AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ವಿಮಾನದಲ್ಲಿ ಮದುವೆ ನಿವೇದನೆ ಮಾಡಿಕೊಂಡ ವ್ಯಕ್ತಿಯ ವಿಡಿಯೋ ವೈರಲ್

Air India : ತನ್ನ ಪಾಡಿಗೆ ತಾನು ಈಕೆ ಕಿಟಕಿ ಬದಿ ಕುಳಿತುಕೊಂಡಿರುತ್ತಾಳೆ. ಮಾಸ್ಕ್ ಹಾಕಿಕೊಂಡು ಬಂದ ವ್ಯಕ್ತಿಯೊಬ್ಬ ಪೋಸ್ಟರ್​ನೊಂದಿಗೆ ಬಂದು ಹೆಲೋ ಮ್ಯಾಡಮ್​ ಎನ್ನುತ್ತಾನೆ. ಮುಂದೆ? ವಿಡಿಯೋ ನೋಡಿ.

ಏರ್ ಇಂಡಿಯಾ ವಿಮಾನದಲ್ಲಿ ಮದುವೆ ನಿವೇದನೆ ಮಾಡಿಕೊಂಡ ವ್ಯಕ್ತಿಯ ವಿಡಿಯೋ ವೈರಲ್
ಏರ್ ಇಂಡಿಯಾದಲ್ಲಿ ಈ ವ್ಯಕ್ತಿ ಮದುವೆ ನಿವೇದನೆ ಮಾಡಿಕೊಂಡ ಕ್ಷಣಗಳು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jan 12, 2023 | 12:08 PM

Viral Video : ಪ್ರೇಮ ನಿವೇದನೆ, ಮದುವೆಯ ನಿವೇದನೆ ಅಥವಾ ಮದುವೆಯನ್ನೇ ವಿಮಾನದಲ್ಲಿಯೂ ಮಾಡಿಕೊಳ್ಳುವ ಸಾಕಷ್ಟು ವಿಡಿಯೋಗಳನ್ನು ಈಗಾಗಲೇ ನೋಡಿದ್ದೀರಿ. ಇದೀಗ ಇದೇ ಸಾಲಿಗೆ ಮತ್ತೊಂದು ವಿಡಿಯೋ ಸೇರುತ್ತಿದೆ. ಏರ್​ ಇಂಡಿಯಾದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಗೆ ಮದುವೆಯ ನಿವೇದನೆ ಮಾಡಿಕೊಂಡಿದ್ದಾನೆ. ಈ ಹೃದಯಸ್ಪರ್ಶಿಯಾದ ವಿಡಿಯೋ ನೋಡಿದ ನೆಟ್ಟಿಗರು ಮಧುರ ಗಳಿಗೆಯಲ್ಲಿ ತೇಲುತ್ತಿದ್ಧಾರೆ.

ಈ ಪೋಸ್ಟ್​ ಅನ್ನು ಲಿಂಕ್ಡ್​ಇನ್​ನಲ್ಲಿ ಹಂಚಿಕೊಳ್ಳಲಾಗಿದೆ. ಮುಂಬೈ ಏರ್ ಇಂಡಿಯಾ ವಿಮಾನದಲ್ಲಿ ಈ ವ್ಯಕ್ತಿ ತನ್ನ ಗೆಳತಿಗೆ ತನ್ನ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ರಮೇಶ್​ ಕೊಟ್ನಾನಾ ಎಂಬುವವರುಈ ವಿಡಿಯೋ ಅನ್ನು ಅಪ್​ಲೋಡ್ ಮಾಡಿದ್ಧಾರೆ. 51 ಸೆಕೆಂಡುಗಳ ಈ ವಿಡಿಯೋ ಮನಸ್ಸನ್ನು ಆರ್ದ್ರಗೊಳಿಸುವಂತಿದೆ. ತನ್ನ ಪಾಡಿಗೆ ತಾನು ವಿಂಡೋ ಸೀಟ್​ನಲ್ಲಿ ಈಕೆ ಕುಳಿತುಕೊಂಡಿರುತ್ತಾಳೆ. ಪೋಸ್ಟರ್​ ಹಿಡಿದುಕೊಂಡು ಬಂದ ಆಕೆಯ ಪ್ರಿಯಕರ ಅವಳ ಗಮನ ಸೆಳೆಯುತ್ತಾನೆ. ಅಚ್ಚರಿಯಿಂದ ಆಕೆ ಅವನೆಡೆ ಎದ್ದು ಬಂದು ಅಪ್ಪಿಕೊಳ್ಳುತ್ತಾಳೆ. ಸಹಪ್ರಯಾಣಿಕರೆಲ್ಲ ಚಪ್ಪಾಳೆ ತಟ್ಟಿ ರಸಮಯ ಘಳಿಗೆಯನ್ನು ಮತ್ತಷ್ಟು ರಂಗೇರಿಸುತ್ತಾರೆ.

ಇದನ್ನೂ ಓದಿ : ಹಿಮನಾಡಿನ ಈ ಬಿಲ್ಲುಗಾರ್ತಿ ಉರಿಬಾಣವನ್ನು ಕಾಳ್ಬೆರಳಿನಿಂದ ಹೊಡೆದಾಗ

ಏರ್ ಇಂಡಿಯಾದ ಸಿಬ್ಬಂದಿಯೊಬ್ಬರು ಈ  ದೃಶ್ಯವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಮದುವೆಗಳು ಆಗ ಸ್ವರ್ಗದಲ್ಲಿ ನಡೆಯುತ್ತಿದ್ವು ಈಗ ವಿಮಾನದಲ್ಲಿ ಎಂದು ನೆಟ್ಟಿಗರು ಈ ಜೋಡಿಗೆ ಹಾರೈಸುತ್ತಿದ್ಧಾರೆ. ಇಂಥ ಸನ್ನಿವೇಶಗಳು ಆಗಾಗ ನಡೆಯುತ್ತಿರಲಿ. ಹೃದಯದಲ್ಲಿ ಪ್ರೇಮ ತುಂಬಿ ತುಳುಕುತ್ತಿರಲಿ ಎಂದು ಅನೇಕರು ಪ್ರತಿಕ್ರಿಯಿಸಿದ್ಧಾರೆ. ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:08 pm, Thu, 12 January 23

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್