AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲೊಂದು ಬೆಕ್ಕನ್ನು ಬೆಂಚಿಗೆ ಕಟ್ಟಿ ಹಾಕಲಾಗಿದೆ, ಮುಂದೇನಾಯಿತೆಂದು ನೋಡಿ

Cat : ಈ ಬೆಕ್ಕನ್ನು ಸಾಕಿದವನಿಗೆ ಕಠಿಣ ಶಿಕ್ಷೆಯಾಗಬೇಕು. ತಮ್ಮ ರಂಜನೆಗಾಗಿ ಪ್ರಾಣಿಗಳನ್ನು ಹೀಗೆ ಹಿಂಸಿಸಬಾರದು ಎಂದು ನೆಟ್ಟಿಗರು ಆಕ್ರೋಶಗೊಂಡಿದ್ದಾರೆ. ವಿಡಿಯೋ ನೋಡಿ.

ಇಲ್ಲೊಂದು ಬೆಕ್ಕನ್ನು ಬೆಂಚಿಗೆ ಕಟ್ಟಿ ಹಾಕಲಾಗಿದೆ, ಮುಂದೇನಾಯಿತೆಂದು ನೋಡಿ
ಕಟ್ಟಿದ ಬೆಂಚನ್ನೇ ಎಳೆದುಕೊಂಡು ಹೋಗುತ್ತಿರುವ ಬೆಕ್ಕು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Feb 09, 2023 | 3:40 PM

Viral Video : ಪ್ರಾಣಿಗಳು ತಮ್ಮ ಆಟದೊಂದಿಗೆ ತಾವಾಗಿಯೇ ನಮ್ಮನ್ನು ರಂಜಿಸುವುದು ಬೇರೆ. ಆದರೆ ನಮ್ಮ ರಂಜನೆಗೆ ಪ್ರಾಣಿಗಳಿಗೆ ತೊಂದರೆ ಕೊಡುವುದು ಬೇರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಯಾರೋ ಒಬ್ಬಾತ ಈ ಬೆಕ್ಕನ್ನೇನೋ ಸಾಕಿದ್ದಾನೆ. ಆದರೆ ತನ್ನ ತಿಳಿಗೇಡಿತನದಿಂದ ಈ ಬೆಕ್ಕನ್ನು ಬೆಂಚಿಗೆ ಕಟ್ಟಿದ್ಧಾನೆ. ಆಗ ಈ ಬೆಕ್ಕು ಏನು ಮಾಡಬೇಕು? ಅದೇನು ನಾಯಿಯೇ, ಕಟ್ಟಿದಲ್ಲಿ ಇರಲು? ನೋಡಿ ಏನು ಮಾಡಿದೆ.

ಈತ ಕಟ್ಟಿಹಾಕಿರುವುದು ಸಣ್ಣ ಬೆಂಚಲ್ಲ. ಕಟ್ಟಿಗೆಯ ದೊಡ್ಡ ಬೆಂಚು. ದಾರಿಗಾಣದ ಬೆಕ್ಕು ಅದನ್ನೇ ಎಳೆದುಕೊಂಡು ಹೊರಟಿದೆ. ಇದನ್ನು ನೋಡಿದ ನೆಟ್ಟಿಗರು ಇದರ ಪೋಷಕನ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ತನಕ ಈ ವಿಡಿಯೋ ಅನ್ನು 1.7 ಲಕ್ಷ ಜನರು ನೋಡಿದ್ದಾರೆ. ಸಾವಿರಕ್ಕಿಂತಲೂ ಹೆಚ್ಚು ಜನರು ಇಷ್ಪಪಟ್ಟಿದ್ದಾರೆ. 145 ಜನರು ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಹಾಡಹಗಲೇ ಹುಲಿಯೊಂದು ರಸ್ತೆ ದಾಟುತ್ತಿರುವ ವಿಡಿಯೋ ವೈರಲ್

ಇದು ಪ್ರಾಣಿಹಿಂಸೆ ಎಂದು ಅನೇಕರು ಹೇಳಿದ್ದಾರೆ. ಈ ಬೆಕ್ಕಿನ ಪೋಷಕನನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕು ಎಂದಿದ್ದಾರೆ ಕೆಲವರು. ಬೇಗ ಇದರ ಪೋಷಕ ಕಟ್ಟಿದ್ದನ್ನು ಬಿಚ್ಚಬಾರದೆ? ಎಂದು ಅನೇಕರು ಕೇಳಿದ್ದಾರೆ. ಆದರೆ ರೀಲ್​ ಮಾಡಲೆಂದೇ ಹೀಗೆ ಆತ ಮಾಡಿದ್ದರೆ ಏನು ಮಾಡುವುದು ಎಂದು ಮತ್ತೊಂದಿಷ್ಟು ಜನ ಹೇಳಿದ್ದಾರೆ.

ಇದನ್ನೂ ಓದಿ : ನಿನ್ನನ್ನು ಬಿಟ್ಟುಕೊಡಲೊಲ್ಲೇ ಅಕ್ಕಾ; ವೈರಲ್ ಆಗುತ್ತಿರುವ ನಾಯಿಯ ಈ ವಿಡಿಯೋ

ಪ್ರಾಣಿಗಳನ್ನು ಸಾಕಿದ ನಂತರ ಅವುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ನಮ್ಮ ಖುಷಿಗಾಗಿ, ಮಜಾಗಾಗಿ ಅವುಗಳಿಗೆ ತೊಂದರೆ ಕೊಡಬಾರದು. ಈಗಂತೂ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಲೆಂದೇ ಪ್ರಾಣಿಗಳನ್ನು ತಮ್ಮ ಮನಬಂದಂತೆ ಕುಣಿಸುತ್ತಾರೆ. ಆದರೆ ಇದರಿಂದ ಅವುಗಳಿಗೆ, ಖುಷಿ ಸಮಾಧಾನ ಆಗುವುದೆ? ಅವೂ ಜೀವವೇ ತಾನೆ? ಸಾಕುವ ಮೊದಲು ಯೋಚಿಸಿ. ಸಾಕಿದ ನಂತರ ಪ್ರಜ್ಞೆಯಿಂದ ಪೋಷಿಸಿ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:40 pm, Thu, 9 February 23

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!