AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ

Indian Soldier : ಇಂಥ ಚಳಿಯಲ್ಲಿ ನಾವೆಲ್ಲ ಬೆಚ್ಚಗೆ ಮನೆಯಲ್ಲಿ ಕುಳಿತಿದ್ದೇವೆಂದರೆ ಗಡಿ ಕಾಯುತ್ತಿರುವ ನಮ್ಮ ಸೈನಿಕರೇ ಕಾರಣ. ಈಗವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಇಲ್ಲಿರುವ ವಿಡಿಯೋ ಗಮನಿಸಿ.

ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ
ಹಿಮದೊಳಗೆ ದಾರಿ ಮಾಡಿಕೊಂಡು ನಡೆಯುತ್ತಿರುವ ಯೋಧ
TV9 Web
| Updated By: ಶ್ರೀದೇವಿ ಕಳಸದ|

Updated on:Dec 29, 2022 | 9:29 AM

Share

Viral Video : ಭಾರತೀಯ ಸೇನಾ ಯೋಧರ ಸೇವಾನಿಷ್ಠೆ, ಧೈರ್ಯ, ಸಾಹಸ, ತ್ಯಾಗ ಮತ್ತು ಸಮಯಪ್ರಜ್ಞೆಯನ್ನು ಸಾರುವ ವಿಡಿಯೋಗಳನ್ನು ಆಗಾಗ ನೋಡುತ್ತಲೇ ಇರುತ್ತೀರಿ. ಊಹೆಗೂ ನಿಲುಕಲಾರದಂಥ ಜೀವನಶೈಲಿ ಮತ್ತು ಕಾರ್ಯವಿಧಾನ ಅವರದ್ದಾಗಿರುತ್ತದೆ. ಹಾಗಾಗಿ ಅವರು ಎಂದಿಗೂ ವಿಶೇಷವೇ. ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮೇಜರ್ ಜನರಲ್​ ರಾಜು ಚೌಹಾಣ ಟ್ವೀಟ್ ಮಾಡಿದ್ದಾರೆ.

ಮೊಣಕಾಲಿನತನಕವೂ ದಟ್ಟವಾದ ಹಿಮ ಆವರಿಸಿದೆ. ಯೋಧ ರೈಫಲ್​ ಮೂಲಕ ದಾರಿ ಮಾಡಿಕೊಂಡು ನಡೆಯುತ್ತಿದ್ದಾರೆ. ಹೀಗೆ ದಾರಿ ಕ್ರಮಿಸುತ್ತಿರುವ ಖುಷಿಯಲ್ಲಿ ಅವರ ಮುಖದ ಮೇಲೆ ನಗೆ ಅರಳುವುದನ್ನು ಗಮನಿಸಬಹುದು. ಡಿಸೆಂಬರ್ 25ರಂದು ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 8,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನ ರೀಟ್ವೀಟ್ ಮಾಡಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral Video : ಉಕ್ರೇನಿಯನ್ ಯೋಧ ಮತ್ತವನ ಗೆಳತಿಯ ಈ ಅಪೂರ್ವ ಕ್ಷಣಗಳು

ನಿಮ್ಮ ತಾಯಿಗೆ ನೀವು ಸೇವೆ ಸಲ್ಲಿಸುತ್ತಿರುವಾಗ ನಿಮ್ಮ ಮುಖದಲ್ಲಿ ನಗು ಪ್ರಜ್ವಲಿಸುತ್ತದೆ  ಎಂದಿದ್ದಾರೆ ನೆಟ್ಟಿಗರೊಬ್ಬರು. ಈ ಯೋಧರ ಜೀವನಶೈಲಿ ಎಷ್ಟೊಂದು ಕಠಿಣ ಮತ್ತು ಸವಾಲಿನಿಂದ ಕೂಡಿದೆ, ಅವರಿಗೆ ಸೆಲ್ಯೂಟ್​ ಎಂದಿದ್ದಾರೆ ಮತ್ತೊಬ್ಬರು. ಮಿಲಿಯನ್​ ಸೆಲ್ಯೂಟ್​, ನಿಮಗೆ ನಾವು ಶಾಶ್ವತವಾಗಿ ಋಣಿ ಎಂದಿದ್ದಾರೆ ಮಗದೊಬ್ಬರು. ಇಂಥ ಕಠಿಣ ಸಂದರ್ಭದಲ್ಲಿಯೂ ನಗು ಬೇರೆ! ಅಬ್ಬಾ ಎಂಥ ಧೈರ್ಯಶಾಲಿ ಎಂದು ಇನ್ನೊಬ್ಬರು ಹೇಳಿದ್ದಾರೆ. ನಿಮ್ಮ ಈ ಧೈರ್ಯಸಾಹಸ ಮನೋಭಾವದ ಫಲವಾಗಿಯೇ ನಾವು ದೇಶದಲ್ಲಿ ನೆಮ್ಮದಿಯಿಂದ ನಿದ್ರಿಸುತ್ತಿದ್ದೇವೆ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:29 am, Thu, 29 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ