AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಹ ಪ್ರಯಾಣಿಕರ ಮೈ ಮೇಲೆ ಬೀಳುತ್ತಾ ರೀಲ್ಸ್​​ ಮಾಡಿದ ಯುವತಿ; ವಿಡಿಯೋ ವೈರಲ್​​​

ವಿಚಿತ್ರವಾಗಿ ನೃತ್ಯ ಮಾಡುತ್ತಾ, ಸಹ ಪ್ರಯಾಣಿಕರ ಮೈ ಮೇಲೆ ಬೀಳುತ್ತಾ ಯುವತಿಯೊಬ್ಬಳು ರೈಲ್ವೇ ನಿಲ್ದಾಣದಲ್ಲಿ ಡ್ಯಾನ್ಸ್​ ಮಾಡಿದ್ದಾಳೆ. ಇನ್ಸ್ಟಾಗ್ರಾಮ್​​​ ರೀಲ್​ಗಾಗಿ ಯುವತಿ ಈ ರೀತಿ ಮಾಡಿದ್ದು, ಈಕೆಯ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ" ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

Viral Video: ಸಹ ಪ್ರಯಾಣಿಕರ ಮೈ ಮೇಲೆ ಬೀಳುತ್ತಾ ರೀಲ್ಸ್​​ ಮಾಡಿದ ಯುವತಿ; ವಿಡಿಯೋ ವೈರಲ್​​​
ಅಕ್ಷತಾ ವರ್ಕಾಡಿ
|

Updated on: Jul 10, 2024 | 6:14 PM

Share

ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹುಚ್ಚು ಸಾಹಸ ಮಾಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಬಿಟ್ಟಿದೆ. ಇದೀಗ ಇಲ್ಲೊಬ್ಬಳೂ ಯುವತಿ ರೈಲು ನಿಲ್ದಾಣದಲ್ಲಿ ಮೈಯಲ್ಲಿ ದೇವರು ಬಂದಂತೆ ವಿಚಿತ್ರವಾಗಿ ನಟಿಸಿದ್ದು, ಪಕ್ಕದಲ್ಲಿದ್ದ ಸಹ ಪ್ರಯಾಣಿಕರ ಮೇಲೆ ಬಿದ್ದಿದ್ದಾಳೆ. ಯುವತಿ ವಿಚಿತ್ರ ವರ್ತನೆಯನ್ನು ಕಂಡು ಕೋಪಗೊಂಡ ಮಹಿಳೆ ಅಲ್ಲಿಯೇ ಆಕೆಯನ್ನು ಥಳಿಸಲು ಆರಂಭಿಸಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

seemakanojiya87 ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಜುಲೈ 06ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ ನಾಲ್ಕು ದಿನದಲ್ಲಿ 1 ಮಿಲಿಯನ್​​​ ಅಂದರೆ 10 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಯುವತಿ ಅವತಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್​ ವಿಡಿಯೊ ಇಲ್ಲಿದೆ ನೋಡಿ:

ಇದನ್ನೂ ಓದಿ: Joseph Radhik: ಅಂಬಾನಿ ಮಗನ ಮದುವೆಯ ಫೋಟೋಗ್ರಾಫರ್ ಯಾರು ಗೊತ್ತಾ? ಅವರು ಪಡೆಯುವ ಸಂಭಾವನೆ ಎಷ್ಟು?

ವೈರಲ್​​ ಆಗಿರುವ ವಿಡಿಯೋದಲ್ಲಿ ಯುವತಿ ವಿಚಿತ್ರವಾಗಿ ನೃತ್ಯ ಮಾಡುತ್ತಾ, ಸಹ ಪ್ರಯಾಣಿಕರ ಮೈ ಮೇಲೆ ಬೀಳುತ್ತಿರುವುದನ್ನು ಕಾಣಬಹುದು. ಕೋಪಗೊಂಡ ಮಹಿಳೆಯೊಬ್ಬಳು ರೈಲು ನಿಲ್ದಾಣದಲ್ಲೇ ಯುವತಿಯನ್ನು ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಜೊತೆಗೆ ವಿಡಿಯೋ ಕಂಡು ” ಸಾರ್ವಜನಿಕ ಪ್ರದೇಶದಲ್ಲಿ ವಿಚಿತ್ರ ವರ್ತನಗೈದ ಯುವತಿಯ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ” ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ