AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳೆದುರೇ ತಾಯಿಯ ಕೂದಲು ಹಿಡಿದೆಳೆದು, ಥಳಿಸಿದ ಜನ; ವಿಡಿಯೋ ವೈರಲ್

3 ನಿಮಿಷಗಳ ಈ ವೀಡಿಯೊ ಕ್ಲಿಪ್‌ನಲ್ಲಿ ಕೆಲವರು ಮಹಿಳೆಯನ್ನು ಆಕೆಯ ಮಕ್ಕಳೆದುರೇ ಕೂದಲನ್ನು ಹಿಡಿದು, ಆಕೆಯ ಮನೆಯಿಂದ ಹೊರಗೆಳೆದುಕೊಂಡು ಬಂದು ಥಳಿಸಿದ್ದಾರೆ. ಅಮ್ಮನಿಗೆ ಹೊಡೆಯುತ್ತಿರುವುದನ್ನು ನೋಡಿ ಆಕೆಯ ಮಗು ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮಕ್ಕಳೆದುರೇ ತಾಯಿಯ ಕೂದಲು ಹಿಡಿದೆಳೆದು, ಥಳಿಸಿದ ಜನ; ವಿಡಿಯೋ ವೈರಲ್
ಕಾಶ್ಮೀರದಲ್ಲಿ ಮಹಿಳೆಯನ್ನು ಥಳಿಸುತ್ತಿರುವ ಜನರು
ಸುಷ್ಮಾ ಚಕ್ರೆ
|

Updated on: Sep 07, 2023 | 5:40 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಟುವಾ ಜಿಲ್ಲೆಯಲ್ಲಿ ಗಂಡಸರ ಗುಂಪೊಂದು ಮಹಿಳೆಯನ್ನು ಆಕೆಯ ಮನೆಯಿಂದ ಹೊರಗೆಳೆದು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Video Viral) ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕಳೆದ ವಾರ ಕಟುವಾದ ದೇವಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸೋಮವಾರ ದೂರು ದಾಖಲಾಗಿತ್ತು. ಕೆಲವು ಗಂಟೆಗಳ ನಂತರ ಆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

3 ನಿಮಿಷಗಳ ಈ ವೀಡಿಯೊ ಕ್ಲಿಪ್‌ನಲ್ಲಿ ಕೆಲವರು ಮಹಿಳೆಯನ್ನು ಆಕೆಯ ಮಕ್ಕಳೆದುರೇ ಕೂದಲನ್ನು ಹಿಡಿದು, ಆಕೆಯ ಮನೆಯಿಂದ ಹೊರಗೆಳೆದುಕೊಂಡು ಬಂದು ಥಳಿಸಿದ್ದಾರೆ. ಅಮ್ಮನಿಗೆ ಹೊಡೆಯುತ್ತಿರುವುದನ್ನು ನೋಡಿ ಆಕೆಯ ಮಗು ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸೋಮವಾರ ನೀಡಿದ ಲಿಖಿತ ದೂರಿನಲ್ಲಿ, ಕ್ರಿಮಿನಲ್ ಉದ್ದೇಶ ಹೊಂದಿರುವ ನಾಲ್ವರು ತನ್ನ ಮನೆಗೆ ನುಗ್ಗಿ ತನ್ನ ಮೇಲೆ ಹಲ್ಲೆ ನಡೆಸಿ ನಿಂದಿಸಿದ್ದಾರೆ ಎಂದು ಮಹಿಳೆ ತಿಳಿಸಿದ್ದಾರೆ.

ಇದನ್ನೂ ಓದಿ: Teachers Day 2023: ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ

ಸೆಕ್ಷನ್ 452 (ಮನೆ ಅತಿಕ್ರಮಣ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ), ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾಕು ರಾಮ್, ಬಲ್ಲು ರಾಮ್, ಹ್ಯಾಪಿ ಮತ್ತು ಬಂಟಿ ಎಂಬ ನಾಲ್ವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಆ ಗ್ರಾಮದ ಹೊರಗಿನ ವ್ಯಕ್ತಿಗಳಿಗೆ ಆಕೆ ತನ್ನ ಮನೆಗೆ ಭೇಟಿ ನೀಡಲು ಅವಕಾಶ ನೀಡುತ್ತಿದ್ದ ಕಾರಣದಿಂದ ಗ್ರಾಮಸ್ಥರು ಆ ಮಹಿಳೆಯನ್ನು ವಿರೋಧಿಸಿದ್ದರು. ಆ ಗ್ರಾಮಕ್ಕೆ ಭೇಟಿ ನೀಡದಂತೆ ಪೊಲೀಸರು ಆ ಗುಂಪಿಗೆ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೂ ಅವರು ಆಕೆಯ ಮನೆಗೆ ಬರುತ್ತಿದ್ದುದರಿಂದ ಆಕೆಯನ್ನು ಥಳಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​