AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರ ಮೇಲೆ ಅಚಾನಕ್ಕಾಗಿ ಬಿತ್ತು ಮರದ ರೆಂಬೆ

ಆಗಾಗ ರಸ್ತೆ ಅಪಘಾತಗಳ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತವೆ. ಇಂತಹ ಅಪಘಾತಗಳನ್ನು ನೋಡಿದಾಗ ತಮ್ಮ ಸುರಕ್ಷತೆಯನ್ನು  ಹೇಗೆ ಮಾಡಿಕೊಳ್ಳಬೇಕೆಂಬ ಕಿವಿಮಾತು ಸಿಕ್ಕಂತಾಗುತ್ತದೆ.

Viral Video: ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರ ಮೇಲೆ ಅಚಾನಕ್ಕಾಗಿ ಬಿತ್ತು ಮರದ ರೆಂಬೆ
ಮರ
ನಯನಾ ರಾಜೀವ್
|

Updated on: May 31, 2023 | 12:47 PM

Share

ಆಗಾಗ ರಸ್ತೆ ಅಪಘಾತಗಳ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತವೆ. ಇಂತಹ ಅಪಘಾತಗಳನ್ನು ನೋಡಿದಾಗ ತಮ್ಮ ಸುರಕ್ಷತೆಯನ್ನು  ಹೇಗೆ ಮಾಡಿಕೊಳ್ಳಬೇಕೆಂಬ ಕಿವಿಮಾತು ಸಿಕ್ಕಂತಾಗುತ್ತದೆ. ಇನ್ನೇನು ಮಳೆಗಾಲ ಶುರುವಾಗುತ್ತಿದೆ, ಪ್ರತಿ ನಗರಗಳಲ್ಲೂ ಸಡಿಲಗೊಂಡಿರುವ ಮರಗಳು ಇದ್ದೇ ಇರುತ್ತವೆ, ಹಾಗಾಗಿ ಜನರು ತಮ್ಮ ಸುರಕ್ಷತೆಯಲ್ಲಿ ತಾವಿರಬೇಕು ಎನ್ನುವ ಸಂದೇಶವನ್ನು ಈ ವಿಡಿಯೋ ನೀಡುತ್ತದೆ.

ಇದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸ್ಕೂಟಿಯಲ್ಲಿ ಹೋಗುತ್ತಿದ್ದ ಮೂವರು ಯುವಕರು ಹಠಾತ್ ಅಪಘಾತಕ್ಕೆ ಬಲಿಯಾಗಿರುವುದನ್ನು ಕಾಣಬಹುದು. ಎಲ್ಲರನ್ನೂ ಅಚ್ಚರಿಗೊಳಿಸುವ ಈ ವಿಡಿಯೋ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದ್ದು ಎಂದು ಹೇಳಲಾಗುತ್ತಿದೆ.

ಇದರಲ್ಲಿ ರಸ್ತೆ ಬದಿಯಲ್ಲಿದ್ದ ಮರದಿಂದ ಅದರ ಕೊಂಬೆ ಇದ್ದಕ್ಕಿದ್ದಂತೆ ಬೀಳುತ್ತಿರುವುದು ಕಂಡು ಬಂದಿದೆ. ಆ ಸಮಯದಲ್ಲಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಮೂವರ ತಲೆಯ ಮೇಲೆ ಬೀಳುತ್ತದೆ. ಇದರಿಂದ ಸ್ಕೂಟಿ ಸವಾರಿ ಮಾಡುತ್ತಿದ್ದ ಮೂವರು ಯುವಕರು ಕೆಳಗೆ ಬಿದ್ದಿದ್ದಾರೆ, ಇದನ್ನು ನೋಡಿದ ಸ್ಥಳೀಯರು ತಕ್ಷಣ ಮುಂದೆ ಓಡಿ ಬಂದು ಮರದ ಕೊಂಬೆಯಿಂದ ಅವರನ್ನು ಹೊರತೆಗೆಯುತ್ತಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: Video: ಚಲಿಸುತ್ತಿರುವ ಕಾರಿನ ಮೇಲೆ ಪುಷ್​-ಅಪ್ಸ್, ಮದ್ಯಪಾನ, ನೃತ್ಯ : ಪ್ರಕರಣ ದಾಖಲಿಸಿ ದಂಡ ವಿಧಿಸಿದ ಪೊಲೀಸರು

ಮರದ ಕೊಂಬೆ ಬಿದ್ದು ಅವಘಡ ಪೊಲೀಸರು ಸದಾ ಟ್ರಾಫಿಕ್ ನಿಯಮ ಪಾಲಿಸುವಂತೆ ಸಲಹೆ ನೀಡುತ್ತಾರೆ, ಇದೇ ವೇಳೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಮೂವರು ಯುವಕರು ಹೆಲ್ಮೆಟ್ ಧರಿಸದೇ ಇರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದು ಸಾಕಷ್ಟು ಅಪಾಯಕಾರಿಯಾಗಬಹುದು. ಮಳೆಗಾಲದ ಆರಂಭವಾಗುತ್ತಿದ್ದು,   ಬೀಸುತ್ತಿರುವ ಬಿರುಗಾಳಿಯಿಂದಾಗಿ ಏಕಾಏಕಿ ಮರದ ರೆಂಬೆಗಳು ತುಂಡಾಗಿ ಬೀಳುವ ಘಟನೆಗಳು ಹೆಚ್ಚಾಗುತ್ತಿವೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ವಾಹನಗಳಲ್ಲಿ ಸಂಚರಿಸುವಾಗ ಸಂಚಾರ ನಿಯಮಗಳನ್ನು ಪಾಲಿಸುವ ಮಹತ್ವದ ಬಗ್ಗೆ ಜನರು ಚರ್ಚೆ ನಡೆಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್