AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಜ್ ಛೋಪ್ರಾ ವರ್ಕೌಟ್​ ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ

Neeraj Chopra : ಶ್ರಮವಿಲ್ಲದೇ ಯಾವ ಸಾಧನೆಯೂ ನಿಮ್ಮದಾಗುವುದಿಲ್ಲ. ಜಾವೆಲಿನ್​ ಎಸೆತದಲ್ಲಿ ಒಲಿಂಪಿಕ್​ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನೀರಜ್​ ಛೋಪ್ರಾ ಅವರ ನಿತ್ಯದ ವರ್ಕೌಟ್​ ದೃಶ್ಯ ಇದಾಗಿದೆ.

ನೀರಜ್ ಛೋಪ್ರಾ ವರ್ಕೌಟ್​ ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ
ನೀರಜ್ ಛೋಪ್ರಾ ನಿತ್ಯದ ವರ್ಕೌಟ್​ನಲ್ಲಿ ನಿರತರಾಗಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on:Jan 18, 2023 | 1:05 PM

Share

Viral Video : ಉದ್ಯಮಿ ಆನಂದ ಮಹೀಂದ್ರಾ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಜೀವನ ಕೌಶಲ, ಜೀವನೋತ್ಸಾಹ ಮತ್ತು ಸಾಧನೆಗೆ ಸ್ಫೂರ್ತಿಯಾಗುವಂಥ ಅನೇಕ ವಿಡಿಯೋ ತುಣುಕುಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಇವರು ಹಂಚಿಕೊಂಡ ವಿಡಿಯೋದಲ್ಲಿ ವರ್ಕೌಟ್​ ಮಾಡುತ್ತಿರುವವರು  ಭಾರತೀಯ ಅಥ್ಲೀಟ್ ನೀರಜ್​ ಛೋಪ್ರಾ. ಪುರುಷರ್ ಜಾವೆಲಿನ್​ ಎಸೆತದಲ್ಲಿ ಒಲಿಂಪಿಕ್​ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಇದೀಗ ಇವರ ನಿತ್ಯದ ವರ್ಕೌಟ್ ದೃಶ್ಯ ವೈರಲ್ ಆಗಿದೆ.

ಇಡೀ ದೇಶವೇ ಹೆಮ್ಮೆ ಪಡುವಂಥ ಸಾಧನೆಯನ್ನು ನೀರಜ್ ಮಾಡಿದ್ದಾರೆ. ಈ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದಾರೆ ನಿಜ. ಆದರೆ ಇವರ ಈ ಸಾಧನೆಯ ಹಿಂದೆ ಇರುವ ಪರಿಶ್ರಮ ಮಾತ್ರ ಅಪಾರ. ಹಾಗಾಗಿ ಸಾಧನಾಮುಖಿಯಾಗಿ ಯೋಚಿಸುವ ಪ್ರತಿಯೊಬ್ಬರೂ ಈ ವಿಡಿಯೋ ನೋಡುವುದು ಅತ್ಯವಶ್ಯ. ಏಕೆಂದರೆ ಯಾವ ಸಾಧನೆಯೂ ನಿತ್ಯಶ್ರಮವಿಲ್ಲದೆ ಬರಲಾರದು.

ಇದನ್ನೂ ಓದಿ : ನಾನೂ ನನ್ನ ಬೆಕ್ಕುಗಳೂ; ಬೆಕ್ಕುಗಳೊಂದಿಗೆ ಬೈಕ್​ಸವಾರಿ ಮಾಡುತ್ತಿರುವ ಬೆಂಗಳೂರಿಗನ ವಿಡಿಯೋ ವೈರಲ್

2022 ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್​ ಡೈಮಂಡ್ ಲೀಗ್ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. 33 ಸೆಕೆಂಡುಗಳ ಈ ವಿಡಿಯೋದಲ್ಲಿ ನೀರಜ್​ ಕ್ಯಾರಿಯೋಕಾ ಡ್ರಿಲ್​ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದು ಪ್ರತಿನಿತ್ಯ ಮಾಡಬೇಕಾದ ವ್ಯಾಯಾಮ. ಇದು ಪಾದಗಳನ್ನು ಚುರುಕುಗೊಳಿಸುತ್ತದೆ ಮತ್ತು ಹೃದಯದ ರಕ್ತನಾಳಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.

9 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿ ಅಚ್ಚರಿ ಪಟ್ಟಿದ್ಧಾರೆ. ಎಂಥ ಶ್ರದ್ಧೆಯಿಂದ ಕೂಡಿದೆ ಈ ಪ್ರಯತ್ನ ಎಂದು ಶ್ಲಾಘಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:56 pm, Wed, 18 January 23

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು