AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಜ್ ಛೋಪ್ರಾ ವರ್ಕೌಟ್​ ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ

Neeraj Chopra : ಶ್ರಮವಿಲ್ಲದೇ ಯಾವ ಸಾಧನೆಯೂ ನಿಮ್ಮದಾಗುವುದಿಲ್ಲ. ಜಾವೆಲಿನ್​ ಎಸೆತದಲ್ಲಿ ಒಲಿಂಪಿಕ್​ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನೀರಜ್​ ಛೋಪ್ರಾ ಅವರ ನಿತ್ಯದ ವರ್ಕೌಟ್​ ದೃಶ್ಯ ಇದಾಗಿದೆ.

ನೀರಜ್ ಛೋಪ್ರಾ ವರ್ಕೌಟ್​ ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ
ನೀರಜ್ ಛೋಪ್ರಾ ನಿತ್ಯದ ವರ್ಕೌಟ್​ನಲ್ಲಿ ನಿರತರಾಗಿರುವುದು
TV9 Web
| Edited By: |

Updated on:Jan 18, 2023 | 1:05 PM

Share

Viral Video : ಉದ್ಯಮಿ ಆನಂದ ಮಹೀಂದ್ರಾ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಜೀವನ ಕೌಶಲ, ಜೀವನೋತ್ಸಾಹ ಮತ್ತು ಸಾಧನೆಗೆ ಸ್ಫೂರ್ತಿಯಾಗುವಂಥ ಅನೇಕ ವಿಡಿಯೋ ತುಣುಕುಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಇವರು ಹಂಚಿಕೊಂಡ ವಿಡಿಯೋದಲ್ಲಿ ವರ್ಕೌಟ್​ ಮಾಡುತ್ತಿರುವವರು  ಭಾರತೀಯ ಅಥ್ಲೀಟ್ ನೀರಜ್​ ಛೋಪ್ರಾ. ಪುರುಷರ್ ಜಾವೆಲಿನ್​ ಎಸೆತದಲ್ಲಿ ಒಲಿಂಪಿಕ್​ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಇದೀಗ ಇವರ ನಿತ್ಯದ ವರ್ಕೌಟ್ ದೃಶ್ಯ ವೈರಲ್ ಆಗಿದೆ.

ಇಡೀ ದೇಶವೇ ಹೆಮ್ಮೆ ಪಡುವಂಥ ಸಾಧನೆಯನ್ನು ನೀರಜ್ ಮಾಡಿದ್ದಾರೆ. ಈ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದಾರೆ ನಿಜ. ಆದರೆ ಇವರ ಈ ಸಾಧನೆಯ ಹಿಂದೆ ಇರುವ ಪರಿಶ್ರಮ ಮಾತ್ರ ಅಪಾರ. ಹಾಗಾಗಿ ಸಾಧನಾಮುಖಿಯಾಗಿ ಯೋಚಿಸುವ ಪ್ರತಿಯೊಬ್ಬರೂ ಈ ವಿಡಿಯೋ ನೋಡುವುದು ಅತ್ಯವಶ್ಯ. ಏಕೆಂದರೆ ಯಾವ ಸಾಧನೆಯೂ ನಿತ್ಯಶ್ರಮವಿಲ್ಲದೆ ಬರಲಾರದು.

ಇದನ್ನೂ ಓದಿ : ನಾನೂ ನನ್ನ ಬೆಕ್ಕುಗಳೂ; ಬೆಕ್ಕುಗಳೊಂದಿಗೆ ಬೈಕ್​ಸವಾರಿ ಮಾಡುತ್ತಿರುವ ಬೆಂಗಳೂರಿಗನ ವಿಡಿಯೋ ವೈರಲ್

2022 ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್​ ಡೈಮಂಡ್ ಲೀಗ್ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. 33 ಸೆಕೆಂಡುಗಳ ಈ ವಿಡಿಯೋದಲ್ಲಿ ನೀರಜ್​ ಕ್ಯಾರಿಯೋಕಾ ಡ್ರಿಲ್​ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದು ಪ್ರತಿನಿತ್ಯ ಮಾಡಬೇಕಾದ ವ್ಯಾಯಾಮ. ಇದು ಪಾದಗಳನ್ನು ಚುರುಕುಗೊಳಿಸುತ್ತದೆ ಮತ್ತು ಹೃದಯದ ರಕ್ತನಾಳಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.

9 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿ ಅಚ್ಚರಿ ಪಟ್ಟಿದ್ಧಾರೆ. ಎಂಥ ಶ್ರದ್ಧೆಯಿಂದ ಕೂಡಿದೆ ಈ ಪ್ರಯತ್ನ ಎಂದು ಶ್ಲಾಘಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:56 pm, Wed, 18 January 23

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ