AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೋಕಲ್ ರೈಲಿನಲ್ಲಿ ಜನರೊಂದಿಗೆ ಕುದುರೆ ಪ್ರಯಾಣಿಸುತ್ತಿರುವ ವಿಡಿಯೋ ವೈರಲ್

ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿರುವ ವಿಲಕ್ಷಣ ವಿಡಿಯೋ ಒಂದರಲ್ಲಿ ಲೋಕಲ್ ರೈಲಿನಲ್ಲಿ ಕುದುರೆಯೊಂದು ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಈ ಘಟನೆಯು ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

Viral Video: ಲೋಕಲ್ ರೈಲಿನಲ್ಲಿ ಜನರೊಂದಿಗೆ ಕುದುರೆ ಪ್ರಯಾಣಿಸುತ್ತಿರುವ ವಿಡಿಯೋ ವೈರಲ್
ರೈಲಿನಲ್ಲಿ ಪ್ರಯಾಣಿಸುತ್ತಿರುವ ಕುದುರೆಯ ವಿಡಿಯೋ ವೈರಲ್
TV9 Web
| Edited By: |

Updated on: Apr 09, 2022 | 2:00 PM

Share

ಚಂಡೀಗಢ (ಏ.9): ಸುಮ್ಮನೆ ಮೊಬೈಲ್ ಹಿಡಿದು ಕೂತರೆ ಅಚ್ಚರಿಗೊಳಿಸುವ ಸಾವಿರಾರು ವಿಡಿಯೋಗಳು ಪ್ಲೇ ಆಗುತ್ತವೆ. ಅದೇ ರೀತಿಯ ವಿಚಿತ್ರವಾದ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗುತ್ತಿದೆ. ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿರುವ ವಿಲಕ್ಷಣ ವಿಡಿಯೋ ಒಂದರಲ್ಲಿ ಲೋಕಲ್ ರೈಲಿನಲ್ಲಿ ಕುದುರೆಯೊಂದು ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಈ ಘಟನೆಯು ಪಶ್ಚಿಮ ಬಂಗಾಳದಲ್ಲಿ (West Bengal) ನಡೆದಿದೆ. ರೈಲಿನಲ್ಲಿ ಕುದುರೆ ಪ್ರಯಾಣಿಸಲು ಸಾಧ್ಯವೇ? ಎಂದು ಅಚ್ಚರಿಪಡಬೇಡಿ. ಅನುಮಾನವಿದ್ದರೆ ನೀವೇ ಒಮ್ಮೆ ವಿಡಿಯೋ ನೋಡಿ.

ಪಶ್ಚಿಮ ಬಂಗಾಳದಲ್ಲಿ ಕ್ಲಿಪ್ ಸೀಲ್ಡಾ-ಡೈಮಂಡ್ ಹಾರ್ಬರ್ ಡೌನ್ ಲೋಕಲ್ ರೈಲಿನಲ್ಲಿ ಈ ಘಟನೆ ನಡೆದಿದೆ. ಈ ವೈರಲ್ ವಿಡಿಯೋದಲ್ಲಿ ಕುದುರೆಯ ಮಾಲೀಕ ಕೂಡ ಕುದುರೆಯೊಂದಿಗೆ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಪಶ್ಚಿಮ ಬಂಗಾಳದಲ್ಲಿ ರೈಲಿನಲ್ಲಿ ಸಣ್ಣ ಪ್ರಾಣಿಗಳು ಪ್ರಯಾಣಿಸುವುದು ಸಾಮಾನ್ಯವಾಗಿದೆ. ಕೋಳಿ, ಕುರಿ, ನಾಯಿ ಮುಂತಾದ ಪ್ರಾಣಿಗಳನ್ನು ಇಲ್ಲಿನ ರೈಲಿನಲ್ಲಿ ಕೊಂಡೊಯ್ಯುವುದು ಸಾಮಾನ್ಯ. ಆದರೆ ದೊಡ್ಡ ಪ್ರಾಣಿಗಳಿಗೆ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನೀಡುವುದಿಲ್ಲ.

ವೈರಲ್‌ ಆಗಿರುವ ವಿಡಿಯೋದಲ್ಲಿರುವ ಕುದುರೆ ಬರೂಯ್‌ಪುರದಲ್ಲಿ ರೇಸ್‌ನಿಂದ ಹಿಂತಿರುಗುತ್ತಿದೆ ಎಂದು ಹೇಳಲಾಗಿದೆ. ಈ ರೈಲಿನ ಸಹ ಪ್ರಯಾಣಿಕರು ರೈಲನ್ನು ಹತ್ತುತ್ತಿದ್ದ ಕುದುರೆ ಮಾಲೀಕರನ್ನು ತಡೆದರು. ಆದರೆ, ಆತ ಅದಕ್ಕೆ ತಲೆಕೆಡಿಸಿಕೊಳ್ಳದೆ ಕುದುರೆಯನ್ನು ರೈಲಿನೊಳಗೆ ಹತ್ತಿಸಿದ್ದಾನೆ.

ರೈಲ್ವೇ ಅಧಿಕಾರಿಗಳು ಕೂಡ ವೈರಲ್ ವಿಡಿಯೋವನ್ನು ನೋಡಿ ಅಚ್ಚರಿಯಾಗಿದ್ದಾರೆ. ಆದರೆ ಅದರ ಸತ್ಯಾಸತ್ಯತೆಯನ್ನು ಇನ್ನೂ ಖಚಿತಪಡಿಸಿಲ್ಲ. “ನಾವು ಈ ವಿಡಿಯೋ ಮತ್ತು ಫೋಟೋವನ್ನು ನೋಡಿದ್ದೇವೆ. ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಪೂರ್ವ ರೈಲ್ವೆಯ PRO ಏಕಲವ್ಯ ಚಕ್ರವರ್ತಿ ಹೇಳಿದ್ದಾರೆ.

ಇದನ್ನೂ ಓದಿ: Viral Video: ದೇವಸ್ಥಾನದ ಒಡವೆ ಕದಿಯಲು ತಾನೇ ಕೊರೆದ ರಂಧ್ರದಲ್ಲಿ ಸಿಕ್ಕಿಹಾಕಿಕೊಂಡ ಕಳ್ಳ; ಆಮೇಲೇನಾಯ್ತು?

Viral Video: ಬಾಯಾರಿದ ಕೋತಿಗೆ ನೀರು ಕುಡಿಸಿದ ಟ್ರಾಫಿಕ್ ಪೊಲೀಸ್; ಹೃದಯಸ್ಪರ್ಶಿ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ