AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಜ್ ಛೋಪ್ರಾ ವರ್ಕೌಟ್​ ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ

Neeraj Chopra : ಶ್ರಮವಿಲ್ಲದೇ ಯಾವ ಸಾಧನೆಯೂ ನಿಮ್ಮದಾಗುವುದಿಲ್ಲ. ಜಾವೆಲಿನ್​ ಎಸೆತದಲ್ಲಿ ಒಲಿಂಪಿಕ್​ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನೀರಜ್​ ಛೋಪ್ರಾ ಅವರ ನಿತ್ಯದ ವರ್ಕೌಟ್​ ದೃಶ್ಯ ಇದಾಗಿದೆ.

ನೀರಜ್ ಛೋಪ್ರಾ ವರ್ಕೌಟ್​ ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ
ನೀರಜ್ ಛೋಪ್ರಾ ನಿತ್ಯದ ವರ್ಕೌಟ್​ನಲ್ಲಿ ನಿರತರಾಗಿರುವುದು
TV9 Web
| Updated By: ಶ್ರೀದೇವಿ ಕಳಸದ|

Updated on:Jan 18, 2023 | 1:05 PM

Share

Viral Video : ಉದ್ಯಮಿ ಆನಂದ ಮಹೀಂದ್ರಾ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಜೀವನ ಕೌಶಲ, ಜೀವನೋತ್ಸಾಹ ಮತ್ತು ಸಾಧನೆಗೆ ಸ್ಫೂರ್ತಿಯಾಗುವಂಥ ಅನೇಕ ವಿಡಿಯೋ ತುಣುಕುಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಇವರು ಹಂಚಿಕೊಂಡ ವಿಡಿಯೋದಲ್ಲಿ ವರ್ಕೌಟ್​ ಮಾಡುತ್ತಿರುವವರು  ಭಾರತೀಯ ಅಥ್ಲೀಟ್ ನೀರಜ್​ ಛೋಪ್ರಾ. ಪುರುಷರ್ ಜಾವೆಲಿನ್​ ಎಸೆತದಲ್ಲಿ ಒಲಿಂಪಿಕ್​ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಇದೀಗ ಇವರ ನಿತ್ಯದ ವರ್ಕೌಟ್ ದೃಶ್ಯ ವೈರಲ್ ಆಗಿದೆ.

ಇಡೀ ದೇಶವೇ ಹೆಮ್ಮೆ ಪಡುವಂಥ ಸಾಧನೆಯನ್ನು ನೀರಜ್ ಮಾಡಿದ್ದಾರೆ. ಈ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದಾರೆ ನಿಜ. ಆದರೆ ಇವರ ಈ ಸಾಧನೆಯ ಹಿಂದೆ ಇರುವ ಪರಿಶ್ರಮ ಮಾತ್ರ ಅಪಾರ. ಹಾಗಾಗಿ ಸಾಧನಾಮುಖಿಯಾಗಿ ಯೋಚಿಸುವ ಪ್ರತಿಯೊಬ್ಬರೂ ಈ ವಿಡಿಯೋ ನೋಡುವುದು ಅತ್ಯವಶ್ಯ. ಏಕೆಂದರೆ ಯಾವ ಸಾಧನೆಯೂ ನಿತ್ಯಶ್ರಮವಿಲ್ಲದೆ ಬರಲಾರದು.

ಇದನ್ನೂ ಓದಿ : ನಾನೂ ನನ್ನ ಬೆಕ್ಕುಗಳೂ; ಬೆಕ್ಕುಗಳೊಂದಿಗೆ ಬೈಕ್​ಸವಾರಿ ಮಾಡುತ್ತಿರುವ ಬೆಂಗಳೂರಿಗನ ವಿಡಿಯೋ ವೈರಲ್

2022 ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್​ ಡೈಮಂಡ್ ಲೀಗ್ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. 33 ಸೆಕೆಂಡುಗಳ ಈ ವಿಡಿಯೋದಲ್ಲಿ ನೀರಜ್​ ಕ್ಯಾರಿಯೋಕಾ ಡ್ರಿಲ್​ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದು ಪ್ರತಿನಿತ್ಯ ಮಾಡಬೇಕಾದ ವ್ಯಾಯಾಮ. ಇದು ಪಾದಗಳನ್ನು ಚುರುಕುಗೊಳಿಸುತ್ತದೆ ಮತ್ತು ಹೃದಯದ ರಕ್ತನಾಳಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.

9 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿ ಅಚ್ಚರಿ ಪಟ್ಟಿದ್ಧಾರೆ. ಎಂಥ ಶ್ರದ್ಧೆಯಿಂದ ಕೂಡಿದೆ ಈ ಪ್ರಯತ್ನ ಎಂದು ಶ್ಲಾಘಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:56 pm, Wed, 18 January 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?