AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ

ಪೊಲೀಸರ ವ್ಯಾನ್​ನಿಂದ ಖೈದಿ ತಪ್ಪಿಸಿಕೊಂಡು ಹೋಗುತ್ತಿರುವ ಹೊಸ ವಿಡಿಯೋವೊಂದು ವೈರಲ್ ಆಗಿದೆ. ಘಟನೆಯ ಹಿನ್ನೆಲೆಯೇನು? ಆಮೇಲೇನಾಯ್ತು? ಇಲ್ಲಿದೆ ಕುತೂಹಲಕರ ಮಾಹಿತಿ.

Viral Video: ಪೊಲೀಸ್ ವ್ಯಾನ್​ನಲ್ಲಿ ಕರೆದೊಯ್ಯುತ್ತಿರುವಾಗಲೇ ಕೈಕೋಳ ತೊಡಿಸಿದ್ದ ಖೈದಿ ಎಸ್ಕೇಪ್; ಇಲ್ಲಿದೆ ವೈರಲ್ ವಿಡಿಯೋ
ವಿಡಿಯೋದಿಂದ ಸೆರೆಹಿಡಿಯಲಾದ ಚಿತ್ರ
TV9 Web
| Edited By: |

Updated on:Jan 09, 2022 | 4:31 PM

Share

ಬ್ರೆಜಿಲ್: ಖೈದಿಗಳು ಜೈಲಿನಿಂದ ತಪ್ಪಿಸಿಕೊಂಡು ಹೋಗುವುದನ್ನು ಎಲ್ಲರೂ ಸಿನಿಮಾದಲ್ಲಿ ನೋಡಿರುತ್ತಾರೆ. ನಿಜ ಜೀವನದಲ್ಲೂ ಇಂತಹ ಘಟನೆಗಳು ವರದಿಯಾಗುತ್ತಿರುತ್ತವೆ. ಇದೀಗ ಅಂಥದ್ದೇ ಪ್ರಕರಣವೊಂದು ವರದಿಯಾಗಿದ್ದು, ಪೊಲೀಸರು ಇದ್ದ ವ್ಯಾನ್​ನಿಂದಲೇ ಕೈಕೋಳ ತೊಡಿಸಿದ್ದ ಖೈದಿಯೊಬ್ಬ ತಪ್ಪಿಸಿಕೊಂಡಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿರುವುದು ಬ್ರೆಜಿಲ್​ನ ಪರೈಬಾದ ಅಲಗೊವಾ ನೋವಾದಲ್ಲಿ. ಪೊಲೀಸರು ಖೈದಿಯನ್ನು ವ್ಯಾನ್​ನ ಹಿಂದೆ ಕೈಕೋಳ ತೊಡಿಸಿ ಕರೆದೊಯ್ಯುತ್ತಿದ್ದರು. ರಸ್ತೆಯಲ್ಲಿ ಚಲಿಸುತ್ತಿರುವಂತೆಯೇ ಖೈದಿ ತಪ್ಪಿಸಿಕೊಂಡಿದ್ದಾನೆ. ಖೈದಿ ತಮ್ಮ ಕಣ್ಣೆದುರೇ ತಪ್ಪಿಸಿಕೊಂಡಿದ್ದರೂ ಪೊಲೀಸರಿಗೆ ಇದು ಗೊತ್ತಾಗಿಯೇ ಇಲ್ಲ. ಅಲ್ಲದೇ ವ್ಯಾನ್​ನ ಮಿರರ್​ನಲ್ಲೂ ಅವರು ಗಮನಿಸಿಲ್ಲ. ಪೊಲೀಸ್ ವ್ಯಾನ್ ಮುಂದೆ ಹೋಗಿದೆ. ಖೈದಿ ತಪ್ಪಿಸಿಕೊಂಡಿರುವುದು ಅಲ್ಲೇ ಇದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದನ್ನು ಯುಟ್ಯೂಬ್​ನಲ್ಲಿ ಡಿಸೆಂಬರ್ 28ರಂದು ಅಪ್​ಲೋಡ್ ಮಾಡಲಾಗಿದ್ದು, ವೈರಲ್ ಆಗಿದೆ.

ವಿಡಿಯೋ ನೋಡಿದ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ಹೊರಹಾಕಿದ್ದಾರೆ. ‘‘ನಿಜವಾಗಿಯೂ ಖೈದಿಯನ್ನು ಪೊಲೀಸ್ ವ್ಯಾನ್ ಹಿಂದೆ ಕಟ್ಟಿದ್ದರೇ?’’ ಎಂದು ಒಬ್ಬರು ಪ್ರಶ್ನಿಸಿದ್ದರೆ, ಮತ್ತೋರ್ವರು ಖೈದಿಯ ಬುದ್ಧಿವಂತಿಕೆಯ ಕುರಿತು ಬರೆದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ:

ಘಟನೆಯ ಹಿನ್ನೆಲೆಯೇನು? ಬ್ರೆಜಿಲ್​ನ ಸ್ಥಳೀಯ ಸುದ್ದಿ ಮಾಧ್ಯಮಗಳ ಪ್ರಕಾರ ಖೈದಿ ವ್ಯಾನ್​ನ ಹಿಂಬಾಗಿಲು ತೆರೆದು ಎಸ್ಕೇಪ್ ಆಗಿದ್ದಾನೆ. ಅಲ್ಲದೇ ವ್ಯಾನ್​ನಿಂದ ಹೊರಬಿದ್ದ ತಕ್ಷಣ ತುಸು ಹೊತ್ತು ರಸ್ತೆಯ ಮಧ್ಯದಲ್ಲೇ ನಿಂತಿದ್ದಾನೆ. ಇದರಿಂದಾಗಿ ಪೊಲೀಸರಿಗೆ ಮಿರರ್​ನಲ್ಲಿ ಕಾಣಿಸಿಲ್ಲ ಎನ್ನಲಾಗಿದೆ. ಮತ್ತೊಂದು ಮಾಧ್ಯಮದ ಪ್ರಕಾರ ಪೊಲೀಸರಿಗೆ ಖೈದಿ ತಪ್ಪಿಸಿಕೊಂಡಿದ್ದಾನೆ ಎಂಬುದು ಅರಿವಿಗೆ ಬಂದಿದ್ದೇ ಪೊಲೀಸ್ ಠಾಣೆಗೆ ಬಂದ ಮೇಲಂತೆ!

ಈ ವರೆಗೂ ಆ ಖೈದಿಯನ್ನು ಮತ್ತೆ ಬಂಧಿಸಲಾಗಿಲ್ಲ. ಪ್ರಕರಣದ ಕುರಿತು ಮೇಲಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಪೊಲೀಸರು ಖೈದಿಯನ್ನು ಇರಿಸುವ ಜಾಗದಲ್ಲಿ ಏನಾದರೂ ಸಮಸ್ಯೆಯಿದೆಯೇ ಎಂದು ಪರಿಶೀಲಿಸಲು ತಜ್ಞರನ್ನು ಸಂಪರ್ಕಿಸಿದ್ದಾರೆ ಎಂದೂ ವರದಿಗಳು ಹೇಳಿವೆ.

ಇದನ್ನೂ ಓದಿ:

Viral Video: ವೇದಿಕೆಯಲ್ಲೇ ಬಿಜೆಪಿ ಶಾಸಕನ ಕೆನ್ನೆಗೆ ಹೊಡೆದ ರೈತ; ವಿಡಿಯೋ ವೈರಲ್ ಆಗುತ್ತಿದ್ದಂತೆ ತೇಪೆ ಹಚ್ಚಿದ ಎಂಎಲ್​ಎ

ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?

Published On - 12:34 pm, Sun, 9 January 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ