Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಾರ್ಮಿಕನೊಬ್ಬ ಅತೀ ಎತ್ತರದ ಜಾಗದಲ್ಲಿ ಕುಳಿತು ಕೆಲಸ ಮಾಡುತ್ತಿರುವ ವಿಡಿಯೋ ವೈರಲ್; ಕೋಪಗೊಂಡ ನೆಟ್ಟಿಗರು

Viral Video : ಈ ಹುಡುಗ ಕುಳಿತಿರುವ ಅಪಾಯಕಾರೀ ಜಾಗ ಗಮನಿಸಿ. ಈ ಕಟ್ಟಡದ ಮಾಲೀಕರು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಹುಡುಗನನ್ನು ಶಾಲೆಗೆ ಕಳಿಸಬೇಕು ಎಂದು ನೆಟ್ಟಿಗರು ಒತ್ತಾಯಿಸುತ್ತಿದ್ಧಾರೆ.

ಬಾಲಕಾರ್ಮಿಕನೊಬ್ಬ ಅತೀ ಎತ್ತರದ ಜಾಗದಲ್ಲಿ ಕುಳಿತು ಕೆಲಸ ಮಾಡುತ್ತಿರುವ ವಿಡಿಯೋ ವೈರಲ್; ಕೋಪಗೊಂಡ ನೆಟ್ಟಿಗರು
ಕಟ್ಟಡ ಕಾರ್ಮಿಕ ಅತ್ಯಂತ ಅಪಾಯಕಾರಿಯಾದ ಜಾಗದಲ್ಲಿ ಕುಳಿತಿರುವುದು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jan 10, 2023 | 2:01 PM

Viral : ಶ್ರಮಿಕ ವರ್ಗ ಯಾವತ್ತೂ ಅಪಾಯಕಾರಿ ಸ್ಥಿತಿಯಲ್ಲಿಯೇ ಕೆಲಸ ಮಾಡುವುದು ಅನಿವಾರ್ಯ. ಇತ್ತೀಚೆಗಷ್ಟೇ ಕೊಲ್ಕತ್ತೆಯ ಬೀದಿಯಲ್ಲಿ ಕೂಲಿಕಾರ್ಮಿಕನೊಬ್ಬ ತಲೆಯ ಮೇಲೆ ಹಲಗೆ, ಕಂಬಿಗಳನ್ನು ಎರಡೂ ಕೈಗಳಿಂದ ಹಿಡಿದು ಸೈಕಲ್​ ಓಡಿಸುತ್ತಿರುವ ವಿಡಿಯೋ ನೋಡಿದ್ದಿರಿ. ಇದೀಗ ಈ ವಿಡಿಯೋ ನೋಡಿ. ಈ ಬಾಲಕ ಅತೀ ಎತ್ತರದ ಕಟ್ಟಡ ಕೆಲಸದಲ್ಲಿ ಮುಳುಗಿದ್ದಾನೆ. ಅವನು ಕುಳಿತುಕೊಂಡಿರುವ ಜಾಗ ಗಮನಿಸಿ. ಒಂದೇ ಕ್ಷಣ ಏಮಾರಿದರೆ ನೇರ ನೆಲಕ್ಕೇ!

ನಮ್ಮಲ್ಲಿ ಎಷ್ಟೋ ಜನರಿಗೆ ಎತ್ತರ ಎಂದರೆ ಭಯ. ಎತ್ತರದ ಕಟ್ಟಡಗಳನ್ನು ಏರಿ ಕೆಳಗೆ ನೋಡಿದರೆ ತಲೆ ತಿರುಗುವ ಅನುಭವವಾಗುತ್ತದೆ. ಅಂಥದ್ದರಲ್ಲಿ ಈ ಹುಡುಗ ಹೀಗೆ ಇಂಥ ಅಪಾಯಕಾರಿ ಸ್ಥಳದಲ್ಲಿ ಕುಳಿತು ಕೆಲಸದಲ್ಲಿ ಮಗ್ನನಾಗಿದ್ದಾನೆ ಎಂದರೆ? ಅನಿವಾರ್ಯತೆ. ಕೆಳಗೆ ಇರುವೆಯಂತೆ ಕಾಣುವ ಜನರನ್ನು ಗಾಡಿಗಳನ್ನು ಗಮನಿಸಿದರೆ ಸಾಕು, ಎತ್ತರವನ್ನು ಊಹಿಸಲು.

ಇದನ್ನೂ ಓದಿ : ವಿಮಾನದಲ್ಲಿ ಸಹಪ್ರಯಾಣಿಕನೊಂದಿಗೆ ಶರ್ಟ್ ಬಿಚ್ಚಿ ಹೊಡೆದಾಟಕ್ಕಿಳಿದ ಯುವಕನ ವಿಡಿಯೋ ವೈರಲ್

ಡಾ. ಶೌಕತ್ ಷಾ ಎನ್ನುವವರು ಈ ವಿಡಿಯೋ ಟ್ವೀಟ್ ಮಾಡಿದ್ಧಾರೆ. ಇವನಿಗೆ ಪ್ರಶಂಸೆ ಬೇಕಿದೆ ಎಂದು ಕ್ಯಾಪ್ಷನ್ ಬೇರೆ ಕೊಟ್ಟಿದ್ದಾರೆ. 11 ಸೆಕೆಂಡುಗಳ ಕ್ಲಿಪ್‌ ನೋಡಿದ ನೆಟ್ಟಿಗರು ಕೋಪಗೊಂಡಿದ್ಧಾರೆ. 5 ಲಕ್ಷ ಜನರು ಈ ವಿಡಿಯೋ ನೋಡಿದ್ಧಾರೆ. ಒಂದು ಹೊತ್ತಿನ ಊಟಕ್ಕಾಗಿ ಈ ಹುಡುಗ ಶಾಲೆಯನ್ನು ಬಿಟ್ಟು ಹೀಗೆ ಅಪಾಯಕರ ಜಾಗದಲ್ಲಿ ಕುಳಿತು ಕೆಲಸ ಮಾಡುವುದು ಸಲ್ಲದು ಎಂದು ಅನೇಕರು ಹೇಳಿದ್ದಾರೆ. ಇಂಥ ಮಕ್ಕಳಿಗೆ ಸುರಕ್ಷತೆಯ ಅಗತ್ಯವೂ ಇದೆ. ಹೀಗೆ ಮಕ್ಕಳನ್ನು ಕೆಲಸಕ್ಕೆ ಪೂರೈಸುವ ಗುತ್ತಿಗೆದಾರರು ಮತ್ತು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲೇಬೇಕು ಎಂದು ಅನೇಕರು ಹೇಳಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:00 pm, Tue, 10 January 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ