AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆ್ಯಂಬುಲೆನ್ಸ್​ ಶುಲ್ಕ ಭರಿಸಲಾಗದೆ 90 ಕಿ.ಮೀ ಬೈಕ್​ನಲ್ಲೇ ಮಗನ ಶವವನ್ನು ಹೊತ್ತೊಯ್ದ ತಂದೆ!

Shocking Video: ತಿರುಪತಿಯ ಸರ್ಕಾರಿ ಆಸ್ಪತ್ರೆಯಲ್ಲಿ 10 ವರ್ಷದ ಬಾಲಕ ಚಿಕಿತ್ಸೆ ನಂತರ ಸಾವನ್ನಪ್ಪಿದ್ದಾನೆ. ಆತನ ಮೃತದೇಹವನ್ನು ಶವಸಂಸ್ಕಾರಕ್ಕಾಗಿ ತನ್ನ ಗ್ರಾಮಕ್ಕೆ ಸ್ಥಳಾಂತರಿಸಲು ಬಾಲಕನ ತಂದೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗದೆ ಕೊನೆಗೆ ಬೈಕ್​ನಲ್ಲೇ ಹೆಣ ಸಾಗಿಸಿದ್ದಾರೆ.

Viral Video: ಆ್ಯಂಬುಲೆನ್ಸ್​ ಶುಲ್ಕ ಭರಿಸಲಾಗದೆ 90 ಕಿ.ಮೀ ಬೈಕ್​ನಲ್ಲೇ ಮಗನ ಶವವನ್ನು ಹೊತ್ತೊಯ್ದ ತಂದೆ!
ಮಗನ ಹೆಣವನ್ನು ಬೈಕ್​ನಲ್ಲಿ ತೆಗೆದುಕೊಂಡು ಹೋಗುತ್ತಿರುವ ತಂದೆ
TV9 Web
| Updated By: ಸುಷ್ಮಾ ಚಕ್ರೆ|

Updated on: Apr 26, 2022 | 10:03 PM

Share

ತಿರುಪತಿ: ಹೆಗಲ ಮೇಲೆ ಹೊತ್ತು, ಮುದ್ದಾಡಿ ಸಾಕಿದ ಮಗ ಹೆಣವಾಗಿ ಮಲಗಿದ್ದ. ಆತನ ಶವವನ್ನು ಮನೆಗೆ ತೆಗೆದುಕೊಂಡು ಹೋಗಿ ಸಂಸ್ಕಾರ ಮಾಡಲು ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡಿಕೊಡಿ ಎಂದು ಆಸ್ಪತ್ರೆಯ ಸಿಬ್ಬಂದಿ ಬಳಿ ಎಷ್ಟೇ ಬೇಡಿಕೊಂಡರೂ ಆ್ಯಂಬುಲೆನ್ಸ್​ ಬರಲೇ ಇಲ್ಲ. ಕೊನೆಗೆ ಏನು ಮಾಡುವುದೆಂದು ತೋಚದೆ ಆ ವ್ಯಕ್ತಿ ತನ್ನ ಮಗನ ಶವವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿ, ಬೈಕ್​ನಲ್ಲಿ ಇಟ್ಟುಕೊಂಡು 90 ಕಿ.ಮೀ. ದೂರದ ತಮ್ಮ ಮನೆಗೆ ಸಾಗಿಸಿರುವ ಮನಕಲಕುವ ಘಟನೆಯೊಂದು ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.

ತಿರುಪತಿ ಮೂಲದ ವ್ಯಕ್ತಿಯೊಬ್ಬರು ಶ್ರೀ ವೆಂಕಟೇಶ್ವರ ರಾಮನಾರಾಯಣ ರುಯಿಯಾ ಸರ್ಕಾರಿ ಜನರಲ್ (RUIA) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ತನ್ನ ಮಗನ ಶವವನ್ನು ಮನೆಗೆ ತೆಗೆದುಕೊಂಡು ಹೋಗಲು ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡಲು ಆಸ್ಪತ್ರೆ ಸಿಬ್ಬಂದಿಗೆ ಮನವಿ ಮಾಡಿದ್ದರು. ಆದರೆ, ಯಾವುದೇ ಆ್ಯಂಬುಲೆನ್ಸ್​ ವ್ಯವಸ್ಥೆಯಾಗಲಿಲ್ಲ. ಕೊನೆಗೊಂದು ಆಂಬ್ಯುಲೆನ್ಸ್ ಬಂದರೂ ಅದರ ಚಾಲಕ ಆ ಹೆಣವನ್ನು ಸಾಗಿಸಲು ಭಾರೀ ಹಣ ಬೇಕೆಂದು ಬೇಡಿಕೆಯಿಟ್ಟಿದ್ದರಿಂದ ಆ ವ್ಯಕ್ತಿ ಬೈಕ್​ನಲ್ಲಿ ತನ್ನ ಮಗನ ಮೃತದೇಹವನ್ನು ಸಾಗಿಸಿದ್ದಾರೆ.

ತಿರುಪತಿಯ RUIA ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಅನ್ನಮಯ್ಯ ಜಿಲ್ಲೆಯ ಚಿಟ್ವೇಲ್ ಮಂಡಲ್ ಗ್ರಾಮದ 10 ವರ್ಷದ ಬಾಲಕ ಚಿಕಿತ್ಸೆ ನಂತರ ಸಾವನ್ನಪ್ಪಿದ್ದಾನೆ. ಆತನ ಮೃತದೇಹವನ್ನು ಶವಸಂಸ್ಕಾರಕ್ಕಾಗಿ ತನ್ನ ಗ್ರಾಮಕ್ಕೆ ಸ್ಥಳಾಂತರಿಸಲು ಬಾಲಕನ ತಂದೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಪ್ರಯತ್ನಿಸಿದಾಗ, ಆಂಬ್ಯುಲೆನ್ಸ್ ಚಾಲಕ ಮತ್ತು ಕರ್ತವ್ಯದಲ್ಲಿದ್ದ ಆಸ್ಪತ್ರೆ ಸಿಬ್ಬಂದಿ ಆತನಿಂದ ಭಾರೀ ಮೊತ್ತಕ್ಕೆ ಬೇಡಿಕೆಯಿಟ್ಟರು ಎಂದು ಆರೋಪಿಸಲಾಗಿದೆ.

ಆ ವ್ಯಕ್ತಿ ಬಹಳ ಬಡವನಾಗಿದ್ದರಿಂದ ಆಸ್ಪತ್ರೆಯವರು ಕೇಳಿದ ಭಾರೀ ಶುಲ್ಕವನ್ನು ಭರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ, ಮಗನ ಶವವನ್ನು ಬೈಕ್​ನಲ್ಲಿ ಇಟ್ಟುಕೊಂಡು ತಮ್ಮ ಗ್ರಾಮಕ್ಕೆ ಹೋಗಿದ್ದಾರೆ.

ಈ ಘಟನೆಯ ವೀಡಿಯೋವನ್ನು ಹಂಚಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಟ್ವೀಟ್ ಮಾಡಿದ್ದಾರೆ. “ತಿರುಪತಿಯ RUIA ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮುಗ್ಧ ಪುಟ್ಟ ಜೇಸವಾ ಕುಟುಂಬದ ಸ್ಥಿತಿಯನ್ನು ನೋಡಿ ನನಗೆ ಬಹಳ ನೋವುಂಟಾಗಿದೆ. ಅವರ ತಂದೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುವಂತೆ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಮಾಡಿದರು. ಆದರೆ, ಆ್ಯಂಬುಲೆನ್ಸ್​ನವರು ಕೇಳಿದಷ್ಟು ಹಣ ಭರಿಸಲಾಗದೆ ಅವರು ತಮ್ಮ ಮಗನ ಹೆಣವನ್ನು ಬೈಕ್​ನಲ್ಲಿ ಸಾಗಿಸಬೇಕಾಯಿತು ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಆಸ್ಪತ್ರೆಯಲ್ಲಿ ರಾತ್ರಿ ಕರ್ತವ್ಯದಲ್ಲಿದ್ದ ಎಲ್ಲಾ ಸಿಬ್ಬಂದಿ ಮತ್ತು ಸೆಕ್ಯುರಿಟಿಯನ್ನು ಕರೆದು ಈ ವಿಷಯದ ಬಗ್ಗೆ ತನಿಖೆ ನಡೆಸಲಾಗಿದೆ. ಪ್ರತಿಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ಈ ಘಟನೆಯ ಬಗ್ಗೆ ಆಡಳಿತಾರೂಢ ವೈಎಸ್‌ಆರ್‌ಸಿಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ತಿರುಪತಿಯಿಂದ ಸುಮಾರು 90 ಕಿಲೋಮೀಟರ್ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್​ನಲ್ಲಿ ತನ್ನ 10 ವರ್ಷದ ಮಗನ ಮೃತದೇಹವನ್ನು ಹೊತ್ತೊಯ್ಯುವಂತೆ ಮಾಡಿದ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: Viral News: 23 ಲಕ್ಷ ಕೊಟ್ಟು ಅಪರೂಪದ ಕುದುರೆ ಖರೀದಿಸಿದ ವ್ಯಾಪಾರಿ; ಸ್ನಾನ ಮಾಡಿಸಿದಾಗ ಬಯಲಾಯ್ತು ಅಸಲಿ ಸತ್ಯ!

Viral News: ಕೈದಿಯ ಹೆಂಡತಿ ಗರ್ಭಿಣಿಯಾಗಲೆಂದು ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿಗೆ 15 ದಿನಗಳ ಪೆರೋಲ್!

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್