AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ

Indian Soldier : ಇಂಥ ಚಳಿಯಲ್ಲಿ ನಾವೆಲ್ಲ ಬೆಚ್ಚಗೆ ಮನೆಯಲ್ಲಿ ಕುಳಿತಿದ್ದೇವೆಂದರೆ ಗಡಿ ಕಾಯುತ್ತಿರುವ ನಮ್ಮ ಸೈನಿಕರೇ ಕಾರಣ. ಈಗವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಇಲ್ಲಿರುವ ವಿಡಿಯೋ ಗಮನಿಸಿ.

ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ
ಹಿಮದೊಳಗೆ ದಾರಿ ಮಾಡಿಕೊಂಡು ನಡೆಯುತ್ತಿರುವ ಯೋಧ
TV9 Web
| Edited By: ಶ್ರೀದೇವಿ ಕಳಸದ|

Updated on:Dec 29, 2022 | 9:29 AM

Share

Viral Video : ಭಾರತೀಯ ಸೇನಾ ಯೋಧರ ಸೇವಾನಿಷ್ಠೆ, ಧೈರ್ಯ, ಸಾಹಸ, ತ್ಯಾಗ ಮತ್ತು ಸಮಯಪ್ರಜ್ಞೆಯನ್ನು ಸಾರುವ ವಿಡಿಯೋಗಳನ್ನು ಆಗಾಗ ನೋಡುತ್ತಲೇ ಇರುತ್ತೀರಿ. ಊಹೆಗೂ ನಿಲುಕಲಾರದಂಥ ಜೀವನಶೈಲಿ ಮತ್ತು ಕಾರ್ಯವಿಧಾನ ಅವರದ್ದಾಗಿರುತ್ತದೆ. ಹಾಗಾಗಿ ಅವರು ಎಂದಿಗೂ ವಿಶೇಷವೇ. ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮೇಜರ್ ಜನರಲ್​ ರಾಜು ಚೌಹಾಣ ಟ್ವೀಟ್ ಮಾಡಿದ್ದಾರೆ.

ಮೊಣಕಾಲಿನತನಕವೂ ದಟ್ಟವಾದ ಹಿಮ ಆವರಿಸಿದೆ. ಯೋಧ ರೈಫಲ್​ ಮೂಲಕ ದಾರಿ ಮಾಡಿಕೊಂಡು ನಡೆಯುತ್ತಿದ್ದಾರೆ. ಹೀಗೆ ದಾರಿ ಕ್ರಮಿಸುತ್ತಿರುವ ಖುಷಿಯಲ್ಲಿ ಅವರ ಮುಖದ ಮೇಲೆ ನಗೆ ಅರಳುವುದನ್ನು ಗಮನಿಸಬಹುದು. ಡಿಸೆಂಬರ್ 25ರಂದು ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 8,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನ ರೀಟ್ವೀಟ್ ಮಾಡಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral Video : ಉಕ್ರೇನಿಯನ್ ಯೋಧ ಮತ್ತವನ ಗೆಳತಿಯ ಈ ಅಪೂರ್ವ ಕ್ಷಣಗಳು

ನಿಮ್ಮ ತಾಯಿಗೆ ನೀವು ಸೇವೆ ಸಲ್ಲಿಸುತ್ತಿರುವಾಗ ನಿಮ್ಮ ಮುಖದಲ್ಲಿ ನಗು ಪ್ರಜ್ವಲಿಸುತ್ತದೆ  ಎಂದಿದ್ದಾರೆ ನೆಟ್ಟಿಗರೊಬ್ಬರು. ಈ ಯೋಧರ ಜೀವನಶೈಲಿ ಎಷ್ಟೊಂದು ಕಠಿಣ ಮತ್ತು ಸವಾಲಿನಿಂದ ಕೂಡಿದೆ, ಅವರಿಗೆ ಸೆಲ್ಯೂಟ್​ ಎಂದಿದ್ದಾರೆ ಮತ್ತೊಬ್ಬರು. ಮಿಲಿಯನ್​ ಸೆಲ್ಯೂಟ್​, ನಿಮಗೆ ನಾವು ಶಾಶ್ವತವಾಗಿ ಋಣಿ ಎಂದಿದ್ದಾರೆ ಮಗದೊಬ್ಬರು. ಇಂಥ ಕಠಿಣ ಸಂದರ್ಭದಲ್ಲಿಯೂ ನಗು ಬೇರೆ! ಅಬ್ಬಾ ಎಂಥ ಧೈರ್ಯಶಾಲಿ ಎಂದು ಇನ್ನೊಬ್ಬರು ಹೇಳಿದ್ದಾರೆ. ನಿಮ್ಮ ಈ ಧೈರ್ಯಸಾಹಸ ಮನೋಭಾವದ ಫಲವಾಗಿಯೇ ನಾವು ದೇಶದಲ್ಲಿ ನೆಮ್ಮದಿಯಿಂದ ನಿದ್ರಿಸುತ್ತಿದ್ದೇವೆ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:29 am, Thu, 29 December 22

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ