AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ  ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Jul 18, 2024 | 10:57 AM

Share

ಮಳೆಗಾಲದಲ್ಲಿ ಹುಳು, ಹಾವು ಮನೆಗೆ ಬರುವುದು ಸರ್ವೇ ಸಾಮಾನ್ಯ ಸಂಗತಿ. ಮಳೆ ಮತ್ತು ಪ್ರವಾಹದಿಂದಾಗಿ ಹಾವುಗಳು ಹೆಚ್ಚಾಗಿ ಮನೆಗಳಿಗೆ ನುಗ್ಗುತ್ತವೆ. ಆದ್ದರಿಂದಲೇ ಮಳೆಗಾಲದಲ್ಲಿ ಶೂ, ಹೆಲ್ಮೆಟ್​​​​ ಮತ್ತು ಬಟ್ಟೆಗಳನ್ನು ಧರಿಸುವ ಮೊದಲು ಒಂದು ಬಾರಿ ಸರಿಯಾಗಿ ಪರೀಕ್ಷಿಸಿ ಧರಿಸುವುದು ತುಂಬಾ ಅಗತ್ಯ. ಇದೀಗ ವ್ಯಕ್ತಿಯೊಬ್ಬ ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ನಾಗರ ಹಾವೊಂದು ಹೆಡೆ ಎತ್ತಿ ನಿಂತ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ.

sarpmitra_neerajprajapat ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ಜುಲೈ 13ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ 5 ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. 792,439 ನೆಟ್ಟಿಗರು ವಿಡಿಯೋಗೆ ಲೈಕ್ಸ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪರಸ್ಪರ ಅನ್​ಫಾಲೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Thu, 18 July 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್