AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ದಾಟುತ್ತಿರುವ ಹುಲಿ ಮರಿಗಳು, ನಿಧಾನವಾಗಿ ವಾಹನ ಚಲಾಯಿಸಿ ಎಂದ ಐಎಫ್ಎಸ್ ಅಧಿಕಾರಿ

ಹುಲಿ ಮತ್ತು ಅದರ ಮರಿಗಳು ರಸ್ತೆ ದಾಟುವ ವೀಡಿಯೊವನ್ನು ಐಎಫ್ಎಸ್ ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ. ಅಲ್ಲದೆ ವನ್ಯಜೀವಿ ಪ್ರಾಬಲ್ಯದ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಜನರಿಗೆ ಅವರು ಮನವಿ ಮಾಡಿದ್ದಾರೆ.

Viral Video: ರಸ್ತೆ ದಾಟುತ್ತಿರುವ ಹುಲಿ ಮರಿಗಳು, ನಿಧಾನವಾಗಿ ವಾಹನ ಚಲಾಯಿಸಿ ಎಂದ ಐಎಫ್ಎಸ್ ಅಧಿಕಾರಿ
ವೈರಲ್ ವೀಡಿಯೊ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 02, 2023 | 4:49 PM

Share

ಸಾಮಾಜಿಕ ಮಾಧ್ಯಮಗಳಲ್ಲಿ ಜನರಿಗೆ ಮನೋರಂಜನೆ ನೀಡುವ ವಿಡಿಯೋಗಳಿಗೆ ಕೊರತೆ ಇಲ್ಲ. ಆದರೆ ಕೆಲವು ವಿಡಿಯೋ ಹಾಗಲ್ಲ ಅವು ನಮಗೆ ಎಚ್ಚರಿಕೆಯ ಸಂದೇಶವಾಗಿರುತ್ತದೆ. ಅಂತಹ ವಿಡಿಯೋ ಒಂದು ಈಗ ವೈರೆಲ್ ಆಗಿದೆ. ನಿಮಗೆ ಗೊತ್ತಿರುವಂತೆ ಇತ್ತೀಚಿನ ದಿನಗಳಲ್ಲಿ, ಮಾನವರು ಮತ್ತು ವನ್ಯಜೀವಿಗಳು ಮುಖಾಮುಖಿಯಾಗಿರುವ ಹಲವಾರು ನಿದರ್ಶನಗಳಿವೆ. ಅದಕ್ಕೆ ಕಾರಣ ಬಹಳಷ್ಟಿದೆ. ಪ್ರಾಣಿಗಳು ಹೋಟೆಲ್​​ ಪ್ರವೇಶಿಸುವುದರಿಂದ ಹಿಡಿದು ರಸ್ತೆ ದಾಟವಂತಹ ಅನೇಕ ನಿದರ್ಶನಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತವೆ. ಇದಕ್ಕೆ ಪೂರಕವೆಂಬಂತೆ ಈ ರೀತಿಯ ಘಟನೆಗಳ ಬಗ್ಗೆ ಜಾಗೃತಿ ಮೂಡಿಸಲು, ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಅಧಿಕಾರಿ ಸುಸಂತ ನಂದಾ ಅವರು ಈ ಬಾರಿ ಪೋಸ್ಟ್​​ವೊಂದನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೊ ವೈರಲ್ ಆಗುತ್ತಿದ್ದು, ಹುಲಿ ರಾತ್ರಿಯಲ್ಲಿ ಅದರ ಮರಿಗಳೊಂದಿಗೆ ರಸ್ತೆ ದಾಟುತ್ತಿದೆ. ಅದರ ಮರಿಗಳು ಒಂದೊಂದಾಗಿ ತಾಯಿಯ ಹಿಂದೆಯೇ ದಾಟುತ್ತಿರುವ ದೃಶ್ಯವನ್ನು ವೀಡಿಯೊ ಮಾಡಿದ್ದಾರೆ. ಮೊದಲು ತಾಯಿ ಹುಲಿ ರಸ್ತೆ ದಾಟುತ್ತದೆ ಅದರ ಹಿಂದಿಯೇ ಇನ್ನೊಂದು ಮರಿ ರಸ್ತೆಯನ್ನು ದಾಟಿದ ಬಳಿಕ ಮತ್ತೊಂದು ಮರಿಯೂ ರಸ್ತೆ ದಾಟಬೇಕು ಎನ್ನುವಷ್ಟರಲ್ಲಿ ದೂರದಲ್ಲಿ ಬರುತ್ತಿರುವ ವಾಹನದ ಲೈಟ್ ಕಣ್ಣಿಗೆ ಬೀಳುತ್ತಿದ್ದಂತೆ ಹೆದರಿದ ಮರಿಗಳು ನೆಗೆಯುತ್ತಾ ರಸ್ತೆ ದಾಟಿ ತನ್ನ ತಾಯಿಯನ್ನು ಸೇರಿಕೊಳ್ಳುತ್ತದೆ.

ಅದೃಷ್ಟವಶಾತ್, ಹುಲಿ ಮತ್ತು ಅದರ ಮರಿ ಸುರಕ್ಷಿತವಾಗಿ ರಸ್ತೆ ದಾಟಿದೆ. ಈ ವಿಡಿಯೋವನ್ನು ಐಎಫ್ ಎಸ್ ಅಧಿಕಾರಿ ಸುಸಂತಾ ನಂದಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅದಕ್ಕೆ ದಯವಿಟ್ಟು ವನ್ಯಜೀವಿಗಳ ಆವಾಸಸ್ಥಾನವನ್ನು ಹಾದುಹೋಗುವಾಗ ನಿಧಾನವಾಗಿ ಮತ್ತು ಅತ್ಯಂತ ಎಚ್ಚರಿಕೆಯಿಂದ ಚಾಲನೆ ಮಾಡಿ ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. ಈ ದೃಶ್ಯ ಮಧ್ಯಪ್ರದೇಶ’ ವಿಂಧ್ಯ ಬೆಟ್ಟದಲ್ಲಿರುವ ಪನ್ನಾ ಟೈಗರ್ ರಿಸರ್ವ್ ನಡುವೆ ಸಾಗುವ ಪನ್ನಾ-ಕಟ್ನಿ ರಸ್ತೆಯಲ್ಲಿ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: Viral Video: ಮೊದಲ ಹೆಜ್ಜೆ ಇಡಲು ಹರಸಾಹಸ ಪಡುತ್ತಿರುವ ಜಿರಾಫೆ

ಬಳಕೆದಾರರು ಈ ಬಗ್ಗೆ ಹಲವಾರು ರೀತಿಯ ಪ್ರತಿಕ್ರಿಯೆಯನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಒಬ್ಬರೂ ಚಾಲಕರು ಈ ರೀತಿಯ ಸಂದರ್ಭಗಳಲ್ಲಿ ಲೈಟ್​​ಗಳನ್ನು ಸ್ವಿಚ್ ಆಫ್ ಮಾಡಿ ವಾಹನದ ಗ್ಲಾಸ್​​ಗಳನ್ನು ಹಾಕಿಕೊಳ್ಳವುದು ಸೂಕ್ತ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು “ಇದು ವನ್ಯಜೀವಿ ಪ್ರದೇಶವೇ? ಎಚ್ಚರಿಕೆ ಸೂಚನ ಫಲಕ ಎಲ್ಲಿದೆ” ಎಂದು ಕೇಳಿದ್ದಾರೆ.

ಈ ವಿಡಿಯೋ ಅನೇಕರು ಶೇರ್ ಮಾಡಿಕೊಂಡಿದ್ದು, ಇದು ಅಪರೂಪದ ದೃಶ್ಯ. ವನ್ಯಜೀವಿ ಸಂರಕ್ಷಣೆಯ ಪ್ರಮುಖ ಸಂದೇಶವಾಗಿದೆ. ಹುಲಿಗಳು ಅಳಿವಿನಂಚಿನಲ್ಲಿರುವ ಪ್ರಾಣಿಗಳು ಅಲ್ಲದೆ ವನ್ಯಜೀವಿಗಳು ಮತ್ತು ಅವುಗಳ ಆವಾಸಸ್ಥಾನಗಳನ್ನು ರಕ್ಷಿಸಬೇಕು ಎಂದು ಬರೆದುಕೊಂಡಿದ್ದಾರೆ. ಒಟ್ಟಾರೆಯಾಗಿ, ಈ ವಿಡಿಯೋವು ಭವಿಷ್ಯದ ಪೀಳಿಗೆಗೆ ವನ್ಯಜೀವಿ ಸಂರಕ್ಷಣೆಯ ಮುಖ್ಯ ಅಗತ್ಯವನ್ನು ನೆನಪಿಸುತ್ತದೆ. ರಾತ್ರಿಯಲ್ಲಿ ವೇಗವಾಗಿ ಚಲಿಸುವ ವಾಹನಗಳಿಂದ ಪ್ರಾಣಿಗಳಿಗೆ ಅಪಘಾತ ಉಂಟಾಗಬಹುದು. ಮಾನವರು, ಪ್ರಾಣಿಗಳ ಮತ್ತು ಅವುಗಳ ನೈಸರ್ಗಿಕ ಆವಾಸಸ್ಥಾನಗಳನ್ನು ಹೆಚ್ಚು ಪ್ರಮುಖ್ಯತೆ ನೀಡಿದಾಗ, ಅಪಾಯವನ್ನು ತಪ್ಪಿಸಬಹುದು.

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ