Viral Video: ಆಗ್ರಾ; ಸರ್ಕಾರಿ ಮಕ್ಕಳ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಗೆ ಚಪ್ಪಲಿಯಿಂದ ಥಳಿಸಿದ ಮಹಿಳಾ ಅಧಿಕಾರಿ; ತನಿಖೆಗೆ ಆದೇಶ

Agra: ಆಗ್ರಾದ ಸರ್ಕಾರಿ ಮಕ್ಕಳ ಆಶ್ರಮದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಆಶ್ರಮದ ಮಹಿಳಾ ಅಧಿಕಾರಿ ಅಪ್ರಾಪ್ತ ಬಾಲಕಿಯನ್ನು ಚಪ್ಪಲಿಯಿಂದ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಅಧಿಕಾರಿ ಪೂನಂ ಪಾಲ್​ರನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ಸಮಗ್ರ ತನಿಖೆಯಾಗುವಂತೆ ಒತ್ತಾಯಿಸಿದ್ಧಾರೆ.

Viral Video: ಆಗ್ರಾ; ಸರ್ಕಾರಿ ಮಕ್ಕಳ ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಗೆ ಚಪ್ಪಲಿಯಿಂದ ಥಳಿಸಿದ ಮಹಿಳಾ ಅಧಿಕಾರಿ; ತನಿಖೆಗೆ ಆದೇಶ
ಆಗ್ರಾದ ಸರ್ಕಾರಿ ಮಕ್ಕಳ ಆಶ್ರಮದ ಸೂಪರಿಂಟೆಂಡೆಂಟ್​ ಪೂನಂ ಪಾಲ್​ ಅಪ್ರಾಪ್ತ ಬಾಲಕಿಯನ್ನು ಚಪ್ಪಲಿಯಿಂದ ಥಳಿಸುತ್ತಿರುವುದು.
Follow us
|

Updated on: Sep 14, 2023 | 2:08 PM

Uttar Pradesh: ಆಗ್ರಾದ (Agra) ರಾಜಕಿಯಾ ಬಾಲ ಗೃಹದಲ್ಲಿ ಮಹಿಳಾ ಅಧಿಕಾರಿಯೊಬ್ಬರು ಅಪ್ರಾಪ್ತ ಬಾಲಕಿಯನ್ನು ಚಪ್ಪಲಿಯಿಂದ ಹೀನಾಯವಾಗಿ ಥಳಿಸುತ್ತಿದ್ದ ದೃಶ್ಯ ಇದೀಗ ವೈರಲ್ ಆಗಿದೆ. ಹಾಸಿಗೆಯ ಮೇಲೆ ಮಲಗಿರುವ ಅಪ್ರಾಪ್ತ ಬಾಲಕಿಯನ್ನು (15 ವರ್ಷ) ಹೀನಾಯವಾಗಿ ಥಳಿಸಿದ ಈ ಮಹಿಳಾ ಅಧಿಕಾರಿಗಳ ವಿರುದ್ಧ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಈ ಮಹಿಳೆ ಈ ಆಶ್ರಮದ ಸೂಪರಿಂಟೆಂಡೆಂಟ್​ ಎಂದು ವರದಿಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಡಿಪಿಒ ಅಧಿಕಾರಿಗೆ ಆದೇಶ ನೀಡಿದ್ದರು.

ಇದನ್ನೂ ಓದಿ : Viral Video: ನಾನು ನಂದಿನಿ ಬೆಂಗಳೂರಿಗೆ ಬಂದೀನಿ; 5 ಮಿಲಿಯನ್​ ಜನರನ್ನು ತಲುಪಿದ ‘ವಿಕಿಪೀಡಿಯಾ’ ರೀಲ್

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಜಿಲ್ಲಾ ಮ್ಯಾಜಿಸ್ಟ್ರೇಟ್, ನಿರ್ದೇಶಕರು ಮತ್ತು ಲಕ್ನೋದಲ್ಲಿ ಮಹಿಳಾ ಕಲ್ಯಾಣ ಇಲಾಖೆಯ ಶಿಫಾರಸಿನ ಮೇರೆಗೆ ಡಿಪಿಒ ಮಕ್ಕಳ ಆಶ್ರಮಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿದ ನಂತರ ಈ ಆಶ್ರಮದ ಸೂಪರಿಂಡೆಂಟ್​ ಪೂನಂ ಪಾಲ್ ಅವರನ್ನು ಅಮಾನತುಗೊಳಿಸಲಾಗಿದೆ.

ಅಪ್ರಾಪ್ರ ಬಾಲಕಿಯನ್ನು ಚಪ್ಪಲಿಯಿಂದ ಥಳಿಸುತ್ತಿರುವ ದೃಶ್ಯ

ಈ ಘಟನೆಯು ಸೆ. 4 ರಂದು ನಡೆದಿದ್ದು, ಈ ದೃಶ್ಯವನ್ನು ಇದೇ ಆಶ್ರಮದಲ್ಲಿರುವ ಇನ್ನೊಬ್ಬ ಅಧಿಕಾರಿಯು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ತನ್ನಪಾಡಿಗೆ ತಾನು ಹಾಸಿಗೆಯ ಮೇಲೆ ಮಲಗಿರುವ ಅಪ್ರಾಪ್ತ ಬಾಲಕಿಗೆ ಪೂನಂ ಪಾಲ್​ ಚಪ್ಪಲಿಯಿಂದ ಥಳಿಸಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಆದರೂ ಪೂನಂ ಹೀಗೆ ವರ್ತಿಸಿದ್ದರ ಕಾರಣ ಇನ್ನೂ ತಿಳಿದುಬಂದಿಲ್ಲ. ಸೂಕ್ತ ತನಿಖೆಯ ನಂತರವಷ್ಟೇ ಸತ್ಯ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.

ಪೂನಂ ಪಾಲ್​ ಅಮಾನತು

ಈ ಘಟನೆಯ ಬಗ್ಗೆ ಪೂನಂಗೆ ಪ್ರಶ್ನಿಸಿದಾಗ, ಮೊದಲು ಪ್ರತಿಕ್ರಿಯಿಸಲು ನಿರಾಕರಿಸಿ, ಈಗಾಗಲೇ ನಾನು ಡಿಪಿಒ ಅಜಯ್ ಪಾಲ್ ಸಿಂಗ್ ಅವರಿಗೆ ಈ ಬಗ್ಗೆ ಹೇಳಿದ್ದೇನೆ, ಮತ್ತೆ ಹೇಳಲು ನನ್ನ ಬಳಿ ಏನೂ ಇಲ್ಲ ಎಂದಿದ್ದಾರೆ. ಅಜಯ್​ ಪಾಲ್​ ಸಿಂಗ್​, ‘ನಾನು ಮತ್ತು ಸಿಟಿ ಮ್ಯಾಜಿಸ್ಟ್ರೇಟ್​ ಮಂಗಳವಾರ ಈ ಆಶ್ರಮಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದೇವೆ. ಈ ಬಾಲಕಿ ಇತರ ಮಕ್ಕಳ ಸಹಾಯದಿಂದ ತನ್ನನ್ನು ತಾನು ಪೆಟ್ಟಿಗೆಯಲ್ಲಿ ಅಡಗಿಸಿಟ್ಟುಕೊಳ್ಳುತ್ತಿದ್ದಳು ಎನ್ನುವ ವಿಷಯ ತಿಳಿದು ಬಂದಿದೆ’ ಎಂದಿದ್ಧಾರೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ