AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಗಿನ್ ಡಾನ್ಸ್ ಮಾಡುತ್ತಿದ್ದ ಇಬ್ಬರು ಯುವಕರು ಮಾಡಿದ್ದೇನು ಗೊತ್ತಾ? ವೈರಲ್ ವಿಡಿಯೋ ಇಲ್ಲಿದೆ

ಇಬ್ಬರು ಯುವಕರ ನಾಗಿನ್ ನಾಗಿನ್ ಮ್ಯೂಸಿಕ್​ಗೆ ಡಾನ್ಸ್ ಮಾಡುತ್ತಿದ್ದರು. ನೋಡನೋಡುತ್ತಿದ್ದಂತೆ ಹಾವಿನಂತೆ ಡಾನ್ಸ್ ಮಾಡುತ್ತಿದ್ದ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ.

Viral Video: ನಾಗಿನ್ ಡಾನ್ಸ್ ಮಾಡುತ್ತಿದ್ದ ಇಬ್ಬರು ಯುವಕರು ಮಾಡಿದ್ದೇನು ಗೊತ್ತಾ? ವೈರಲ್ ವಿಡಿಯೋ ಇಲ್ಲಿದೆ
ನಾಗಿನ್ ಡಾನ್ಸ್ ಮಾಡುತ್ತಾ ಹೊಡೆದಾಡಿಕೊಂಡ ಯುವಕರು
TV9 Web
| Edited By: Rakesh Nayak Manchi|

Updated on: Jul 31, 2022 | 5:00 PM

Share

ವೈರಲ್ ವಿಡಿಯೋ: ಪಾರ್ಟಿಗಳಲ್ಲಿ, ಮದುವೆಗಳಲ್ಲಿ ಅಥವಾ ಇನ್ಯಾವುದೋ ಮನರಂಜನಾ ಸಮಾರಂಭಗಳಲ್ಲಿ ನೃತ್ಯ ಮಾಡುವುದು ಕಾಮನ್, ಅದು ವಿದೇಶಗಳಲ್ಲೂ ಇದೆ. ಆದರೆ ಭಾರತದಲ್ಲಿ ಡಿಜೆ ಡಾನ್ಸ್​ನಲ್ಲಿ ನಾಗಿನ್ ನಾಗಿನ್ ಡಾನ್ಸ್ ಬಹಳ ವಿಶೇಷವಾಗಿದೆ. ಇದಕ್ಕೆ ಯುವಕ-ಯುವತಿಯರು ಕೂಡ ಹುಚ್ಚೆದ್ದು ಕುಣಿಯುತ್ತಾರೆ. ಆದರೆ ಇಲ್ಲಿಬ್ಬರು ಯುವಕರು ಈ ಹಾಡಿಗೆ ಡಾನ್ಸ್ ಮಾಡುತ್ತಾ ಪರಸ್ಪರ ಹಾವಿನಂತೆ ಹೊಡೆದಾಡಿಕೊಂಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ (Video Viral) ಆಗುತ್ತಿದೆ.

ಸಮಾರಂಭವೊಂದರಲ್ಲಿ ಬ್ಯಾಂಡ್​ ವಾದಕರು ನಾಗಿನ್ ಹಾಡಿನ ಮ್ಯೂಸಿಕ್ ಅನ್ನು ಹಾಕಿದ್ದಾರೆ. ಈ ವೇಳೆ ಬ್ಯಾಂಡ್ ವಾದಕರ ನಡುವೆ ಬಂದ ಇಬ್ಬರು ಯುವಕರು ಬಹಳ ಜೋಷ್ ಆಗಿ ಹಾವಿನಂತೆ ಡಾನ್ಸ್ ಮಾಡುತ್ತಾರೆ. ಕೆಲವೇ ಸೆಕೆಂಡುಗಳಲ್ಲಿ ಒಬ್ಬಾತ ಹಾವು ಕೋಪಗೊಂಡರೆ ಯಾವ ರೀತಿ ಕುಟುಕುತ್ತದೆಯೋ ಅದೇ ರೀತಿಯಲ್ಲಿ ಕುಟುಕುತ್ತಾನೆ. ಈ ವೇಳೆ ಕೋಪಗೊಂಡ ಮತ್ತೊಬ್ಬ ಅದೇ ರೀತಿಯಲ್ಲಿ ಆತನಿಗೂ ಕುಟುಕುತ್ತಿದ್ದಾನೆ. ಇದೇ ವೇಳೆ ನಾಗಿನ್ ಡಾನ್ಸ್ ಜಗಳಕ್ಕೆ ತಿರುಗಿದೆ. ಇದು ಕೇವಲ ಜಗಳವಲ್ಲ ಅವರು ಹಾವುಗಳಂತೆ ಪರಸ್ಪರ​ ಹೊಡೆದಾಟಿಕೊಂಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ನೆರೆದಿದ್ದವರು ಜಗಳ ಬಿಡಿಸುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದು.

ಈ ವಿಡಿಯೋವನ್ನು ಮೀಮ್ಸ್ ಮಾಡಿ iam_a_dreamer_5 ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಾನುವಾರ ಹಂಚಿಕೊಳ್ಳಲಾಗಿದ್ದು, ಸದ್ಯ ವೈರಲ್ ಪಡೆದುಕೊಂಡಿದೆ. ವಿಡಿಯೋ ನೋಡಿದ ನೆಟ್ಟಿಗರು, ಸಂಪೂರ್ಣ ಉಲ್ಲಾಸದಾಯಕವಾಗಿದೆ ಎಂದು ಹೇಳಿಕೊಂಡಿದ್ದು, ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

ಈ ಹಿಂದೆ ಲಾರಿಯ ಹಾರನ್ ಸೌಂಡ್ ಭಾರಿ ವೈರಲ್ ಆಗಿತ್ತು. ಇದಕ್ಕೆ ಕಾರಣ ಏನೆಂದರೆ, ಆ ಹಾರನ್​ನಲ್ಲಿನ ಮ್ಯೂಸಿಕ್ ನಾಗಿನ್ ನಾಗಿನ್ ಆಗಿತ್ತು. ಲಾರಿ ಚಾಲಕ ಹಾರನ್ ಹಾಕುತ್ತಿದ್ದಂತೆ ಬೈಕ್​ನಲ್ಲಿ ಬಂದ ಹತ್ತಾರು ಯುವಕರು ರಸ್ತೆಯಲ್ಲೇ ಹುಚ್ಚೆದ್ದು ಕುಣಿದಿದ್ದರು. ಈ ವಿಡಿಯೋ ಇಂಟರ್ನೆಟ್​ನಲ್ಲಿ ಸಖತ್ ವೈರಲ್ ಆಗಿತ್ತು.

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ