AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೋಕಲ್ ರೈಲಿನಲ್ಲಿ ಜನರೊಂದಿಗೆ ಕುದುರೆ ಪ್ರಯಾಣಿಸುತ್ತಿರುವ ವಿಡಿಯೋ ವೈರಲ್

ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿರುವ ವಿಲಕ್ಷಣ ವಿಡಿಯೋ ಒಂದರಲ್ಲಿ ಲೋಕಲ್ ರೈಲಿನಲ್ಲಿ ಕುದುರೆಯೊಂದು ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಈ ಘಟನೆಯು ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

Viral Video: ಲೋಕಲ್ ರೈಲಿನಲ್ಲಿ ಜನರೊಂದಿಗೆ ಕುದುರೆ ಪ್ರಯಾಣಿಸುತ್ತಿರುವ ವಿಡಿಯೋ ವೈರಲ್
ರೈಲಿನಲ್ಲಿ ಪ್ರಯಾಣಿಸುತ್ತಿರುವ ಕುದುರೆಯ ವಿಡಿಯೋ ವೈರಲ್
TV9 Web
| Edited By: |

Updated on: Apr 09, 2022 | 2:00 PM

Share

ಚಂಡೀಗಢ (ಏ.9): ಸುಮ್ಮನೆ ಮೊಬೈಲ್ ಹಿಡಿದು ಕೂತರೆ ಅಚ್ಚರಿಗೊಳಿಸುವ ಸಾವಿರಾರು ವಿಡಿಯೋಗಳು ಪ್ಲೇ ಆಗುತ್ತವೆ. ಅದೇ ರೀತಿಯ ವಿಚಿತ್ರವಾದ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗುತ್ತಿದೆ. ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿರುವ ವಿಲಕ್ಷಣ ವಿಡಿಯೋ ಒಂದರಲ್ಲಿ ಲೋಕಲ್ ರೈಲಿನಲ್ಲಿ ಕುದುರೆಯೊಂದು ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಈ ಘಟನೆಯು ಪಶ್ಚಿಮ ಬಂಗಾಳದಲ್ಲಿ (West Bengal) ನಡೆದಿದೆ. ರೈಲಿನಲ್ಲಿ ಕುದುರೆ ಪ್ರಯಾಣಿಸಲು ಸಾಧ್ಯವೇ? ಎಂದು ಅಚ್ಚರಿಪಡಬೇಡಿ. ಅನುಮಾನವಿದ್ದರೆ ನೀವೇ ಒಮ್ಮೆ ವಿಡಿಯೋ ನೋಡಿ.

ಪಶ್ಚಿಮ ಬಂಗಾಳದಲ್ಲಿ ಕ್ಲಿಪ್ ಸೀಲ್ಡಾ-ಡೈಮಂಡ್ ಹಾರ್ಬರ್ ಡೌನ್ ಲೋಕಲ್ ರೈಲಿನಲ್ಲಿ ಈ ಘಟನೆ ನಡೆದಿದೆ. ಈ ವೈರಲ್ ವಿಡಿಯೋದಲ್ಲಿ ಕುದುರೆಯ ಮಾಲೀಕ ಕೂಡ ಕುದುರೆಯೊಂದಿಗೆ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಪಶ್ಚಿಮ ಬಂಗಾಳದಲ್ಲಿ ರೈಲಿನಲ್ಲಿ ಸಣ್ಣ ಪ್ರಾಣಿಗಳು ಪ್ರಯಾಣಿಸುವುದು ಸಾಮಾನ್ಯವಾಗಿದೆ. ಕೋಳಿ, ಕುರಿ, ನಾಯಿ ಮುಂತಾದ ಪ್ರಾಣಿಗಳನ್ನು ಇಲ್ಲಿನ ರೈಲಿನಲ್ಲಿ ಕೊಂಡೊಯ್ಯುವುದು ಸಾಮಾನ್ಯ. ಆದರೆ ದೊಡ್ಡ ಪ್ರಾಣಿಗಳಿಗೆ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನೀಡುವುದಿಲ್ಲ.

ವೈರಲ್‌ ಆಗಿರುವ ವಿಡಿಯೋದಲ್ಲಿರುವ ಕುದುರೆ ಬರೂಯ್‌ಪುರದಲ್ಲಿ ರೇಸ್‌ನಿಂದ ಹಿಂತಿರುಗುತ್ತಿದೆ ಎಂದು ಹೇಳಲಾಗಿದೆ. ಈ ರೈಲಿನ ಸಹ ಪ್ರಯಾಣಿಕರು ರೈಲನ್ನು ಹತ್ತುತ್ತಿದ್ದ ಕುದುರೆ ಮಾಲೀಕರನ್ನು ತಡೆದರು. ಆದರೆ, ಆತ ಅದಕ್ಕೆ ತಲೆಕೆಡಿಸಿಕೊಳ್ಳದೆ ಕುದುರೆಯನ್ನು ರೈಲಿನೊಳಗೆ ಹತ್ತಿಸಿದ್ದಾನೆ.

ರೈಲ್ವೇ ಅಧಿಕಾರಿಗಳು ಕೂಡ ವೈರಲ್ ವಿಡಿಯೋವನ್ನು ನೋಡಿ ಅಚ್ಚರಿಯಾಗಿದ್ದಾರೆ. ಆದರೆ ಅದರ ಸತ್ಯಾಸತ್ಯತೆಯನ್ನು ಇನ್ನೂ ಖಚಿತಪಡಿಸಿಲ್ಲ. “ನಾವು ಈ ವಿಡಿಯೋ ಮತ್ತು ಫೋಟೋವನ್ನು ನೋಡಿದ್ದೇವೆ. ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಪೂರ್ವ ರೈಲ್ವೆಯ PRO ಏಕಲವ್ಯ ಚಕ್ರವರ್ತಿ ಹೇಳಿದ್ದಾರೆ.

ಇದನ್ನೂ ಓದಿ: Viral Video: ದೇವಸ್ಥಾನದ ಒಡವೆ ಕದಿಯಲು ತಾನೇ ಕೊರೆದ ರಂಧ್ರದಲ್ಲಿ ಸಿಕ್ಕಿಹಾಕಿಕೊಂಡ ಕಳ್ಳ; ಆಮೇಲೇನಾಯ್ತು?

Viral Video: ಬಾಯಾರಿದ ಕೋತಿಗೆ ನೀರು ಕುಡಿಸಿದ ಟ್ರಾಫಿಕ್ ಪೊಲೀಸ್; ಹೃದಯಸ್ಪರ್ಶಿ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!