AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಬ್ಬಬ್ಬಾ.. ದೈತ್ಯ ಹೆಬ್ಬಾವನ್ನೇ ತನ್ನ ಆಟಿಕೆಯನ್ನಾಗಿ ಮಾಡಿಕೊಂಡ ಪುಟ್ಟ ಬಾಲಕ 

ಸಾಮಾನ್ಯವಾಗಿ ಪುಟ್ಟ ಮಕ್ಕಳು ಬಸ್ಸು, ಜೆಸಿಬಿ, ಸೈಕಲ್, ಚೆಂಡು, ಗೊಂಬೆ ಇತ್ಯಾದಿ ಸಣ್ಣಪುಟ್ಟ ಆಟಿಕೆಗಳ ಜೊತೆ ಆಟವಾಡುತ್ತಿರುತ್ತಾರೆ.  ಆದ್ರೆ ಇಲ್ಲೊಬ್ಬ ಪುಟ್ಟ ಬಾಲಕ ದೈತ್ಯ ಹೆಬ್ಬಾವನ್ನೇ ತನ್ನ ಆಟಿಕೆಯನ್ನಾಗಿ ಮಾಡಿಕೊಂಡಿದ್ದಾನೆ. ಈ ಪುಟ್ಟ ಹುಡುಗ ದೈತ್ಯ ಹೆಬ್ಬಾವಿನೊಂದಿಗೆ ಆಟವಾಡುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಹುಡುಗನ  ಧೈರ್ಯವನ್ನು ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.  

Viral Video: ಅಬ್ಬಬ್ಬಾ.. ದೈತ್ಯ ಹೆಬ್ಬಾವನ್ನೇ ತನ್ನ ಆಟಿಕೆಯನ್ನಾಗಿ ಮಾಡಿಕೊಂಡ ಪುಟ್ಟ ಬಾಲಕ 
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 26, 2023 | 12:34 PM

Share

ಹೆಬ್ಬಾವುಗಳನ್ನು ವಿಶ್ವದ ಅತ್ಯಂತ ಅಪಾಯಕಾರಿ ಹಾವುಗಳೆಂದು ಪರಿಗಣಿಸಲಾಗಿದೆ. ಅದರಲ್ಲೂ ಬೃಹದಾಕಾರದ ಹೆಬ್ಬಾವುಗಳು ಪ್ರಾಣಿಗಳನ್ನು ಬಿಡಿ, ಮನುಷ್ಯರನ್ನು ಸಹ ಜೀವಂತವಾಗಿ ನುಂಗಿ ಬಿಡುತ್ತವೆ. ಇದೇ ಕಾರಣಕ್ಕೆ ಈ ಹಾವುಗಳ ತಂಟೆಗೆ ಅಷ್ಟಾಗಿ ಯಾರು ಹೋಗುವುದಿಲ್ಲ. ಒಂದು ವೇಳೆ ದೈತ್ಯ ಹೆಬ್ಬಾವು ನಿಮ್ಮ ಕಣ್ಣಿಗೆ ಕಂಡರೆ ನಿಮ್ಮ ಪ್ರತಿಕ್ರಿಯೆ ಹೇಗಿರುತ್ತೆ? ಖಂಡಿವಾಗಿಯೂ ಈ ದೈತ್ಯ ಜೀವಿ ನನ್ನನ್ನು ನುಂಗಿ ಬಿಡುತ್ತೆ ಎಂಬ ಭಯದಿಂದ ಓಡಿ ಹೋಗುತ್ತೀರಿ ಅಲ್ವಾ. ಆದ್ರೆ ಇಲ್ಲೊಬ್ಬ ಪುಟ್ಟ ಬಾಲಕ ಅಂತಹ ದೈತ್ಯ ಹೆಬ್ಬಾವನ್ನೇ ತನ್ನ ಆಟಿಕೆಯನ್ನಾಗಿ ಮಾಡಿಕೊಂಡಿದ್ದಾನೆ. ಎಲ್ಲಾ ಮಕ್ಕಳು ಬಸ್ಸು, ಜೆಸಿಬಿ, ಗೊಂಬೆಗಳ ಜೊತೆ ಆಟವಾಡಿದರೆ ಈ ಪುಟ್ಟ ಬಾಲಕ ಮಾತ್ರ ದೈತ್ಯ ಹೆಬ್ಬಾವನ್ನೇ ತನ್ನ ಆಟಿಕೆಯನ್ನಾಗಿ ಮಾಡಿಕೊಂಡಿದ್ದಾನೆ. ಈ ಪುಟ್ಟ ಹುಡುಗ ದೈತ್ಯ ಹೆಬ್ಬಾವಿನೊಂದಿಗೆ ಆಟವಾಡುತ್ತಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಹುಡುಗನ ಭಂಡ ದೈರ್ಯವನ್ನು ಕಂಡು ಎಲ್ಲರೂ ಅಚ್ಚರಿಪಟ್ಟಿದ್ದಾರೆ.

@rbempire_tv ಎಂಬ ಇನ್ಸ್ಟಾಗ್ರಾಮ್ ಪೇಜ್ ಅಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಒಂದುವರೆ ವರ್ಷ ವಯಸ್ಸಿನ ಬಾಲಕನೊಬ್ಬ ಬೃಹದಾಕಾರದ ಹೆಬ್ಬಾವಿನ ಜೊತೆಗೆ ಆಟವಾಡುತ್ತಿರುವ ದೃಶ್ಯವನ್ನು ಕಾಣಬಹುದು.

ವೈರಲ್​​ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ( ಈ ವಿಡಿಯೋ ತುಂಬಾ ಭಯಾನಕವಾಗಿದೆ)

ವೈರಲ್ ವಿಡಿಯೋದಲ್ಲಿ ಪುಟ್ಟ ಬಾಲಕನೊಬ್ಬ ದೈತ್ಯ ಹೆಬ್ಬಾವಿನ ಮೇಲೆ ಕುಳಿತು ತನ್ನ ಪಾಡಿಡೆ ಆಟವಾಡುತ್ತಿರುವುದನ್ನು ಕಾಣಬಹುದು. ಅಷ್ಟೆ ಅಲ್ಲದೇ ಆ ದೈತ್ಯ ಹಾವು ನಿಧಾನಕ್ಕೆ ತೆವಳಿಕೊಂಡು ಅತ್ತಕಡೆ ಹೋಗುತ್ತಿರುವ ವೇಳೆಯಲ್ಲಿ, ಆ ಬಾಲಕ ಹಾವಿನ ಹೆಡೆಯನ್ನು ಹಿಡಿದುಕೊಂಡು, ಹಾವನ್ನು ಇತ್ತಕಡೆ ಎಳೆದುಕೊಂಡು ಬರುವುದನ್ನು ಕಾಣಬಹುದು.  ಆದ್ರೆ ಇಲ್ಲಿ ಅಚ್ಚರಿಯ ವಿಷಯವೇನೆಂದರೆ  ಈ ದೈತ್ಯ ಹೆಬ್ಬಾವು  ಮಗುವಿಗೆ ಯಾವುದೇ ರೀತಿಯಲ್ಲೂ ಹಾನಿಯನ್ನು ಮಾಡಿಲ್ಲ.

ಇದನ್ನೂ ಓದಿ: ಆಯ್ತು ಇದು ಕೊನೆ ತುತ್ತು ಬೇಗ ತಿನ್ನಿ, ಕೋಗಿಲೆ ಮರಿಗಳಿಗೆ ಪ್ರೀತಿಯಿಂದ ಕೈ ತುತ್ತು ನೀಡಿದ ಮಹಿಳೆ

ನವೆಂಬರ್ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 20.6 ಮಿಲಿಯನ್ ವೀಕ್ಷಣೆಗಳನ್ನು ಹಾಗೂ  5 ಲಕ್ಷಕ್ಕಿಂತಲೂ ಅಧಿಕ  ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಲವಾರು ಕಮೆಂಟ್ಗಳೂ ಹರಿದು ಬಂದಿದ್ದು, ಒಬ್ಬ ಬಳಕೆದಾರರು ʼಆ ಬಾಲಕ ಹಾವಿನ ಬಳಿ ಹೋಗುತ್ತಿರುವುದನ್ನು ಕಂಡು ನನಗೆ ಇಲ್ಲಿ ಆತಂಕ ಶುರುವಾಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಓ ದೇವ್ರೆ!  ಈ ಹುಡುಗ ಎಷ್ಟು ಧೈರ್ಯಶಾಲಿʼ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಮಕ್ಕಳನ್ನು ಈ ರೀತಿಯಾಗಿ ಹಾವುಗಳ ಜೊತೆ ಬಿಡುವುದು ಸರಿಯಲ್ಲ, ಅವುಗಳು ಅಪಾಯಕಾರಿ ಜೀವಿಗಳುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಈ ಹುಡುಗನ ದೈರ್ಯವನು ಕಂಡು ಆಶ್ಚರ್ಯಚಕಿತರಾಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?