AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಟಿಗಾಲಿನಲ್ಲಿ ಒಂಟಿಗೈಯಲ್ಲಿ ನಿತ್ಯವೂ ಬದುಕಿನ ಬಂಡಿ ಎಳೆಯುವ ಈ ದಿವ್ಯಾಂಗ

Specially Abled : ಭಾರತದ ಶ್ರೀಮಂತರು ಇಂಥ ಕಷ್ಟಜೀವಿಗಳತ್ತ ತಿರುಗಿ ನೋಡಬಾರದೆ? ಆಧುನಿಕ ತಂತ್ರಜ್ಞಾನ ಯುಗದಲ್ಲಿ ಇಂದು ಏನೆಲ್ಲವೂ ಸಾಧ್ಯವಿದೆ. ಒಮ್ಮೆ ಈ ವಿಡಿಯೋ ನೋಡಿ. ನಿಮ್ಮ ಸುತ್ತಮುತ್ತಲೂ ಇಂಥ ಅನೇಕರು ಇದ್ಧಾರೆ.

ಒಂಟಿಗಾಲಿನಲ್ಲಿ ಒಂಟಿಗೈಯಲ್ಲಿ ನಿತ್ಯವೂ ಬದುಕಿನ ಬಂಡಿ ಎಳೆಯುವ ಈ ದಿವ್ಯಾಂಗ
ಹೊಟ್ಟೆಪಾಡಿಗಾಗಿ ಒಂಟಿಗಾಲು, ಒಂಟಿಕೈಯಲ್ಲಿ ಸೈಕಲ್ ಎಳೆಯುತ್ತಿರುವ ದಿವ್ಯಾಂಗ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jan 21, 2023 | 2:12 PM

Viral Video : ನಮ್ಮ ನಡುವಿನ ಅನೇಕ ದಿವ್ಯಾಂಗರು (Specially Ablded) ಸ್ವಾಭಿಮಾನಿಗಳು. ಅವರಿಗೆ ದುಡಿದು ತಿನ್ನುವ ಛಲ. ಆದರೆ ಸಮಾಜ ಅವರನ್ನು ಇನ್ನೂ ಅಸಹಾಯಕರಂತೆಯೇ ನಡೆಸಿಕೊಳ್ಳುತ್ತಿದೆ. ಸ್ವಲ್ಪ ನಮ್ಮನ್ನು ಕೈ ಹಿಡಿದೆತ್ತಿದರೆ ಸಾಕು, ನಮಗೂ ಕನಸುಗಳಿಗೂ ಬಲ ಬರುತ್ತದೆ ಎಂಬ ನಿಲುವು ದಿವ್ಯಾಂಗರದು. ಆದರೆ ಏನು ಮಾಡುವುದು, ಸಮಾಜಕ್ಕೆ ಯೋಚಿಸುವ ಪುರಸೊತ್ತಿಲ್ಲ, ಅತೀಕರುಣೆ ತೋರಿಸಿ ಅವರನ್ನು ಮತ್ತಷ್ಟು ಅಸಹಾಯಕತೆಗೆ ತಳ್ಳಿ ಹೊರಟುಬಿಡುತ್ತದೆ. ಆಗ ಅವರು ಹೀಗೆ ತುಸು ಹೆಚ್ಚಿಗೆಯೇ ಕಷ್ಟಕ್ಕೆ ಬೀಳಬೇಕಾಗುತ್ತದೆ. ಮುಂದುವರಿದ ತಂತ್ರಜ್ಞಾನ ಯುಗದಲ್ಲಿ ಉಳ್ಳವರು ಇಂಥವರ ಸಹಾಯಕ್ಕಾಗಿ ಸ್ವಲ್ಪಾದರೂ ಯೋಚಿಸಬೇಕಲ್ಲವೆ?

ದಿವ್ಯಾಂಗ ವ್ಯಕ್ತಿಯೊಬ್ಬರು ಒಂದು ಕೈಯಿಂದ ಸೈಕಲ್​ ಎಳೆಯುತ್ತ ಇನ್ನೊಂದು ಕೈಯಲ್ಲಿ ಊರುಗೋಲು ಹಿಡಿದುಕೊಂಡು ಒಂಟಿಗಾಲಿನಲ್ಲಿ ಸಾಗುತ್ತಿದ್ಧಾರೆ. 11 ಸೆಕೆಂಡುಗಳ ಈ ವಿಡಿಯೋ ಟ್ವೀಟ್ ನೆಟ್ಟಿಗರಲ್ಲಿ ಸ್ಫೂರ್ತಿ ತುಂಬುತ್ತಿದೆ. ಈ ವಿಡಿಯೋ ಅನ್ನು ಈತನಕ ಸುಮಾರು 16,000 ಜನರು ನೋಡಿದ್ದಾರೆ. 10,300 ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನರು ರೀಟ್ವೀಟ್ ಮಾಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ಧಾರೆ.

ಇದನ್ನೂ ಓದಿ : ಗರ್ಭಿಣಿಯಾಗಲು ಸೊಸೆಗೆ ಮೂಳೆಪುಡಿ ಸೇವಿಸಲು ಒತ್ತಾಯಿಸಿದ ಅತ್ತೆ

ಇವರ ಶ್ರಮದ ಕೆಲಸ ಮೆಚ್ಚುವಂಥದ್ದು ಮತ್ತು ಯೋಚಿಸುವಂಥದ್ದು. ಜಗತ್ತಿನ ಶ್ರೀಮಂತ ವ್ಯಕ್ತಿಗಳು ಈ ದೃಶ್ಯವನ್ನು ನೋಡಿ ಪಶ್ಚಾತ್ತಾಪ ಪಡಬೇಕು ಎಂದಿದ್ದಾರೆ ಒಬ್ಬರು. ನಮ್ಮ ನಡುವೆ ಬಹಳ ಜನ ಬದುಕು ಸಾಗಿಸಲು ಹೀಗೆ ದಿನವೂ ಕಷ್ಟಪಡುತ್ತಾರೆ, ಅಂಥವರಿಗೆ ನನ್ನ ಪ್ರಣಾಮಗಳು ಎಂದಿದ್ದಾರೆ ಮತ್ತೊಬ್ಬರು. ​ನನ್ನ ದೇಶವನ್ನು ಆಳುತ್ತಿರುವ ಸರ್ಕಾರಕ್ಕೆ ಈ ಬಡವರು ಯಾವಾಗ ಕಣ್ಣಿಗೆ ಬೀಳುವರೋ? ಎಂದು ಕೇಳಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:10 pm, Sat, 21 January 23

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ