AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ಮಧ್ಯೆ ಕೊಳಲಿನಲ್ಲಿ ಸಂದೇಸೆ ಆತೇ ಹೇ ಹಾಡು ನುಡಿಸಿದ ಪೊಲೀಸ್; ವಿಡಿಯೋ ವೈರಲ್

ರಸ್ತೆಯ ಮಧ್ಯೆ ಚಿತ್ರೀಕರಿಸಲಾದ ವಿಡಿಯೋದಲ್ಲಿ ಪೋಲೀಸ್ ಒಬ್ಬರು ಕೊಳಲಿನ ಮೂಲಕ ಈ ಪ್ರಸಿದ್ಧ ಹಾಡನ್ನು ಸಲೀಸಾಗಿ ನುಡಿಸುತ್ತಿರುವುದನ್ನು ನೋಡಬಹುದು.

Viral Video: ರಸ್ತೆ ಮಧ್ಯೆ ಕೊಳಲಿನಲ್ಲಿ ಸಂದೇಸೆ ಆತೇ ಹೇ ಹಾಡು ನುಡಿಸಿದ ಪೊಲೀಸ್; ವಿಡಿಯೋ ವೈರಲ್
ಬಾರ್ಡರ್ ಸಿನಿಮಾದ ಹಾಡನ್ನು ನುಡಿಸುತ್ತಿರುವ ಪೊಲೀಸ್
TV9 Web
| Updated By: ಸುಷ್ಮಾ ಚಕ್ರೆ|

Updated on: May 11, 2022 | 1:37 PM

Share

ಸೋಷಿಯಲ್ ಮೀಡಿಯಾದಲ್ಲಿ ಸುಮ್ಮನೆ ಕಣ್ಣಾಡಿಸಿದರೂ ಸಾಕು ನೂರಾರು ಮನಸಿಗೆ ತಾಕುವ ವಿಡಿಯೋಗಳು ಕಾಣಸಿಗುತ್ತವೆ. 1997ರಲ್ಲಿ ತೆರೆಕಂಡ ಬಾಲಿವುಡ್ ಸಿನಿಮಾ ಬಾರ್ಡರ್‌ (Border Movie) ಈಗಲೂ ತನ್ನ ಪ್ರಸಿದ್ಧಿಯನ್ನು ಕಳೆದುಕೊಂಡಿಲ್ಲ. ಈ ಸಿನಿಮಾ ನೋಡಿದರೆ ಈಗಲೂ ಮೈ ನವಿರೇಳುತ್ತದೆ. ಮುಂಬೈನ ಪೊಲೀಸ್ ಕಾನ್​ಸ್ಟೆಬಲ್ ಇದೇ ಬಾರ್ಡರ್ ಸಿನಿಮಾದ ‘ಸಂದೇಸೆ ಆತೇ ಹೇ’ ನುಡಿಸುತ್ತಿರುವ ಹೃದಯಸ್ಪರ್ಶಿ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.

ರಸ್ತೆಯ ಮಧ್ಯೆ ಚಿತ್ರೀಕರಿಸಲಾದ ವಿಡಿಯೋದಲ್ಲಿ ಪೋಲೀಸ್ ಒಬ್ಬರು ಕೊಳಲಿನ ಮೂಲಕ ಈ ಪ್ರಸಿದ್ಧ ಹಾಡನ್ನು ಸಲೀಸಾಗಿ ನುಡಿಸುತ್ತಿರುವುದನ್ನು ನೋಡಬಹುದು. ಒಬ್ಬ ಟ್ರಾಫಿಕ್ ಪೋಲೀಸ್ ಕೂಡ ಅವರ ಪಕ್ಕದಲ್ಲಿ ನಿಂತಿದ್ದಾರೆ. ಮೂಲ ಹಾಡು ಪ್ಲೇ ಆಗುತ್ತಿರುವ ರಸ್ತೆಯಲ್ಲಿ ಫೋನ್ ಮತ್ತು ಬ್ಲೂಟೂತ್ ಸ್ಪೀಕರ್ ಅನ್ನು ಸಹ ಇರಿಸಲಾಗುತ್ತದೆ.

ಈ ವಿಡಿಯೋವನ್ನು ವಡಾಲಾ ಮಾಟುಂಗಾ ಸಿಯಾನ್ ಫೋರಮ್ ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿದೆ. ಈ ಪೋಸ್ಟ್‌ನ ಶೀರ್ಷಿಕೆಯ ಪ್ರಕಾರ, ಮುಂಬೈನ ವಡಾಲಾದ ರಫಿ ಅಹ್ಮದ್ ಕಿದ್ವಾಯಿ ಮಾರ್ಗದಲ್ಲಿ ಈ ವೀಡಿಯೊವನ್ನು ರೆಕಾರ್ಡ್ ಮಾಡಲಾಗಿದೆ.

ಈ ವಿಡಿಯೋ ವೈರಲ್ ಆಗಿದೆ. ಈ ಮ್ಯೂಸಿಕ್ ಅನ್ನು ಜನರು ಕೂಡ ಬಹಳ ಇಷ್ಟಪಟ್ಟಿದ್ದಾರೆ. ಪೊಲೀಸ್​ ಯೂನಿಫಾರಂನಲ್ಲಿರುವವರು ಕೃಷ್ಣನಂತೆ ಕೊಳಲಿನಲ್ಲಿ ಮ್ಯೂಸಿಕ್ ನುಡಿಸುತ್ತಿರುವುದನ್ನು ನೋಡಲು ಖುಷಿಯಾಗುತ್ತಿದೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು