AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ

Indian Soldier : ಇಂಥ ಚಳಿಯಲ್ಲಿ ನಾವೆಲ್ಲ ಬೆಚ್ಚಗೆ ಮನೆಯಲ್ಲಿ ಕುಳಿತಿದ್ದೇವೆಂದರೆ ಗಡಿ ಕಾಯುತ್ತಿರುವ ನಮ್ಮ ಸೈನಿಕರೇ ಕಾರಣ. ಈಗವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಇಲ್ಲಿರುವ ವಿಡಿಯೋ ಗಮನಿಸಿ.

ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ
ಹಿಮದೊಳಗೆ ದಾರಿ ಮಾಡಿಕೊಂಡು ನಡೆಯುತ್ತಿರುವ ಯೋಧ
TV9 Web
| Edited By: |

Updated on:Dec 29, 2022 | 9:29 AM

Share

Viral Video : ಭಾರತೀಯ ಸೇನಾ ಯೋಧರ ಸೇವಾನಿಷ್ಠೆ, ಧೈರ್ಯ, ಸಾಹಸ, ತ್ಯಾಗ ಮತ್ತು ಸಮಯಪ್ರಜ್ಞೆಯನ್ನು ಸಾರುವ ವಿಡಿಯೋಗಳನ್ನು ಆಗಾಗ ನೋಡುತ್ತಲೇ ಇರುತ್ತೀರಿ. ಊಹೆಗೂ ನಿಲುಕಲಾರದಂಥ ಜೀವನಶೈಲಿ ಮತ್ತು ಕಾರ್ಯವಿಧಾನ ಅವರದ್ದಾಗಿರುತ್ತದೆ. ಹಾಗಾಗಿ ಅವರು ಎಂದಿಗೂ ವಿಶೇಷವೇ. ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮೇಜರ್ ಜನರಲ್​ ರಾಜು ಚೌಹಾಣ ಟ್ವೀಟ್ ಮಾಡಿದ್ದಾರೆ.

ಮೊಣಕಾಲಿನತನಕವೂ ದಟ್ಟವಾದ ಹಿಮ ಆವರಿಸಿದೆ. ಯೋಧ ರೈಫಲ್​ ಮೂಲಕ ದಾರಿ ಮಾಡಿಕೊಂಡು ನಡೆಯುತ್ತಿದ್ದಾರೆ. ಹೀಗೆ ದಾರಿ ಕ್ರಮಿಸುತ್ತಿರುವ ಖುಷಿಯಲ್ಲಿ ಅವರ ಮುಖದ ಮೇಲೆ ನಗೆ ಅರಳುವುದನ್ನು ಗಮನಿಸಬಹುದು. ಡಿಸೆಂಬರ್ 25ರಂದು ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 8,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನ ರೀಟ್ವೀಟ್ ಮಾಡಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral Video : ಉಕ್ರೇನಿಯನ್ ಯೋಧ ಮತ್ತವನ ಗೆಳತಿಯ ಈ ಅಪೂರ್ವ ಕ್ಷಣಗಳು

ನಿಮ್ಮ ತಾಯಿಗೆ ನೀವು ಸೇವೆ ಸಲ್ಲಿಸುತ್ತಿರುವಾಗ ನಿಮ್ಮ ಮುಖದಲ್ಲಿ ನಗು ಪ್ರಜ್ವಲಿಸುತ್ತದೆ  ಎಂದಿದ್ದಾರೆ ನೆಟ್ಟಿಗರೊಬ್ಬರು. ಈ ಯೋಧರ ಜೀವನಶೈಲಿ ಎಷ್ಟೊಂದು ಕಠಿಣ ಮತ್ತು ಸವಾಲಿನಿಂದ ಕೂಡಿದೆ, ಅವರಿಗೆ ಸೆಲ್ಯೂಟ್​ ಎಂದಿದ್ದಾರೆ ಮತ್ತೊಬ್ಬರು. ಮಿಲಿಯನ್​ ಸೆಲ್ಯೂಟ್​, ನಿಮಗೆ ನಾವು ಶಾಶ್ವತವಾಗಿ ಋಣಿ ಎಂದಿದ್ದಾರೆ ಮಗದೊಬ್ಬರು. ಇಂಥ ಕಠಿಣ ಸಂದರ್ಭದಲ್ಲಿಯೂ ನಗು ಬೇರೆ! ಅಬ್ಬಾ ಎಂಥ ಧೈರ್ಯಶಾಲಿ ಎಂದು ಇನ್ನೊಬ್ಬರು ಹೇಳಿದ್ದಾರೆ. ನಿಮ್ಮ ಈ ಧೈರ್ಯಸಾಹಸ ಮನೋಭಾವದ ಫಲವಾಗಿಯೇ ನಾವು ದೇಶದಲ್ಲಿ ನೆಮ್ಮದಿಯಿಂದ ನಿದ್ರಿಸುತ್ತಿದ್ದೇವೆ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:29 am, Thu, 29 December 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ