AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಜ್ ಛೋಪ್ರಾ ವರ್ಕೌಟ್​ ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ

Neeraj Chopra : ಶ್ರಮವಿಲ್ಲದೇ ಯಾವ ಸಾಧನೆಯೂ ನಿಮ್ಮದಾಗುವುದಿಲ್ಲ. ಜಾವೆಲಿನ್​ ಎಸೆತದಲ್ಲಿ ಒಲಿಂಪಿಕ್​ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನೀರಜ್​ ಛೋಪ್ರಾ ಅವರ ನಿತ್ಯದ ವರ್ಕೌಟ್​ ದೃಶ್ಯ ಇದಾಗಿದೆ.

ನೀರಜ್ ಛೋಪ್ರಾ ವರ್ಕೌಟ್​ ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ
ನೀರಜ್ ಛೋಪ್ರಾ ನಿತ್ಯದ ವರ್ಕೌಟ್​ನಲ್ಲಿ ನಿರತರಾಗಿರುವುದು
TV9 Web
| Edited By: ಶ್ರೀದೇವಿ ಕಳಸದ|

Updated on:Jan 18, 2023 | 1:05 PM

Share

Viral Video : ಉದ್ಯಮಿ ಆನಂದ ಮಹೀಂದ್ರಾ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಜೀವನ ಕೌಶಲ, ಜೀವನೋತ್ಸಾಹ ಮತ್ತು ಸಾಧನೆಗೆ ಸ್ಫೂರ್ತಿಯಾಗುವಂಥ ಅನೇಕ ವಿಡಿಯೋ ತುಣುಕುಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಇವರು ಹಂಚಿಕೊಂಡ ವಿಡಿಯೋದಲ್ಲಿ ವರ್ಕೌಟ್​ ಮಾಡುತ್ತಿರುವವರು  ಭಾರತೀಯ ಅಥ್ಲೀಟ್ ನೀರಜ್​ ಛೋಪ್ರಾ. ಪುರುಷರ್ ಜಾವೆಲಿನ್​ ಎಸೆತದಲ್ಲಿ ಒಲಿಂಪಿಕ್​ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಇದೀಗ ಇವರ ನಿತ್ಯದ ವರ್ಕೌಟ್ ದೃಶ್ಯ ವೈರಲ್ ಆಗಿದೆ.

ಇಡೀ ದೇಶವೇ ಹೆಮ್ಮೆ ಪಡುವಂಥ ಸಾಧನೆಯನ್ನು ನೀರಜ್ ಮಾಡಿದ್ದಾರೆ. ಈ ಮೂಲಕ ಇಡೀ ವಿಶ್ವದ ಗಮನ ಸೆಳೆದಿದ್ದಾರೆ ನಿಜ. ಆದರೆ ಇವರ ಈ ಸಾಧನೆಯ ಹಿಂದೆ ಇರುವ ಪರಿಶ್ರಮ ಮಾತ್ರ ಅಪಾರ. ಹಾಗಾಗಿ ಸಾಧನಾಮುಖಿಯಾಗಿ ಯೋಚಿಸುವ ಪ್ರತಿಯೊಬ್ಬರೂ ಈ ವಿಡಿಯೋ ನೋಡುವುದು ಅತ್ಯವಶ್ಯ. ಏಕೆಂದರೆ ಯಾವ ಸಾಧನೆಯೂ ನಿತ್ಯಶ್ರಮವಿಲ್ಲದೆ ಬರಲಾರದು.

ಇದನ್ನೂ ಓದಿ : ನಾನೂ ನನ್ನ ಬೆಕ್ಕುಗಳೂ; ಬೆಕ್ಕುಗಳೊಂದಿಗೆ ಬೈಕ್​ಸವಾರಿ ಮಾಡುತ್ತಿರುವ ಬೆಂಗಳೂರಿಗನ ವಿಡಿಯೋ ವೈರಲ್

2022 ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್​ ಡೈಮಂಡ್ ಲೀಗ್ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. 33 ಸೆಕೆಂಡುಗಳ ಈ ವಿಡಿಯೋದಲ್ಲಿ ನೀರಜ್​ ಕ್ಯಾರಿಯೋಕಾ ಡ್ರಿಲ್​ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಇದು ಪ್ರತಿನಿತ್ಯ ಮಾಡಬೇಕಾದ ವ್ಯಾಯಾಮ. ಇದು ಪಾದಗಳನ್ನು ಚುರುಕುಗೊಳಿಸುತ್ತದೆ ಮತ್ತು ಹೃದಯದ ರಕ್ತನಾಳಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.

9 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿ ಅಚ್ಚರಿ ಪಟ್ಟಿದ್ಧಾರೆ. ಎಂಥ ಶ್ರದ್ಧೆಯಿಂದ ಕೂಡಿದೆ ಈ ಪ್ರಯತ್ನ ಎಂದು ಶ್ಲಾಘಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:56 pm, Wed, 18 January 23

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ