AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

ಪೊಲೀಸರ ವ್ಯಾನ್​ನಿಂದ ಖೈದಿ ತಪ್ಪಿಸಿಕೊಂಡು ಹೋಗುತ್ತಿರುವ ಹೊಸ ವಿಡಿಯೋವೊಂದು ವೈರಲ್ ಆಗಿದೆ. ಘಟನೆಯ ಹಿನ್ನೆಲೆಯೇನು? ಆಮೇಲೇನಾಯ್ತು? ಇಲ್ಲಿದೆ ಕುತೂಹಲಕರ ಮಾಹಿತಿ.

Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ
ವಿಡಿಯೋದಿಂದ ಸೆರೆಹಿಡಿಯಲಾದ ಚಿತ್ರ
TV9 Web
| Edited By: |

Updated on:Jan 09, 2022 | 4:31 PM

Share

ಬ್ರೆಜಿಲ್: ಖೈದಿಗಳು ಜೈಲಿನಿಂದ ತಪ್ಪಿಸಿಕೊಂಡು ಹೋಗುವುದನ್ನು ಎಲ್ಲರೂ ಸಿನಿಮಾದಲ್ಲಿ ನೋಡಿರುತ್ತಾರೆ. ನಿಜ ಜೀವನದಲ್ಲೂ ಇಂತಹ ಘಟನೆಗಳು ವರದಿಯಾಗುತ್ತಿರುತ್ತವೆ. ಇದೀಗ ಅಂಥದ್ದೇ ಪ್ರಕರಣವೊಂದು ವರದಿಯಾಗಿದ್ದು, ಪೊಲೀಸರು ಇದ್ದ ವ್ಯಾನ್​ನಿಂದಲೇ ಕೈಕೋಳ ತೊಡಿಸಿದ್ದ ಖೈದಿಯೊಬ್ಬ ತಪ್ಪಿಸಿಕೊಂಡಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಬ್ರೆಜಿಲ್​ನ ಪರೈಬಾದ ಅಲಗೊವಾ ನೋವಾದಲ್ಲಿ. ಪೊಲೀಸರು ಖೈದಿಯನ್ನು ವ್ಯಾನ್​ನ ಹಿಂದೆ ಕೈಕೋಳ ತೊಡಿಸಿ ಕರೆದೊಯ್ಯುತ್ತಿದ್ದರು. ರಸ್ತೆಯಲ್ಲಿ ಚಲಿಸುತ್ತಿರುವಂತೆಯೇ ಖೈದಿ ತಪ್ಪಿಸಿಕೊಂಡಿದ್ದಾನೆ. ಖೈದಿ ತಮ್ಮ ಕಣ್ಣೆದುರೇ ತಪ್ಪಿಸಿಕೊಂಡಿದ್ದರೂ ಪೊಲೀಸರಿಗೆ ಇದು ಗೊತ್ತಾಗಿಯೇ ಇಲ್ಲ. ಅಲ್ಲದೇ ವ್ಯಾನ್​ನ ಮಿರರ್​ನಲ್ಲೂ ಅವರು ಗಮನಿಸಿಲ್ಲ. ಪೊಲೀಸ್ ವ್ಯಾನ್ ಮುಂದೆ ಹೋಗಿದೆ. ಖೈದಿ ತಪ್ಪಿಸಿಕೊಂಡಿರುವುದು ಅಲ್ಲೇ ಇದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದನ್ನು ಯುಟ್ಯೂಬ್​ನಲ್ಲಿ ಡಿಸೆಂಬರ್ 28ರಂದು ಅಪ್​ಲೋಡ್ ಮಾಡಲಾಗಿದ್ದು, ವೈರಲ್ ಆಗಿದೆ.

ವಿಡಿಯೋ ನೋಡಿದ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ಹೊರಹಾಕಿದ್ದಾರೆ. ‘‘ನಿಜವಾಗಿಯೂ ಖೈದಿಯನ್ನು ಪೊಲೀಸ್ ವ್ಯಾನ್ ಹಿಂದೆ ಕಟ್ಟಿದ್ದರೇ?’’ ಎಂದು ಒಬ್ಬರು ಪ್ರಶ್ನಿಸಿದ್ದರೆ, ಮತ್ತೋರ್ವರು ಖೈದಿಯ ಬುದ್ಧಿವಂತಿಕೆಯ ಕುರಿತು ಬರೆದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ:

ಘಟನೆಯ ಹಿನ್ನೆಲೆಯೇನು? ಬ್ರೆಜಿಲ್​ನ ಸ್ಥಳೀಯ ಸುದ್ದಿ ಮಾಧ್ಯಮಗಳ ಪ್ರಕಾರ ಖೈದಿ ವ್ಯಾನ್​ನ ಹಿಂಬಾಗಿಲು ತೆರೆದು ಎಸ್ಕೇಪ್ ಆಗಿದ್ದಾನೆ. ಅಲ್ಲದೇ ವ್ಯಾನ್​ನಿಂದ ಹೊರಬಿದ್ದ ತಕ್ಷಣ ತುಸು ಹೊತ್ತು ರಸ್ತೆಯ ಮಧ್ಯದಲ್ಲೇ ನಿಂತಿದ್ದಾನೆ. ಇದರಿಂದಾಗಿ ಪೊಲೀಸರಿಗೆ ಮಿರರ್​ನಲ್ಲಿ ಕಾಣಿಸಿಲ್ಲ ಎನ್ನಲಾಗಿದೆ. ಮತ್ತೊಂದು ಮಾಧ್ಯಮದ ಪ್ರಕಾರ ಪೊಲೀಸರಿಗೆ ಖೈದಿ ತಪ್ಪಿಸಿಕೊಂಡಿದ್ದಾನೆ ಎಂಬುದು ಅರಿವಿಗೆ ಬಂದಿದ್ದೇ ಪೊಲೀಸ್ ಠಾಣೆಗೆ ಬಂದ ಮೇಲಂತೆ!

ಈ ವರೆಗೂ ಆ ಖೈದಿಯನ್ನು ಮತ್ತೆ ಬಂಧಿಸಲಾಗಿಲ್ಲ. ಪ್ರಕರಣದ ಕುರಿತು ಮೇಲಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಪೊಲೀಸರು ಖೈದಿಯನ್ನು ಇರಿಸುವ ಜಾಗದಲ್ಲಿ ಏನಾದರೂ ಸಮಸ್ಯೆಯಿದೆಯೇ ಎಂದು ಪರಿಶೀಲಿಸಲು ತಜ್ಞರನ್ನು ಸಂಪರ್ಕಿಸಿದ್ದಾರೆ ಎಂದೂ ವರದಿಗಳು ಹೇಳಿವೆ.

ಇದನ್ನೂ ಓದಿ:

Viral Video: ವೇದಿಕೆಯಲ್ಲೇ ಬಿಜೆಪಿ ಶಾಸಕನ ಕೆನ್ನೆಗೆ ಹೊಡೆದ ರೈತ; ವಿಡಿಯೋ ವೈರಲ್ ಆಗುತ್ತಿದ್ದಂತೆ ತೇಪೆ ಹಚ್ಚಿದ ಎಂಎಲ್​ಎ

ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?

Published On - 12:34 pm, Sun, 9 January 22

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ