AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಮಕರಡಿಯ ಬುದ್ಧಿವಂತಿಕೆ ನೋಡಿ ಅಚ್ಚರಿಗೊಂಡ ನೆಟ್ಟಿಗರು

ಹೆಪ್ಪುಗಟ್ಟಿದ ಸಣ್ಣ ಹೊಳೆಯನ್ನು ದಾಟಲು ತನ್ನ ಬುದ್ಧಿಯನ್ನು ಉಪಯೋಗಿಸಿದ ಹಿಮಕರಡಿಯ ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

Viral Video: ಹಿಮಕರಡಿಯ ಬುದ್ಧಿವಂತಿಕೆ ನೋಡಿ ಅಚ್ಚರಿಗೊಂಡ ನೆಟ್ಟಿಗರು
ಹಿಮಕರಡಿಯ ಬುದ್ಧಿವಂತಿಕೆ
TV9 Web
| Edited By: Rakesh Nayak Manchi|

Updated on:Oct 16, 2022 | 6:04 PM

Share

ಜನರು ಶಾಲೆ ಅಥವಾ ಕಾಲೇಜಿಗೆ ಹೋಗುವುದರ ಮೂಲಕ ಅನೇಕ ವಿಷಯಗಳನ್ನು ಕಲಿಯುತ್ತಾರೆ. ಪಾಲಕರು, ತಜ್ಞರು ಹೇಳಿದರೆ ಕೆಲವು ವಿಷಯಗಳು ಗೊತ್ತಾಗುತ್ತವೆ. ಆದರೆ ಕಾಡು ಪ್ರಾಣಿಗಳಿಗೆ ಜೀವನ ಪಾಠವನ್ನು ಯಾರು ಕಲಿಸುತ್ತಾರೆ? ಪ್ರಕೃತಿಯೇ ಅವುಗಳ ಶಾಲೆ. ನಿಸರ್ಗದಲ್ಲಿನ ನಿರಂತರ ಪ್ರಕ್ರಿಯೆಯನ್ನು ಗಮನಿಸುವುದರ ಮೂಲಕ ಅವುಗಳು ಅನೇಕ ಪಾಠಗಳನ್ನು ಕಲಿಯುತ್ತವೆ. ಅದಕ್ಕೊಂದು ಉದಾಹರಣೆ ಈ ವಿಡಿಯೋ. ಹಿಮಕರಡಿ ಸಾಮಾನ್ಯವಾಗಿ ಹಿಮಭರಿತ ಪ್ರದೇಶಗಳಲ್ಲಿ ಕಂಡುಬರುತ್ತವೆ. ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಬಿಳಿ ಹಿಮಕರಡಿಯೊಂದು ಮಂಜುಗಡ್ಡೆಯಿಂದ ಹೆಪ್ಪುಗಟ್ಟಿದ ಸಣ್ಣ ಹೊಳೆಯನ್ನು ತುಂಬಾ ಚುರುಕಾಗಿ ದಾಟುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಹೆಪ್ಪುಗಟ್ಟಿದ ನೀರಿನ ಮೇಲೆ ನೇರವಾಗಿ ನಡೆದರೆ ಅದರಲ್ಲಿ ಮುರಿದು ಬೀಳುವ ಅಪಾಯವಿದೆ, ಆದ್ದರಿಂದ ಅದು ಬುದ್ಧಿವಂತಿಕೆಯಿಂದ ಅದರ ಮೇಲೆ ಮಲಗಿ ಜಾರಿಕೊಂಡು ಹೊಳೆಯನ್ನು ದಾಟಿತು. ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೇಳೆ ಅವರು “ಹಿಮಕರಡಿ ಕಲಿಸಿದ ಜೀವನ ಪಾಠ” ಎಂದು ಶೀರ್ಷಿಕೆ ನೀಡಿದ್ದಾರೆ. ಈ ವೀಡಿಯೋ ನೋಡಿ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, ಕೆಲವರು ಪ್ರಾಣಿಯ ಬುದ್ದಿವಂತಿಕೆಯನ್ನು ಮೆಚ್ಚಿಕೊಂಡರೆ, ಇನ್ನು ಕೆಲವರು ಇದು ವಿಜ್ಞಾನಿ ಕರಡಿ ಎಂದು ತಮಾಷೆಯಾಗಿ ಹೇಳಿದ್ದಾರೆ.

ಸಾಮಾನ್ಯವಾಗಿ ಮಂಜುಗಡ್ಡೆಯ ತೆಳುವಾದ ಪದರದ ಮೇಲೆ ನಿಂತರೆ ಒತ್ತಡವು ಹೆಚ್ಚಾಗಿ ಬಿರುಕು ಬಿಡುತ್ತದೆ. ಪರಿಣಾಮವಾಗಿ ಅದರ ಮೇಲೆ ನಿಲ್ಲುವ ಯಾರೇ ಆಗಲಿ ನೀರಿನಲ್ಲಿ ಮುಳುಗಬೇಕಾಗುತ್ತದೆ. ಇದಲ್ಲದೆ ಈ ನೀರು ತುಂಬಾ ತಂಪಾಗಿರುತ್ತದೆ. ಅದಕ್ಕಾಗಿಯೇ ಅಂತಹ ಹೆಪ್ಪುಗಟ್ಟುವಿಕೆ ಮೇಲೆ ಮಲಗಲು ವಿಜ್ಞಾನ ಸೂಚಿಸುತ್ತದೆ. ಹಾಗೆ ಮಾಡಿದರೆ ನಮ್ಮ ದೇಹದ ಭಾರ ಒಂದೇ ಜಾಗಕ್ಕೆ ಬೀಳುವುದಿಲ್ಲ.

ಮತ್ತಷ್ಟು ವೈರಲ್ ವಿಡಿಯೋ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 6:04 pm, Sun, 16 October 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ