AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಮಕರಡಿಯ ಬುದ್ಧಿವಂತಿಕೆ ನೋಡಿ ಅಚ್ಚರಿಗೊಂಡ ನೆಟ್ಟಿಗರು

ಹೆಪ್ಪುಗಟ್ಟಿದ ಸಣ್ಣ ಹೊಳೆಯನ್ನು ದಾಟಲು ತನ್ನ ಬುದ್ಧಿಯನ್ನು ಉಪಯೋಗಿಸಿದ ಹಿಮಕರಡಿಯ ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

Viral Video: ಹಿಮಕರಡಿಯ ಬುದ್ಧಿವಂತಿಕೆ ನೋಡಿ ಅಚ್ಚರಿಗೊಂಡ ನೆಟ್ಟಿಗರು
ಹಿಮಕರಡಿಯ ಬುದ್ಧಿವಂತಿಕೆ
TV9 Web
| Updated By: Rakesh Nayak Manchi|

Updated on:Oct 16, 2022 | 6:04 PM

Share

ಜನರು ಶಾಲೆ ಅಥವಾ ಕಾಲೇಜಿಗೆ ಹೋಗುವುದರ ಮೂಲಕ ಅನೇಕ ವಿಷಯಗಳನ್ನು ಕಲಿಯುತ್ತಾರೆ. ಪಾಲಕರು, ತಜ್ಞರು ಹೇಳಿದರೆ ಕೆಲವು ವಿಷಯಗಳು ಗೊತ್ತಾಗುತ್ತವೆ. ಆದರೆ ಕಾಡು ಪ್ರಾಣಿಗಳಿಗೆ ಜೀವನ ಪಾಠವನ್ನು ಯಾರು ಕಲಿಸುತ್ತಾರೆ? ಪ್ರಕೃತಿಯೇ ಅವುಗಳ ಶಾಲೆ. ನಿಸರ್ಗದಲ್ಲಿನ ನಿರಂತರ ಪ್ರಕ್ರಿಯೆಯನ್ನು ಗಮನಿಸುವುದರ ಮೂಲಕ ಅವುಗಳು ಅನೇಕ ಪಾಠಗಳನ್ನು ಕಲಿಯುತ್ತವೆ. ಅದಕ್ಕೊಂದು ಉದಾಹರಣೆ ಈ ವಿಡಿಯೋ. ಹಿಮಕರಡಿ ಸಾಮಾನ್ಯವಾಗಿ ಹಿಮಭರಿತ ಪ್ರದೇಶಗಳಲ್ಲಿ ಕಂಡುಬರುತ್ತವೆ. ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಬಿಳಿ ಹಿಮಕರಡಿಯೊಂದು ಮಂಜುಗಡ್ಡೆಯಿಂದ ಹೆಪ್ಪುಗಟ್ಟಿದ ಸಣ್ಣ ಹೊಳೆಯನ್ನು ತುಂಬಾ ಚುರುಕಾಗಿ ದಾಟುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಹೆಪ್ಪುಗಟ್ಟಿದ ನೀರಿನ ಮೇಲೆ ನೇರವಾಗಿ ನಡೆದರೆ ಅದರಲ್ಲಿ ಮುರಿದು ಬೀಳುವ ಅಪಾಯವಿದೆ, ಆದ್ದರಿಂದ ಅದು ಬುದ್ಧಿವಂತಿಕೆಯಿಂದ ಅದರ ಮೇಲೆ ಮಲಗಿ ಜಾರಿಕೊಂಡು ಹೊಳೆಯನ್ನು ದಾಟಿತು. ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೇಳೆ ಅವರು “ಹಿಮಕರಡಿ ಕಲಿಸಿದ ಜೀವನ ಪಾಠ” ಎಂದು ಶೀರ್ಷಿಕೆ ನೀಡಿದ್ದಾರೆ. ಈ ವೀಡಿಯೋ ನೋಡಿ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, ಕೆಲವರು ಪ್ರಾಣಿಯ ಬುದ್ದಿವಂತಿಕೆಯನ್ನು ಮೆಚ್ಚಿಕೊಂಡರೆ, ಇನ್ನು ಕೆಲವರು ಇದು ವಿಜ್ಞಾನಿ ಕರಡಿ ಎಂದು ತಮಾಷೆಯಾಗಿ ಹೇಳಿದ್ದಾರೆ.

ಸಾಮಾನ್ಯವಾಗಿ ಮಂಜುಗಡ್ಡೆಯ ತೆಳುವಾದ ಪದರದ ಮೇಲೆ ನಿಂತರೆ ಒತ್ತಡವು ಹೆಚ್ಚಾಗಿ ಬಿರುಕು ಬಿಡುತ್ತದೆ. ಪರಿಣಾಮವಾಗಿ ಅದರ ಮೇಲೆ ನಿಲ್ಲುವ ಯಾರೇ ಆಗಲಿ ನೀರಿನಲ್ಲಿ ಮುಳುಗಬೇಕಾಗುತ್ತದೆ. ಇದಲ್ಲದೆ ಈ ನೀರು ತುಂಬಾ ತಂಪಾಗಿರುತ್ತದೆ. ಅದಕ್ಕಾಗಿಯೇ ಅಂತಹ ಹೆಪ್ಪುಗಟ್ಟುವಿಕೆ ಮೇಲೆ ಮಲಗಲು ವಿಜ್ಞಾನ ಸೂಚಿಸುತ್ತದೆ. ಹಾಗೆ ಮಾಡಿದರೆ ನಮ್ಮ ದೇಹದ ಭಾರ ಒಂದೇ ಜಾಗಕ್ಕೆ ಬೀಳುವುದಿಲ್ಲ.

ಮತ್ತಷ್ಟು ವೈರಲ್ ವಿಡಿಯೋ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 6:04 pm, Sun, 16 October 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ