AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹೊರಗೆ ಕಾಣಿಸಿಕೊಳ್ಳದಿದ್ದರೆ ನೀವು ಯಾರನ್ನ ತೋರಿಸ್ತಿದ್ರಿ? – ಪತ್ರಕರ್ತನ ಪ್ರಶ್ನೆಗೆ ಥಟ್ಟನೆ ಉತ್ತರಿಸಿ ಹುಬ್ಬೇರುವಂತೆ ಮಾಡಿದ ವ್ಯಕ್ತಿ

ವಾತಾವರಣ ಇಷ್ಟು ಹದಗೆಟ್ಟಿರುವಾಗ ಏಕೆ ಹೊರಬಂದಿದ್ದೀರಿ ಎಂದು ಮಾಧ್ಯಮದ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಕಿಂಚಿತ್ತೂ ಯೋಚಿಸದೆ ಪ್ರತಿಕ್ರಿಯೆ ನೀಡಿದ ವ್ಯಕ್ತಿ, ನೀವು ಹೊರಗೆ ಬಂದಿದ್ದೀರಲ್ಲಾ ಹಾಗಾಗಿ ನಾನೂ ಬಂದಿದ್ದೇನೆ ಎಂದಿದ್ದಾನೆ.

ನಾನು ಹೊರಗೆ ಕಾಣಿಸಿಕೊಳ್ಳದಿದ್ದರೆ ನೀವು ಯಾರನ್ನ ತೋರಿಸ್ತಿದ್ರಿ? - ಪತ್ರಕರ್ತನ ಪ್ರಶ್ನೆಗೆ ಥಟ್ಟನೆ ಉತ್ತರಿಸಿ ಹುಬ್ಬೇರುವಂತೆ ಮಾಡಿದ ವ್ಯಕ್ತಿ
ಸಾಂದರ್ಭಿಕ ಚಿತ್ರ
Skanda
| Edited By: |

Updated on: May 27, 2021 | 3:38 PM

Share

ದೇಶದ ಕೆಲ ಭಾಗಗಳಲ್ಲಿ ತೌಕ್ತೆ ಚಂಡಮಾರುತ ಅಬ್ಬರಿಸಿ ಹೋದ ಬೆನ್ನಲ್ಲೇ ಯಾಸ್ ಕೆಲ ಪ್ರದೇಶಗಳಿಗೆ ಅಪ್ಪಳಿಸಿದೆ. ಪಶ್ಚಿಮ ಬಂಗಾಳ, ಒಡಿಶಾ ರಾಜ್ಯಗಳಲ್ಲಿ ನಿನ್ನೆ (ಮೇ 26) ಮುಂಜಾನೆಯಿಂದಲೇ ತೀವ್ರ ಸ್ವರೂಪಕ್ಕೆ ತಿರುಗಿರುವ ಯಾಸ್ ಇಂದು ಕೂಡಾ ಮಳೆ ಸುರಿಸುತ್ತಿದ್ದು, ಈಗಾಗಲೇ ಸಾಕಷ್ಟು ಹಾನಿ ಮಾಡಿದೆ. ಚಂಡಮಾರುತದಿಂದ ನಲುಗಿದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಅಪಾಯಕ್ಕೆ ಸಿಲುಕಿದ ಹಲವರನ್ನು ಪಾರು ಮಾಡಲಾಗುತ್ತಿದೆ. ಇದೇ ವೇಳೆ ಯಾಸ್ ಚಂಡಮಾರುತಕ್ಕೆ ಸಂಬಂಧಿಸಿದ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಜನ ವಿವಿಧ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾಸ್​ಗೆ ಸಂಬಂಧಿಸಿದಂತೆ ವೈರಲ್ ಆದ ವಿಡಿಯೋಗಳ ಪೈಕಿ ಒಂದು ಸುದ್ದಿ ಮಾತ್ರ ಭಾರೀ ಸದ್ದು ಮಾಡುತ್ತಿದೆ. ಆ ವಿಡಿಯೋದಲ್ಲಿರುವ ವ್ಯಕ್ತಿ ಮಾಧ್ಯಮವೊಂದರ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ರೀತಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಯಾಸ್ ಚಂಡಮಾರುತದ ತೀವ್ರತೆ ಹೇಗಿದೆ ಎಂದು ಪತ್ರಕರ್ತರೊಬ್ಬರು ವರದಿ ಮಾಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಅಲ್ಲಿ ಕಾಣಿಸಿಕೊಂಡಿದ್ದಾನೆ. ವಾತಾವರಣ ಸಂಪೂರ್ಣ ಹದಗೆಟ್ಟ ಪರಿಸ್ಥಿತಿಯಲ್ಲಿ ನೀವೇಕೆ ಹೊರಬಂದಿದ್ದೀರಿ ಎಂದು ಮಾಧ್ಯಮದ ಪ್ರತಿನಿಧಿ ಕೇಳಿದ ಪ್ರಶ್ನೆಗೆ ವ್ಯಕ್ತಿ ಥಟ್ಟನೆ ಉತ್ತರ ನೀಡಿದ್ದಾನೆ.

ವಾತಾವರಣ ಇಷ್ಟು ಹದಗೆಟ್ಟಿರುವಾಗ ಏಕೆ ಹೊರಬಂದಿದ್ದೀರಿ ಎಂದು ಮಾಧ್ಯಮದ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಕಿಂಚಿತ್ತೂ ಯೋಚಿಸದೆ ಪ್ರತಿಕ್ರಿಯೆ ನೀಡಿದ ವ್ಯಕ್ತಿ, ನೀವು ಹೊರಗೆ ಬಂದಿದ್ದೀರಲ್ಲಾ ಹಾಗಾಗಿ ನಾನೂ ಬಂದಿದ್ದೇನೆ ಎಂದಿದ್ದಾನೆ. ಆಗ ಅದಕ್ಕೆ ಉತ್ತರಿಸಿದ ಪತ್ರಕರ್ತ ನಾನು ನನ್ನ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಈ ಉತ್ತರಕ್ಕೂ ಫಟ್ಟನೆ ಪ್ರತ್ಯುತ್ತರ ನೀಡಿದ ವ್ಯಕ್ತಿ ನಾನು ಹೊರಗೆ ಬಾರದೇ ಇದ್ದಿದ್ದರೆ ನೀವು ಯಾರನ್ನ ತೋರಿಸುತ್ತಿದ್ದಿರಿ ಎನ್ನುವ ಮೂಲಕ ಹುಬ್ಬೇರುವಂತೆ ಮಾಡಿದ್ದಾನೆ.

ಮೊದಲು ಸುದ್ದಿ ವಾಹಿನಿ ಹಂಚಿಕೊಂಡ ಈ ವಿಡಿಯೋವನ್ನು ನಂತರ ಒಬ್ಬೊಬ್ಬರಾಗಿ ಹಂಚಿಕೊಂಡಿದ್ದು, ಇದೀಗ ಭಾರೀ ವೈರಲ್ ಆಗಿದೆ. ಕೆಲವರು ಆ ವ್ಯಕ್ತಿ ಫಟಾಫಟ್ ಎಂದು ಉತ್ತರಿಸಿದ ರೀತಿಗೆ ವಾವ್ ಎಂದಿದ್ದರೆ ಇನ್ನು ಕೆಲವೊಂದಷ್ಟು ಜನ ಚಂಡಮಾರುತ ಭೀಕರವಾಗಿ ಅಬ್ಬರಿಸುತ್ತಿರುವ ಸಂದರ್ಭದಲ್ಲಿ ಹೊರಗೆ ಅಡ್ಡಾಡುತ್ತಿರುವುದಲ್ಲದೇ ಅಸಡ್ಡೆ ತೋರುವುದು ಸರಿಯಲ್ಲ ಎಂದಿದ್ದಾರೆ.

ಇದನ್ನೂ ಓದಿ: ಬಿಸಿಲು ಇರುವಾಗ ಹೊರಗೆ ಬರಬಹುದಾ ಎಂದು ಕೇಳಿದ ವ್ಯಕ್ತಿಗೆ ಸಖತ್​ ತಿರುಗೇಟು ಕೊಟ್ಟ ಪೊಲೀಸರು; ವೈರಲ್​ ಆಯ್ತು ಟ್ವೀಟ್​ 

ಪತ್ರಕರ್ತರ ಪ್ರಶ್ನೆಗೆ ಸಿಡಿಮಿಡಿಗೊಂಡು ಸ್ಯಾನಿಟೈಜರ್ ಸ್ಪ್ರೇ ಮಾಡಿದ ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್ ಓಚಾ

Follow Us
Skanda
Skanda
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ