AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳೆದುರೇ ತಾಯಿಯ ಕೂದಲು ಹಿಡಿದೆಳೆದು, ಥಳಿಸಿದ ಜನ; ವಿಡಿಯೋ ವೈರಲ್

3 ನಿಮಿಷಗಳ ಈ ವೀಡಿಯೊ ಕ್ಲಿಪ್‌ನಲ್ಲಿ ಕೆಲವರು ಮಹಿಳೆಯನ್ನು ಆಕೆಯ ಮಕ್ಕಳೆದುರೇ ಕೂದಲನ್ನು ಹಿಡಿದು, ಆಕೆಯ ಮನೆಯಿಂದ ಹೊರಗೆಳೆದುಕೊಂಡು ಬಂದು ಥಳಿಸಿದ್ದಾರೆ. ಅಮ್ಮನಿಗೆ ಹೊಡೆಯುತ್ತಿರುವುದನ್ನು ನೋಡಿ ಆಕೆಯ ಮಗು ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮಕ್ಕಳೆದುರೇ ತಾಯಿಯ ಕೂದಲು ಹಿಡಿದೆಳೆದು, ಥಳಿಸಿದ ಜನ; ವಿಡಿಯೋ ವೈರಲ್
ಕಾಶ್ಮೀರದಲ್ಲಿ ಮಹಿಳೆಯನ್ನು ಥಳಿಸುತ್ತಿರುವ ಜನರು
ಸುಷ್ಮಾ ಚಕ್ರೆ
|

Updated on: Sep 07, 2023 | 5:40 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಟುವಾ ಜಿಲ್ಲೆಯಲ್ಲಿ ಗಂಡಸರ ಗುಂಪೊಂದು ಮಹಿಳೆಯನ್ನು ಆಕೆಯ ಮನೆಯಿಂದ ಹೊರಗೆಳೆದು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Video Viral) ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕಳೆದ ವಾರ ಕಟುವಾದ ದೇವಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸೋಮವಾರ ದೂರು ದಾಖಲಾಗಿತ್ತು. ಕೆಲವು ಗಂಟೆಗಳ ನಂತರ ಆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

3 ನಿಮಿಷಗಳ ಈ ವೀಡಿಯೊ ಕ್ಲಿಪ್‌ನಲ್ಲಿ ಕೆಲವರು ಮಹಿಳೆಯನ್ನು ಆಕೆಯ ಮಕ್ಕಳೆದುರೇ ಕೂದಲನ್ನು ಹಿಡಿದು, ಆಕೆಯ ಮನೆಯಿಂದ ಹೊರಗೆಳೆದುಕೊಂಡು ಬಂದು ಥಳಿಸಿದ್ದಾರೆ. ಅಮ್ಮನಿಗೆ ಹೊಡೆಯುತ್ತಿರುವುದನ್ನು ನೋಡಿ ಆಕೆಯ ಮಗು ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸೋಮವಾರ ನೀಡಿದ ಲಿಖಿತ ದೂರಿನಲ್ಲಿ, ಕ್ರಿಮಿನಲ್ ಉದ್ದೇಶ ಹೊಂದಿರುವ ನಾಲ್ವರು ತನ್ನ ಮನೆಗೆ ನುಗ್ಗಿ ತನ್ನ ಮೇಲೆ ಹಲ್ಲೆ ನಡೆಸಿ ನಿಂದಿಸಿದ್ದಾರೆ ಎಂದು ಮಹಿಳೆ ತಿಳಿಸಿದ್ದಾರೆ.

ಇದನ್ನೂ ಓದಿ: Teachers Day 2023: ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ

ಸೆಕ್ಷನ್ 452 (ಮನೆ ಅತಿಕ್ರಮಣ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ), ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾಕು ರಾಮ್, ಬಲ್ಲು ರಾಮ್, ಹ್ಯಾಪಿ ಮತ್ತು ಬಂಟಿ ಎಂಬ ನಾಲ್ವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಆ ಗ್ರಾಮದ ಹೊರಗಿನ ವ್ಯಕ್ತಿಗಳಿಗೆ ಆಕೆ ತನ್ನ ಮನೆಗೆ ಭೇಟಿ ನೀಡಲು ಅವಕಾಶ ನೀಡುತ್ತಿದ್ದ ಕಾರಣದಿಂದ ಗ್ರಾಮಸ್ಥರು ಆ ಮಹಿಳೆಯನ್ನು ವಿರೋಧಿಸಿದ್ದರು. ಆ ಗ್ರಾಮಕ್ಕೆ ಭೇಟಿ ನೀಡದಂತೆ ಪೊಲೀಸರು ಆ ಗುಂಪಿಗೆ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೂ ಅವರು ಆಕೆಯ ಮನೆಗೆ ಬರುತ್ತಿದ್ದುದರಿಂದ ಆಕೆಯನ್ನು ಥಳಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್