AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

ಪೊಲೀಸರ ವ್ಯಾನ್​ನಿಂದ ಖೈದಿ ತಪ್ಪಿಸಿಕೊಂಡು ಹೋಗುತ್ತಿರುವ ಹೊಸ ವಿಡಿಯೋವೊಂದು ವೈರಲ್ ಆಗಿದೆ. ಘಟನೆಯ ಹಿನ್ನೆಲೆಯೇನು? ಆಮೇಲೇನಾಯ್ತು? ಇಲ್ಲಿದೆ ಕುತೂಹಲಕರ ಮಾಹಿತಿ.

Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ
ವಿಡಿಯೋದಿಂದ ಸೆರೆಹಿಡಿಯಲಾದ ಚಿತ್ರ
TV9 Web
| Edited By: |

Updated on:Jan 09, 2022 | 4:31 PM

Share

ಬ್ರೆಜಿಲ್: ಖೈದಿಗಳು ಜೈಲಿನಿಂದ ತಪ್ಪಿಸಿಕೊಂಡು ಹೋಗುವುದನ್ನು ಎಲ್ಲರೂ ಸಿನಿಮಾದಲ್ಲಿ ನೋಡಿರುತ್ತಾರೆ. ನಿಜ ಜೀವನದಲ್ಲೂ ಇಂತಹ ಘಟನೆಗಳು ವರದಿಯಾಗುತ್ತಿರುತ್ತವೆ. ಇದೀಗ ಅಂಥದ್ದೇ ಪ್ರಕರಣವೊಂದು ವರದಿಯಾಗಿದ್ದು, ಪೊಲೀಸರು ಇದ್ದ ವ್ಯಾನ್​ನಿಂದಲೇ ಕೈಕೋಳ ತೊಡಿಸಿದ್ದ ಖೈದಿಯೊಬ್ಬ ತಪ್ಪಿಸಿಕೊಂಡಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಬ್ರೆಜಿಲ್​ನ ಪರೈಬಾದ ಅಲಗೊವಾ ನೋವಾದಲ್ಲಿ. ಪೊಲೀಸರು ಖೈದಿಯನ್ನು ವ್ಯಾನ್​ನ ಹಿಂದೆ ಕೈಕೋಳ ತೊಡಿಸಿ ಕರೆದೊಯ್ಯುತ್ತಿದ್ದರು. ರಸ್ತೆಯಲ್ಲಿ ಚಲಿಸುತ್ತಿರುವಂತೆಯೇ ಖೈದಿ ತಪ್ಪಿಸಿಕೊಂಡಿದ್ದಾನೆ. ಖೈದಿ ತಮ್ಮ ಕಣ್ಣೆದುರೇ ತಪ್ಪಿಸಿಕೊಂಡಿದ್ದರೂ ಪೊಲೀಸರಿಗೆ ಇದು ಗೊತ್ತಾಗಿಯೇ ಇಲ್ಲ. ಅಲ್ಲದೇ ವ್ಯಾನ್​ನ ಮಿರರ್​ನಲ್ಲೂ ಅವರು ಗಮನಿಸಿಲ್ಲ. ಪೊಲೀಸ್ ವ್ಯಾನ್ ಮುಂದೆ ಹೋಗಿದೆ. ಖೈದಿ ತಪ್ಪಿಸಿಕೊಂಡಿರುವುದು ಅಲ್ಲೇ ಇದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದನ್ನು ಯುಟ್ಯೂಬ್​ನಲ್ಲಿ ಡಿಸೆಂಬರ್ 28ರಂದು ಅಪ್​ಲೋಡ್ ಮಾಡಲಾಗಿದ್ದು, ವೈರಲ್ ಆಗಿದೆ.

ವಿಡಿಯೋ ನೋಡಿದ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ಹೊರಹಾಕಿದ್ದಾರೆ. ‘‘ನಿಜವಾಗಿಯೂ ಖೈದಿಯನ್ನು ಪೊಲೀಸ್ ವ್ಯಾನ್ ಹಿಂದೆ ಕಟ್ಟಿದ್ದರೇ?’’ ಎಂದು ಒಬ್ಬರು ಪ್ರಶ್ನಿಸಿದ್ದರೆ, ಮತ್ತೋರ್ವರು ಖೈದಿಯ ಬುದ್ಧಿವಂತಿಕೆಯ ಕುರಿತು ಬರೆದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ:

ಘಟನೆಯ ಹಿನ್ನೆಲೆಯೇನು? ಬ್ರೆಜಿಲ್​ನ ಸ್ಥಳೀಯ ಸುದ್ದಿ ಮಾಧ್ಯಮಗಳ ಪ್ರಕಾರ ಖೈದಿ ವ್ಯಾನ್​ನ ಹಿಂಬಾಗಿಲು ತೆರೆದು ಎಸ್ಕೇಪ್ ಆಗಿದ್ದಾನೆ. ಅಲ್ಲದೇ ವ್ಯಾನ್​ನಿಂದ ಹೊರಬಿದ್ದ ತಕ್ಷಣ ತುಸು ಹೊತ್ತು ರಸ್ತೆಯ ಮಧ್ಯದಲ್ಲೇ ನಿಂತಿದ್ದಾನೆ. ಇದರಿಂದಾಗಿ ಪೊಲೀಸರಿಗೆ ಮಿರರ್​ನಲ್ಲಿ ಕಾಣಿಸಿಲ್ಲ ಎನ್ನಲಾಗಿದೆ. ಮತ್ತೊಂದು ಮಾಧ್ಯಮದ ಪ್ರಕಾರ ಪೊಲೀಸರಿಗೆ ಖೈದಿ ತಪ್ಪಿಸಿಕೊಂಡಿದ್ದಾನೆ ಎಂಬುದು ಅರಿವಿಗೆ ಬಂದಿದ್ದೇ ಪೊಲೀಸ್ ಠಾಣೆಗೆ ಬಂದ ಮೇಲಂತೆ!

ಈ ವರೆಗೂ ಆ ಖೈದಿಯನ್ನು ಮತ್ತೆ ಬಂಧಿಸಲಾಗಿಲ್ಲ. ಪ್ರಕರಣದ ಕುರಿತು ಮೇಲಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಪೊಲೀಸರು ಖೈದಿಯನ್ನು ಇರಿಸುವ ಜಾಗದಲ್ಲಿ ಏನಾದರೂ ಸಮಸ್ಯೆಯಿದೆಯೇ ಎಂದು ಪರಿಶೀಲಿಸಲು ತಜ್ಞರನ್ನು ಸಂಪರ್ಕಿಸಿದ್ದಾರೆ ಎಂದೂ ವರದಿಗಳು ಹೇಳಿವೆ.

ಇದನ್ನೂ ಓದಿ:

Viral Video: ವೇದಿಕೆಯಲ್ಲೇ ಬಿಜೆಪಿ ಶಾಸಕನ ಕೆನ್ನೆಗೆ ಹೊಡೆದ ರೈತ; ವಿಡಿಯೋ ವೈರಲ್ ಆಗುತ್ತಿದ್ದಂತೆ ತೇಪೆ ಹಚ್ಚಿದ ಎಂಎಲ್​ಎ

ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?

Published On - 12:34 pm, Sun, 9 January 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು