Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

ಪೊಲೀಸರ ವ್ಯಾನ್​ನಿಂದ ಖೈದಿ ತಪ್ಪಿಸಿಕೊಂಡು ಹೋಗುತ್ತಿರುವ ಹೊಸ ವಿಡಿಯೋವೊಂದು ವೈರಲ್ ಆಗಿದೆ. ಘಟನೆಯ ಹಿನ್ನೆಲೆಯೇನು? ಆಮೇಲೇನಾಯ್ತು? ಇಲ್ಲಿದೆ ಕುತೂಹಲಕರ ಮಾಹಿತಿ.

Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ
ವಿಡಿಯೋದಿಂದ ಸೆರೆಹಿಡಿಯಲಾದ ಚಿತ್ರ
Follow us
| Updated By: shivaprasad.hs

Updated on:Jan 09, 2022 | 4:31 PM

ಬ್ರೆಜಿಲ್: ಖೈದಿಗಳು ಜೈಲಿನಿಂದ ತಪ್ಪಿಸಿಕೊಂಡು ಹೋಗುವುದನ್ನು ಎಲ್ಲರೂ ಸಿನಿಮಾದಲ್ಲಿ ನೋಡಿರುತ್ತಾರೆ. ನಿಜ ಜೀವನದಲ್ಲೂ ಇಂತಹ ಘಟನೆಗಳು ವರದಿಯಾಗುತ್ತಿರುತ್ತವೆ. ಇದೀಗ ಅಂಥದ್ದೇ ಪ್ರಕರಣವೊಂದು ವರದಿಯಾಗಿದ್ದು, ಪೊಲೀಸರು ಇದ್ದ ವ್ಯಾನ್​ನಿಂದಲೇ ಕೈಕೋಳ ತೊಡಿಸಿದ್ದ ಖೈದಿಯೊಬ್ಬ ತಪ್ಪಿಸಿಕೊಂಡಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಬ್ರೆಜಿಲ್​ನ ಪರೈಬಾದ ಅಲಗೊವಾ ನೋವಾದಲ್ಲಿ. ಪೊಲೀಸರು ಖೈದಿಯನ್ನು ವ್ಯಾನ್​ನ ಹಿಂದೆ ಕೈಕೋಳ ತೊಡಿಸಿ ಕರೆದೊಯ್ಯುತ್ತಿದ್ದರು. ರಸ್ತೆಯಲ್ಲಿ ಚಲಿಸುತ್ತಿರುವಂತೆಯೇ ಖೈದಿ ತಪ್ಪಿಸಿಕೊಂಡಿದ್ದಾನೆ. ಖೈದಿ ತಮ್ಮ ಕಣ್ಣೆದುರೇ ತಪ್ಪಿಸಿಕೊಂಡಿದ್ದರೂ ಪೊಲೀಸರಿಗೆ ಇದು ಗೊತ್ತಾಗಿಯೇ ಇಲ್ಲ. ಅಲ್ಲದೇ ವ್ಯಾನ್​ನ ಮಿರರ್​ನಲ್ಲೂ ಅವರು ಗಮನಿಸಿಲ್ಲ. ಪೊಲೀಸ್ ವ್ಯಾನ್ ಮುಂದೆ ಹೋಗಿದೆ. ಖೈದಿ ತಪ್ಪಿಸಿಕೊಂಡಿರುವುದು ಅಲ್ಲೇ ಇದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದನ್ನು ಯುಟ್ಯೂಬ್​ನಲ್ಲಿ ಡಿಸೆಂಬರ್ 28ರಂದು ಅಪ್​ಲೋಡ್ ಮಾಡಲಾಗಿದ್ದು, ವೈರಲ್ ಆಗಿದೆ.

ವಿಡಿಯೋ ನೋಡಿದ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ಹೊರಹಾಕಿದ್ದಾರೆ. ‘‘ನಿಜವಾಗಿಯೂ ಖೈದಿಯನ್ನು ಪೊಲೀಸ್ ವ್ಯಾನ್ ಹಿಂದೆ ಕಟ್ಟಿದ್ದರೇ?’’ ಎಂದು ಒಬ್ಬರು ಪ್ರಶ್ನಿಸಿದ್ದರೆ, ಮತ್ತೋರ್ವರು ಖೈದಿಯ ಬುದ್ಧಿವಂತಿಕೆಯ ಕುರಿತು ಬರೆದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ:

ಘಟನೆಯ ಹಿನ್ನೆಲೆಯೇನು? ಬ್ರೆಜಿಲ್​ನ ಸ್ಥಳೀಯ ಸುದ್ದಿ ಮಾಧ್ಯಮಗಳ ಪ್ರಕಾರ ಖೈದಿ ವ್ಯಾನ್​ನ ಹಿಂಬಾಗಿಲು ತೆರೆದು ಎಸ್ಕೇಪ್ ಆಗಿದ್ದಾನೆ. ಅಲ್ಲದೇ ವ್ಯಾನ್​ನಿಂದ ಹೊರಬಿದ್ದ ತಕ್ಷಣ ತುಸು ಹೊತ್ತು ರಸ್ತೆಯ ಮಧ್ಯದಲ್ಲೇ ನಿಂತಿದ್ದಾನೆ. ಇದರಿಂದಾಗಿ ಪೊಲೀಸರಿಗೆ ಮಿರರ್​ನಲ್ಲಿ ಕಾಣಿಸಿಲ್ಲ ಎನ್ನಲಾಗಿದೆ. ಮತ್ತೊಂದು ಮಾಧ್ಯಮದ ಪ್ರಕಾರ ಪೊಲೀಸರಿಗೆ ಖೈದಿ ತಪ್ಪಿಸಿಕೊಂಡಿದ್ದಾನೆ ಎಂಬುದು ಅರಿವಿಗೆ ಬಂದಿದ್ದೇ ಪೊಲೀಸ್ ಠಾಣೆಗೆ ಬಂದ ಮೇಲಂತೆ!

ಈ ವರೆಗೂ ಆ ಖೈದಿಯನ್ನು ಮತ್ತೆ ಬಂಧಿಸಲಾಗಿಲ್ಲ. ಪ್ರಕರಣದ ಕುರಿತು ಮೇಲಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಪೊಲೀಸರು ಖೈದಿಯನ್ನು ಇರಿಸುವ ಜಾಗದಲ್ಲಿ ಏನಾದರೂ ಸಮಸ್ಯೆಯಿದೆಯೇ ಎಂದು ಪರಿಶೀಲಿಸಲು ತಜ್ಞರನ್ನು ಸಂಪರ್ಕಿಸಿದ್ದಾರೆ ಎಂದೂ ವರದಿಗಳು ಹೇಳಿವೆ.

ಇದನ್ನೂ ಓದಿ:

Viral Video: ವೇದಿಕೆಯಲ್ಲೇ ಬಿಜೆಪಿ ಶಾಸಕನ ಕೆನ್ನೆಗೆ ಹೊಡೆದ ರೈತ; ವಿಡಿಯೋ ವೈರಲ್ ಆಗುತ್ತಿದ್ದಂತೆ ತೇಪೆ ಹಚ್ಚಿದ ಎಂಎಲ್​ಎ

ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?

Published On - 12:34 pm, Sun, 9 January 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ