AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ

Indian Soldier : ಇಂಥ ಚಳಿಯಲ್ಲಿ ನಾವೆಲ್ಲ ಬೆಚ್ಚಗೆ ಮನೆಯಲ್ಲಿ ಕುಳಿತಿದ್ದೇವೆಂದರೆ ಗಡಿ ಕಾಯುತ್ತಿರುವ ನಮ್ಮ ಸೈನಿಕರೇ ಕಾರಣ. ಈಗವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಇಲ್ಲಿರುವ ವಿಡಿಯೋ ಗಮನಿಸಿ.

ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ
ಹಿಮದೊಳಗೆ ದಾರಿ ಮಾಡಿಕೊಂಡು ನಡೆಯುತ್ತಿರುವ ಯೋಧ
TV9 Web
| Edited By: ಶ್ರೀದೇವಿ ಕಳಸದ|

Updated on:Dec 29, 2022 | 9:29 AM

Share

Viral Video : ಭಾರತೀಯ ಸೇನಾ ಯೋಧರ ಸೇವಾನಿಷ್ಠೆ, ಧೈರ್ಯ, ಸಾಹಸ, ತ್ಯಾಗ ಮತ್ತು ಸಮಯಪ್ರಜ್ಞೆಯನ್ನು ಸಾರುವ ವಿಡಿಯೋಗಳನ್ನು ಆಗಾಗ ನೋಡುತ್ತಲೇ ಇರುತ್ತೀರಿ. ಊಹೆಗೂ ನಿಲುಕಲಾರದಂಥ ಜೀವನಶೈಲಿ ಮತ್ತು ಕಾರ್ಯವಿಧಾನ ಅವರದ್ದಾಗಿರುತ್ತದೆ. ಹಾಗಾಗಿ ಅವರು ಎಂದಿಗೂ ವಿಶೇಷವೇ. ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮೇಜರ್ ಜನರಲ್​ ರಾಜು ಚೌಹಾಣ ಟ್ವೀಟ್ ಮಾಡಿದ್ದಾರೆ.

ಮೊಣಕಾಲಿನತನಕವೂ ದಟ್ಟವಾದ ಹಿಮ ಆವರಿಸಿದೆ. ಯೋಧ ರೈಫಲ್​ ಮೂಲಕ ದಾರಿ ಮಾಡಿಕೊಂಡು ನಡೆಯುತ್ತಿದ್ದಾರೆ. ಹೀಗೆ ದಾರಿ ಕ್ರಮಿಸುತ್ತಿರುವ ಖುಷಿಯಲ್ಲಿ ಅವರ ಮುಖದ ಮೇಲೆ ನಗೆ ಅರಳುವುದನ್ನು ಗಮನಿಸಬಹುದು. ಡಿಸೆಂಬರ್ 25ರಂದು ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 8,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನ ರೀಟ್ವೀಟ್ ಮಾಡಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral Video : ಉಕ್ರೇನಿಯನ್ ಯೋಧ ಮತ್ತವನ ಗೆಳತಿಯ ಈ ಅಪೂರ್ವ ಕ್ಷಣಗಳು

ನಿಮ್ಮ ತಾಯಿಗೆ ನೀವು ಸೇವೆ ಸಲ್ಲಿಸುತ್ತಿರುವಾಗ ನಿಮ್ಮ ಮುಖದಲ್ಲಿ ನಗು ಪ್ರಜ್ವಲಿಸುತ್ತದೆ  ಎಂದಿದ್ದಾರೆ ನೆಟ್ಟಿಗರೊಬ್ಬರು. ಈ ಯೋಧರ ಜೀವನಶೈಲಿ ಎಷ್ಟೊಂದು ಕಠಿಣ ಮತ್ತು ಸವಾಲಿನಿಂದ ಕೂಡಿದೆ, ಅವರಿಗೆ ಸೆಲ್ಯೂಟ್​ ಎಂದಿದ್ದಾರೆ ಮತ್ತೊಬ್ಬರು. ಮಿಲಿಯನ್​ ಸೆಲ್ಯೂಟ್​, ನಿಮಗೆ ನಾವು ಶಾಶ್ವತವಾಗಿ ಋಣಿ ಎಂದಿದ್ದಾರೆ ಮಗದೊಬ್ಬರು. ಇಂಥ ಕಠಿಣ ಸಂದರ್ಭದಲ್ಲಿಯೂ ನಗು ಬೇರೆ! ಅಬ್ಬಾ ಎಂಥ ಧೈರ್ಯಶಾಲಿ ಎಂದು ಇನ್ನೊಬ್ಬರು ಹೇಳಿದ್ದಾರೆ. ನಿಮ್ಮ ಈ ಧೈರ್ಯಸಾಹಸ ಮನೋಭಾವದ ಫಲವಾಗಿಯೇ ನಾವು ದೇಶದಲ್ಲಿ ನೆಮ್ಮದಿಯಿಂದ ನಿದ್ರಿಸುತ್ತಿದ್ದೇವೆ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:29 am, Thu, 29 December 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?