾಲಯದ ಮೌಸಿನ್​ರಾಮ್​ನಲ್ಲಿ ದಾಖಲೆಯ 100 ಸೆಂ.ಮೀ ಮಳೆಯಾಗಿದ್ದು, ಜಲಪಾತವೊಂದು ಭೋರ್ಗರೆದಿದೆ.

ಮೌಸಿನ್​ರಾಮ್​ ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ ಜಲಪಾತ ಗರ್ಜಿಸಲು ಪ್ರಾರಂಭಿಸಿದ್ದು, ನೀರಿನ ರಭಸ ಎಷ್ಟಿತ್ತೆಂದರೆ ಸೇತುವೆ ಮೇಲಿನಿಂದ ನೀರು ಚಿಮ್ಮಿದೆ. ಜಲಪಾತದ ಭೂರ್ಗರೆತ ಹಾಗೂ ಸೇತುವೆ ಮೇಲಿಂದ ನೀರು ಚಿಮ್ಮುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದಾರೆ.

ಇದನ್ನೂ ಓದಿ: Viral Video: ಬಾವಿಗೆ ಬಿದ್ದ ಚಿರತೆ, ಅರಣ್ಯಾಧಿಕಾರಿಗಳ ರಕ್ಷಣಾ ಕಾರ್ಯಕ್ಕೆ ನೆಟ್ಟಿಗರ ಶ್ಲಾಘನೆ

ಇದೀಗ ಜಲಪಾತದ ಭೂರ್ಗರೆತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ನೋಡುವಂತೆ, ಜಲಪಾತದಿಂದ ಉಕ್ಕಿದ ನೀರು ಸೇತುವೆ ಮೇಲಿಂದ ಚಿಮ್ಮುವುದನ್ನು ಕಾಣಬಹುದು. ವಿಡಿಯೋ ಚಿತ್ರೀಕರಿಸಿದ ವಾಹನ ಸವಾರರೊಬ್ಬರು ಕಾರಿನಲ್ಲಿ ಕುಳಿತುಕೊಂಡು “ಇದು ಮೋಡವಲ್ಲ, ನೀರು” ಎಂದು ಹೇಳುವುದನ್ನು ಕೇಳಬಹುದು. ಇನ್ನೊಂದು ಕಡೆ ಮಹಿಳೆಯೊಬ್ಬಳು “ಓ ಮೈ ಗಾಡ್” ಎಂದು ಪದೇಪದೇ ಹೇಳುವುದನ್ನು ಕೇಳಬಹುದು.

ಆದಾಗ್ಯೂ, ಕಾರಿನ ಚಾಲಕ ಕಾರನ್ನು ಮುಂದಕ್ಕೆ ತೆಗೆದುಕೊಂಡು ಹೋಗಲು ಪ್ರಾರಂಭಿಸಿದನು. ಗಾಬರಿಗೊಂಡ ಸಹ ಪ್ರಯಾಣಿಕರೊಬ್ಬರು, ಕಾರಿನಲ್ಲಿ ಮಕ್ಕಳಿದ್ದಾರೆ, ಕಾರನ್ನು ಮುಂದಕ್ಕೆ ಕೊಂಡೊಯ್ಯದಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Viral Video: ನೀವು ಇದುವರೆಗೆ ನೋಡಿರದಂಥ ವಿಭಿನ್ನ ಸ್ಕೂಟರ್ ಇಲ್ಲಿದೆ ನೋಡಿ, ವಿಡಿಯೋ ವೈರಲ್

ವರದಿಗಳ ಪ್ರಕಾರ, ಕಳೆದ 81 ವರ್ಷಗಳಲ್ಲಿ ಮೌಸಿನ್‌ರಾಮ್‌ನಲ್ಲಿ 24 ಗಂಟೆಗಳ ಅವಧಿಯಲ್ಲಿ ದಾಖಲಾದ ಅತಿ ಹೆಚ್ಚು ಮಳೆಯಾಗಿದೆ. ಕಳೆದ ಮೂರು ದಿನಗಳಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಗೆ 39 ಜನರು ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಒಟ್ಟಾರೆ ಈ ಮುಂಗಾರು ಹಂಗಾಮಿನಲ್ಲಿ 90 ಮಂದಿ ಸಾವನ್ನಪ್ಪಿದ್ದಾರೆ.

ಟ್ರೆಂಡಿಂಗ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Sun, 19 June 22

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್