AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮುಖೇಶ್ ಅಂಬಾನಿಯವರ ಫೇವರೇಟ್​​ ರೆಸ್ಟೋರೆಂಟ್​ ‘ಕೆಫೆ ಮೈಸೂರು’

ಇತ್ತೀಚೆಗಷ್ಟೇ ಅಂಬಾನಿಯವರ ಕಿರಿಯ ಪುತ್ರ ಅನಂತ್​ ಅಂಬಾನಿಯವರ ವಿವಾಹ ಪೂರ್ವ ಸಮಾರಂಭ ಅದ್ಧೂರಿಯಾಗಿ ನಡೆದಿತ್ತು. ಇದೀಗಾ ಅಂಬಾನಿಯವರ ಹಳೆಯ ಸಂದರ್ಶನದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Viral Video: ಮುಖೇಶ್ ಅಂಬಾನಿಯವರ ಫೇವರೇಟ್​​ ರೆಸ್ಟೋರೆಂಟ್​ 'ಕೆಫೆ ಮೈಸೂರು'
Viral VideoImage Credit source: Pinterest
ಅಕ್ಷತಾ ವರ್ಕಾಡಿ
|

Updated on: Mar 09, 2024 | 6:48 PM

Share

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ತನ್ನ ನೆಚ್ಚಿನ ರೆಸ್ಟೋರೆಂಟ್ ಯಾವುದು ಎಂಬುದರ ಕುರಿತು ಸಂದರ್ಶನದಲ್ಲಿ ಮಾತಾನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. “ಮುಂಬೈನಲ್ಲಿರುವ ಆ ರೆಸ್ಟೋರೆಂಟ್ ಹೆಸರು ‘ಕೆಫೆ ಮೈಸೂರು’. ಕಾಲೇಜಿನಲ್ಲಿ ಓದುವಾಗ ಅಲ್ಲಿಗೆ ನಿಯಮಿತವಾಗಿ ಹೋಗುತ್ತಿದ್ದೆ. ಈಗ ಅಲ್ಲಿಗೆ ಹೋಗಲು ಸಾಧ್ಯವಾಗದಿದ್ದರೂ, ಅಲ್ಲಿಂದ ಆಹಾರವನ್ನು ಆರ್ಡರ್ ಮಾಡಿ ತಿನ್ನುತ್ತೇನೆ. ನನ್ನ ಮೆಚ್ಚಿನ ಆಹಾರ ಇಡ್ಲಿ, ದೋಸೆ. ನಾನು ದಕ್ಷಿಣ ಭಾರತದ ಆಹಾರಗಳನ್ನು ಇಷ್ಟಪಡುತ್ತೇನೆ” ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಕೆಫೆ ಮೈಸೂರು ಮುಂಬೈನಲ್ಲಿರುವ ದಕ್ಷಿಣ ಭಾರತದ ಅತ್ಯಂತ ಹಳೆಯ ರೆಸ್ಟೋರೆಂಟ್‌ಗಳಲ್ಲಿ ಒಂದಾಗಿದೆ. ಈ ರೆಸ್ಟೋರೆಂಟ್ ಅನ್ನು 1936 ರಲ್ಲಿ ನಿರ್ಮಿಸಲಾಯಿತು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರಸ್ತೆಯಲ್ಲಿರುವ ಈ ರೆಸ್ಟೋರೆಂಟ್ ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ತೆರೆದಿರುತ್ತದೆ. ಪ್ರತಿ ಬುಧವಾರ ಮುಚ್ಚಲಾಗುತ್ತದೆ. ದೋಸೆ ಮತ್ತು ಇಡ್ಲಿಯ ಹೊರತಾಗಿ, ಈ ರೆಸ್ಟೋರೆಂಟ್ ಸ್ಯಾಂಡ್‌ವಿಚ್‌ಗಳು, ಬೀದಿ ಆಹಾರ, ಸಿಹಿತಿಂಡಿಗಳು ಇತ್ಯಾದಿಗಳನ್ನು ಸಹ ನೀಡುತ್ತದೆ. ಈ ರೆಸ್ಟೋರೆಂಟ್‌ನಲ್ಲಿ ಕನಿಷ್ಠ 81 ಬಗೆಯ ದೋಸೆಗಳು ಲಭ್ಯವಿವೆ. ಈ ರೆಸ್ಟೋರೆಂಟ್‌ನಿಂದ ನೀವು ಆನ್‌ಲೈನ್‌ನಲ್ಲಿ ಆಹಾರವನ್ನು ಆರ್ಡರ್ ಮಾಡಬಹುದು. ಉಪ್ಮಾ, ಪೂರಿ, ಸಿಹಿತಿಂಡಿಗಳು, ಲಸ್ಸಿ, ಮಿಲ್ಕ್ ಶೇಕ್ ಇತ್ಯಾದಿ ಎಲ್ಲವನ್ನೂ ಆರ್ಡರ್ ಮಾಡಬಹುದು.

ಇದನ್ನೂ ಓದಿ: ಉತ್ತರ ಕರ್ನಾಟಕದ ಖಡಕ್ ಜೋಳದ ರೊಟ್ಟಿ ನಾನಾ ರೀತಿಯ ಪಲ್ಯ, ಅಜ್ಜಿಯ ಕೈ ರುಚಿ ಅದ್ಭುತ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Café Mysore (@cafe_mysore)

ಇತ್ತೀಚೆಗಷ್ಟೇ ಅಂಬಾನಿಯವರ ಕಿರಿಯ ಪುತ್ರ ಅನಂತ್​ ಅಂಬಾನಿಯವರ ವಿವಾಹ ಪೂರ್ವ ಸಮಾರಂಭ ಅದ್ಧೂರಿಯಾಗಿ ನಡೆದಿತ್ತು. ಇದೀಗಾ ಅಂಬಾನಿಯವರ ಹಳೆಯ ಸಂದರ್ಶನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್