AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರ ಮೇಲೆ ಅಚಾನಕ್ಕಾಗಿ ಬಿತ್ತು ಮರದ ರೆಂಬೆ

ಆಗಾಗ ರಸ್ತೆ ಅಪಘಾತಗಳ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತವೆ. ಇಂತಹ ಅಪಘಾತಗಳನ್ನು ನೋಡಿದಾಗ ತಮ್ಮ ಸುರಕ್ಷತೆಯನ್ನು  ಹೇಗೆ ಮಾಡಿಕೊಳ್ಳಬೇಕೆಂಬ ಕಿವಿಮಾತು ಸಿಕ್ಕಂತಾಗುತ್ತದೆ.

Viral Video: ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮೂವರ ಮೇಲೆ ಅಚಾನಕ್ಕಾಗಿ ಬಿತ್ತು ಮರದ ರೆಂಬೆ
ಮರ
Follow us
ನಯನಾ ರಾಜೀವ್
|

Updated on: May 31, 2023 | 12:47 PM

ಆಗಾಗ ರಸ್ತೆ ಅಪಘಾತಗಳ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತವೆ. ಇಂತಹ ಅಪಘಾತಗಳನ್ನು ನೋಡಿದಾಗ ತಮ್ಮ ಸುರಕ್ಷತೆಯನ್ನು  ಹೇಗೆ ಮಾಡಿಕೊಳ್ಳಬೇಕೆಂಬ ಕಿವಿಮಾತು ಸಿಕ್ಕಂತಾಗುತ್ತದೆ. ಇನ್ನೇನು ಮಳೆಗಾಲ ಶುರುವಾಗುತ್ತಿದೆ, ಪ್ರತಿ ನಗರಗಳಲ್ಲೂ ಸಡಿಲಗೊಂಡಿರುವ ಮರಗಳು ಇದ್ದೇ ಇರುತ್ತವೆ, ಹಾಗಾಗಿ ಜನರು ತಮ್ಮ ಸುರಕ್ಷತೆಯಲ್ಲಿ ತಾವಿರಬೇಕು ಎನ್ನುವ ಸಂದೇಶವನ್ನು ಈ ವಿಡಿಯೋ ನೀಡುತ್ತದೆ.

ಇದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸ್ಕೂಟಿಯಲ್ಲಿ ಹೋಗುತ್ತಿದ್ದ ಮೂವರು ಯುವಕರು ಹಠಾತ್ ಅಪಘಾತಕ್ಕೆ ಬಲಿಯಾಗಿರುವುದನ್ನು ಕಾಣಬಹುದು. ಎಲ್ಲರನ್ನೂ ಅಚ್ಚರಿಗೊಳಿಸುವ ಈ ವಿಡಿಯೋ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದ್ದು ಎಂದು ಹೇಳಲಾಗುತ್ತಿದೆ.

ಇದರಲ್ಲಿ ರಸ್ತೆ ಬದಿಯಲ್ಲಿದ್ದ ಮರದಿಂದ ಅದರ ಕೊಂಬೆ ಇದ್ದಕ್ಕಿದ್ದಂತೆ ಬೀಳುತ್ತಿರುವುದು ಕಂಡು ಬಂದಿದೆ. ಆ ಸಮಯದಲ್ಲಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಮೂವರ ತಲೆಯ ಮೇಲೆ ಬೀಳುತ್ತದೆ. ಇದರಿಂದ ಸ್ಕೂಟಿ ಸವಾರಿ ಮಾಡುತ್ತಿದ್ದ ಮೂವರು ಯುವಕರು ಕೆಳಗೆ ಬಿದ್ದಿದ್ದಾರೆ, ಇದನ್ನು ನೋಡಿದ ಸ್ಥಳೀಯರು ತಕ್ಷಣ ಮುಂದೆ ಓಡಿ ಬಂದು ಮರದ ಕೊಂಬೆಯಿಂದ ಅವರನ್ನು ಹೊರತೆಗೆಯುತ್ತಿರುವುದು ಕಂಡುಬಂದಿದೆ.

ಮತ್ತಷ್ಟು ಓದಿ: Video: ಚಲಿಸುತ್ತಿರುವ ಕಾರಿನ ಮೇಲೆ ಪುಷ್​-ಅಪ್ಸ್, ಮದ್ಯಪಾನ, ನೃತ್ಯ : ಪ್ರಕರಣ ದಾಖಲಿಸಿ ದಂಡ ವಿಧಿಸಿದ ಪೊಲೀಸರು

ಮರದ ಕೊಂಬೆ ಬಿದ್ದು ಅವಘಡ ಪೊಲೀಸರು ಸದಾ ಟ್ರಾಫಿಕ್ ನಿಯಮ ಪಾಲಿಸುವಂತೆ ಸಲಹೆ ನೀಡುತ್ತಾರೆ, ಇದೇ ವೇಳೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಮೂವರು ಯುವಕರು ಹೆಲ್ಮೆಟ್ ಧರಿಸದೇ ಇರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದು ಸಾಕಷ್ಟು ಅಪಾಯಕಾರಿಯಾಗಬಹುದು. ಮಳೆಗಾಲದ ಆರಂಭವಾಗುತ್ತಿದ್ದು,   ಬೀಸುತ್ತಿರುವ ಬಿರುಗಾಳಿಯಿಂದಾಗಿ ಏಕಾಏಕಿ ಮರದ ರೆಂಬೆಗಳು ತುಂಡಾಗಿ ಬೀಳುವ ಘಟನೆಗಳು ಹೆಚ್ಚಾಗುತ್ತಿವೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ವಾಹನಗಳಲ್ಲಿ ಸಂಚರಿಸುವಾಗ ಸಂಚಾರ ನಿಯಮಗಳನ್ನು ಪಾಲಿಸುವ ಮಹತ್ವದ ಬಗ್ಗೆ ಜನರು ಚರ್ಚೆ ನಡೆಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ