AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Money Rain: ಬೀದಿಯಲ್ಲಿ 500 ರೂ ನೋಟುಗಳ ಸುರಿಮಳೆ; ಮುಗಿಬಿದ್ದ ಜನರು: ವೈರಲ್ ವಿಡಿಯೋ

Viral Video From Gujarat: ಗುಜರಾತ್​ನ ಮೆಹಸಾನ ಜಿಲ್ಲೆಯ ಗ್ರಾಮವೊಂದರಲ್ಲಿ ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಮಾಜಿ ಗ್ರಾ.ಪಂ. ಅಧ್ಯಕ್ಷನೊಬ್ಬ ಮನೆ ಮೇಲಿಂದ ನೋಟುಗಳನ್ನು ಕೆಳಗೆ ಎರಚಿದ್ದಾನೆ. ಅದನ್ನು ಬಾಚಿಕೊಳ್ಳಲು ಜನರು ಮುಗಿಬಿದ್ದ ದೃಶ್ಯದ ವಿಡಿಯೋ ವೈರಲ್ ಆಗಿದೆ.

Money Rain: ಬೀದಿಯಲ್ಲಿ 500 ರೂ ನೋಟುಗಳ ಸುರಿಮಳೆ; ಮುಗಿಬಿದ್ದ ಜನರು: ವೈರಲ್ ವಿಡಿಯೋ
ಗುಜರಾತ್​ನಲ್ಲಿ ಮನೆ ಮೇಲಿಂದ 500 ರೂ ನೋಟುಗಳನ್ನು ಸುರಿದ ವ್ಯಕ್ತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 19, 2023 | 12:56 PM

Share

ಅಹ್ಮದಾಬಾದ್: ಚುನಾವಣೆಯ ವೇಳೆ ರಾಜಕಾರಣಿಗಳು ಜನರ ಕೈಗೆ ನೋಟುಗಳ ಕಂತೆ ಕೊಡೋದನ್ನು ನೋಡಿದ್ದೇವೆ. ಬಾರ್ ಡ್ಯಾನ್ಸರುಗಳಿಗೆ ನೋಟುಗಳನ್ನು ಎರಚುವುದನ್ನು ಕಾಣುತ್ತೇವೆ. ಆದರೆ, ಗುಜರಾತ್​ನಲ್ಲೊಬ್ಬ ವ್ಯಕ್ತಿ ಮನೆ ಮೇಲಿಂದ ನೋಟುಗಳನ್ನು ಕೆಳಗೆ ಸುರಿದ ಘಟನೆ (Money Thrown Incident) ನಡೆದಿದೆ. ಗುಜರಾತ್​ನ ಮೆಹಸಾನ ಜಿಲ್ಲೆ ಕೇಕ್ರಿ ತಾಲೂಕಿನ ಅಗೋಲ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತನ್ನ ಸಂಬಂಧಿಯೊಬ್ಬನ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಮನೆಯ ಮೇಲಿಂದ ನೋಟುಗಳನ್ನು ಕೆಳಗೆ ಸುರಿದ ವ್ಯಕ್ತಿ ಮಾಜಿ ಗ್ರಾ.ಪಂ. ಅಧ್ಯಕ್ಷ (Sarpanch) ಕರೀಮ್ ಯಾದವ್ ಎನ್ನಲಾಗಿದೆ.

ರಜಾಕ್​ನ ಮದುವೆ ಮೆರವಣಿಗೆ ಗ್ರಾಮದ ಬೀದಿಗಳಲ್ಲಿ ಸಾಗುತ್ತಿರುವಂತೆಯೇ, ಕರೀಮ್ ಯಾದವ್ ಮತ್ತವರ ಕೆಲ ಕುಟುಂಬ ಸದಸ್ಯರು ಮನೆ ಮೇಲಿಂದ 500 ರೂ ಮುಖಬೆಲೆಯ ನೂರಾರು ನೋಟುಗಳನ್ನು ಎರಚಿದ್ದಾರೆ. ಕೆಳಗಿದ್ದ ನೂರಾರು ಜನರು ಈ ನೋಟುಗಳನ್ನು ಬಾಚಿಕೊಳ್ಳಲು ಎಡತಾಕುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಹೈದರಾಬಾದ್​ನಲ್ಲೂ….

ಇಂಥದ್ದೇ ರೀತಿಯ ಒಂದು ಘಟನೆ ಕಳೆದ ವರ್ಷ ಹೈದರಾಬಾದ್​ನಲ್ಲಿ ನಡೆದಿದ್ದು ಸುದ್ದಿಯಾಗಿತ್ತು. ಅಲ್ಲೂ ಕೂಡ ವಿವಾಹ ಕಾರ್ಯಕ್ರಮದ ವೇಳೆ ವ್ಯಕ್ತಿಯೊಬ್ಬ 500 ರೂ ಮುಖಬೆಲೆಯ ನೋಟುಗಳನ್ನು ರಸ್ತೆಯಲ್ಲಿ ಎರಚಿದ್ದ. ಹೈದರಾಬಾದ್​ನ ಚಾರ್ಮಿನಾರ್ ಬಳಿ ಮದುವೆ ಮೆರವಣಿಗೆ ಸಾಗುತ್ತಿದ್ದ ವೇಳೆ ಎರಡು ಕಡೆ ಈ ವ್ಯಕ್ತಿ ನೂರಾರು ನೋಟುಗಳನ್ನು, ಕೆಲ ಕಂತೆಕಂತೆ ನೋಟುಗಳನ್ನೂ ಸುರಿದ್ದ. ಸ್ಥಳೀಯ ಜನರು ಈ ನೋಟುಗಳನ್ನು ಆಯ್ದುಕೊಳ್ಳಲು ಮುಗಿಬೀಳುತ್ತಿದ್ದ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಆಗಿತ್ತು.

ಇದನ್ನೂ ಓದಿ: ರಸ್ತೆಯಲ್ಲಿ ನಿಂತು ಶಿವನ ಭಕ್ತರಿಗೆ ಬಿಯರ್ ಬಾಟಲಿಗಳನ್ನು ಹಂಚುತ್ತಿದ್ದ ಯುವಕನ ಬಂಧನ

ಬೆಂಗಳೂರು ಫ್ಲೈ ಓವರ್ ಘಟನೆ:

ಕಳೆದ ತಿಂಗಳು ಬೆಂಗಳೂರಿನ ಕೆಆರ್ ಮಾರ್ಕೆಟ್​ನ ಫ್ಲೈಓವರ್​ನಲ್ಲಿ ವ್ಯಕ್ತಿಯೊಬ್ಬ 10 ರೂ ಮುಖಬೆಲೆಯ 300ಕ್ಕೂ ಹೆಚ್ಚು ನೋಟುಗಳನ್ನು ಕೆಳಗೆ ಎರಚಿದ್ದು ಗಮನ ಸೆಳೆದಿತ್ತು. ಆ ವ್ಯಕ್ತಿ ಮಾನಸಿಕ ಅಸ್ವಸ್ಥನೆಂದು ಮೊದಲಿಗೆ ಅನುಮಾನ ಪಡಲಾಗಿತ್ತು. ಆದರೆ, ತನಿಖೆ ನಡೆಸಿದಾಗ, ಆ ವ್ಯಕ್ತಿ ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯಾಗಿದ್ದು, ಪ್ರಚಾರಕ್ಕಾಗಿ ಈ ಕೆಲಸ ಮಾಡಿದ್ದು ತಿಳಿದುಬಂದಿತ್ತು. ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಹೆಚ್ಚಿನ ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ರಾಷ್ಟ್ರೀ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್