Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಮಕರಡಿಯ ಬುದ್ಧಿವಂತಿಕೆ ನೋಡಿ ಅಚ್ಚರಿಗೊಂಡ ನೆಟ್ಟಿಗರು

ಹೆಪ್ಪುಗಟ್ಟಿದ ಸಣ್ಣ ಹೊಳೆಯನ್ನು ದಾಟಲು ತನ್ನ ಬುದ್ಧಿಯನ್ನು ಉಪಯೋಗಿಸಿದ ಹಿಮಕರಡಿಯ ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

Viral Video: ಹಿಮಕರಡಿಯ ಬುದ್ಧಿವಂತಿಕೆ ನೋಡಿ ಅಚ್ಚರಿಗೊಂಡ ನೆಟ್ಟಿಗರು
ಹಿಮಕರಡಿಯ ಬುದ್ಧಿವಂತಿಕೆ
Follow us
TV9 Web
| Updated By: Rakesh Nayak Manchi

Updated on:Oct 16, 2022 | 6:04 PM

ಜನರು ಶಾಲೆ ಅಥವಾ ಕಾಲೇಜಿಗೆ ಹೋಗುವುದರ ಮೂಲಕ ಅನೇಕ ವಿಷಯಗಳನ್ನು ಕಲಿಯುತ್ತಾರೆ. ಪಾಲಕರು, ತಜ್ಞರು ಹೇಳಿದರೆ ಕೆಲವು ವಿಷಯಗಳು ಗೊತ್ತಾಗುತ್ತವೆ. ಆದರೆ ಕಾಡು ಪ್ರಾಣಿಗಳಿಗೆ ಜೀವನ ಪಾಠವನ್ನು ಯಾರು ಕಲಿಸುತ್ತಾರೆ? ಪ್ರಕೃತಿಯೇ ಅವುಗಳ ಶಾಲೆ. ನಿಸರ್ಗದಲ್ಲಿನ ನಿರಂತರ ಪ್ರಕ್ರಿಯೆಯನ್ನು ಗಮನಿಸುವುದರ ಮೂಲಕ ಅವುಗಳು ಅನೇಕ ಪಾಠಗಳನ್ನು ಕಲಿಯುತ್ತವೆ. ಅದಕ್ಕೊಂದು ಉದಾಹರಣೆ ಈ ವಿಡಿಯೋ. ಹಿಮಕರಡಿ ಸಾಮಾನ್ಯವಾಗಿ ಹಿಮಭರಿತ ಪ್ರದೇಶಗಳಲ್ಲಿ ಕಂಡುಬರುತ್ತವೆ. ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಬಿಳಿ ಹಿಮಕರಡಿಯೊಂದು ಮಂಜುಗಡ್ಡೆಯಿಂದ ಹೆಪ್ಪುಗಟ್ಟಿದ ಸಣ್ಣ ಹೊಳೆಯನ್ನು ತುಂಬಾ ಚುರುಕಾಗಿ ದಾಟುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಹೆಪ್ಪುಗಟ್ಟಿದ ನೀರಿನ ಮೇಲೆ ನೇರವಾಗಿ ನಡೆದರೆ ಅದರಲ್ಲಿ ಮುರಿದು ಬೀಳುವ ಅಪಾಯವಿದೆ, ಆದ್ದರಿಂದ ಅದು ಬುದ್ಧಿವಂತಿಕೆಯಿಂದ ಅದರ ಮೇಲೆ ಮಲಗಿ ಜಾರಿಕೊಂಡು ಹೊಳೆಯನ್ನು ದಾಟಿತು. ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೇಳೆ ಅವರು “ಹಿಮಕರಡಿ ಕಲಿಸಿದ ಜೀವನ ಪಾಠ” ಎಂದು ಶೀರ್ಷಿಕೆ ನೀಡಿದ್ದಾರೆ. ಈ ವೀಡಿಯೋ ನೋಡಿ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದು, ಕೆಲವರು ಪ್ರಾಣಿಯ ಬುದ್ದಿವಂತಿಕೆಯನ್ನು ಮೆಚ್ಚಿಕೊಂಡರೆ, ಇನ್ನು ಕೆಲವರು ಇದು ವಿಜ್ಞಾನಿ ಕರಡಿ ಎಂದು ತಮಾಷೆಯಾಗಿ ಹೇಳಿದ್ದಾರೆ.

ಸಾಮಾನ್ಯವಾಗಿ ಮಂಜುಗಡ್ಡೆಯ ತೆಳುವಾದ ಪದರದ ಮೇಲೆ ನಿಂತರೆ ಒತ್ತಡವು ಹೆಚ್ಚಾಗಿ ಬಿರುಕು ಬಿಡುತ್ತದೆ. ಪರಿಣಾಮವಾಗಿ ಅದರ ಮೇಲೆ ನಿಲ್ಲುವ ಯಾರೇ ಆಗಲಿ ನೀರಿನಲ್ಲಿ ಮುಳುಗಬೇಕಾಗುತ್ತದೆ. ಇದಲ್ಲದೆ ಈ ನೀರು ತುಂಬಾ ತಂಪಾಗಿರುತ್ತದೆ. ಅದಕ್ಕಾಗಿಯೇ ಅಂತಹ ಹೆಪ್ಪುಗಟ್ಟುವಿಕೆ ಮೇಲೆ ಮಲಗಲು ವಿಜ್ಞಾನ ಸೂಚಿಸುತ್ತದೆ. ಹಾಗೆ ಮಾಡಿದರೆ ನಮ್ಮ ದೇಹದ ಭಾರ ಒಂದೇ ಜಾಗಕ್ಕೆ ಬೀಳುವುದಿಲ್ಲ.

ಮತ್ತಷ್ಟು ವೈರಲ್ ವಿಡಿಯೋ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 6:04 pm, Sun, 16 October 22

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ