AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೂಪರ್​ಫಾಸ್ಟ್​ ವೇಗದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡುವ ಉದ್ಯೋಗಿ, ಅಸಲಿ ಬುಲೆಟ್ ಟ್ರೇನ್ ಎಂದ ಇಂಟರ್ನೆಟ್

ಈ ವಿಡಿಯೊವನ್ನು 8 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, ಸಾವಿರಾರು ಮಂದಿ ಪ್ರತಿಕ್ರಿಯಿಸಿದ್ದಾರೆ.

Viral Video: ಸೂಪರ್​ಫಾಸ್ಟ್​ ವೇಗದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡುವ ಉದ್ಯೋಗಿ, ಅಸಲಿ ಬುಲೆಟ್ ಟ್ರೇನ್ ಎಂದ ಇಂಟರ್ನೆಟ್
ರೈಲ್ವೆ ನಿಲ್ದಾಣದಲ್ಲಿ ಅತ್ಯಂತ ವೇಗವಾಗಿ ಟಿಕೆಟ್ ಕೊಡುವ ವ್ಯಕ್ತಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jul 03, 2022 | 11:15 AM

Share

ಪ್ರಯಾಣಿಕರಿಗೆ ಟಿಕೆಟ್ ತೆಗೆದುಕೊಳ್ಳಲು ನೆರವಾಗುವ ರೈಲ್ವೆ ಉದ್ಯೋಗಿಯೊಬ್ಬರ ವೇಗದ ಕಾರ್ಯನಿರ್ವಹಣೆಯು ಇಂಟರ್ನೆಟ್​ನಲ್ಲಿ ಸಂಚಲನ ಮೂಡಿಸಿದೆ. ಅವಡುಗಚ್ಚುವಂತಿರುವ ಈ ವಿಡಿಯೊದಲ್ಲಿ ರೈಲ್ವೆ ಉದ್ಯೋಗಿಯೊಬ್ಬರು ಅತ್ಯಂತ ವೇಗವಾಗಿ ಟಿಕೆಟ್​ಗಳನ್ನು ಬುಕ್ ಮಾಡಿದ್ದಾರೆ. ಈ ಮನುಷ್ಯನ ಪ್ರಾವಿಣ್ಯತೆಯು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೊ ನೋಡಿದರೆ ಖಂಡಿತ ನೀವೂ ಮೆಚ್ಚಿಕೊಳ್ಳುತ್ತೀರಿ.

ಟ್ವಿಟರ್​ನಲ್ಲಿ ಶೇರ್ ಮಾಡಿರುವ ವಿಡಿಯೊ ತುಣುಕಿನಲ್ಲಿ ವ್ಯಕ್ತಿಯೊಬ್ಬರು ಟಿಕೆಟ್ ವೆಂಡಿಂಗ್ ಯಂತ್ರದ ಎದುರು ನಿಂತು ಟಿಕೆಟ್​ಗಳನ್ನು ವೇಗವಾಗಿ ನೀಡುತ್ತಿದ್ದಾರೆ. ತಮ್ಮ ಹಿಂದೆ ನಿಂತಿರುವ ಜನರಿಗಾಗಿ ಮಿಂಚಿನ ವೇಗದಲ್ಲಿ ಕಂಪ್ಯೂಟರ್ ಸ್ಕ್ರೀನ್ ಮೇಲೆ ಕೈಯಾಡಿಸುತ್ತಾ ಟಿಕೆಟ್​ಗಳನ್ನು ಕೊಡುತ್ತಿದ್ದಾರೆ.

‘ಭಾರತೀಯ ರೈಲ್ವೆಯ ಯಾವುದೋ ನಿಲ್ದಾಣದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಕೇವಲ 15 ಸೆಕೆಂಡ್​ಗಳಲ್ಲಿ ಮೂವರು ಪ್ರಯಾಣಿಕರಿಗೆ ಟಿಕೆಟ್ ಕೊಟ್ಟಿದ್ದಾರೆ’ ಎಂದು ವಿಡಿಯೊದೊಂದಿಗೆ ಶೇರ್ ಮಾಡಿರುವ ಒಕ್ಕಣೆಯು ವಿವರಿಸುತ್ತದೆ.

ಈ ವಿಡಿಯೊವನ್ನು 8 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, ಸಾವಿರಾರು ಮಂದಿ ಪ್ರತಿಕ್ರಿಯಿಸಿದ್ದಾರೆ. ಈ ವ್ಯಕ್ತಿಯ ಚುರುಕುತನ ಮತ್ತು ಕೌಶಲವನ್ನು ಸಾಕಷ್ಟು ಜನರು ಮೆಚ್ಚಿಕೊಂಡಿದ್ದಾರೆ. ಈತನ ಸಾಮರ್ಥ್ಯ ಗುರುತಿಸಿ, ಸೂಕ್ತ ಮನ್ನಣೆ ಒದಗಿಸಿಕೊಡಬೇಕು. ಭಾರತೀಯ ರೈಲ್ವೆಯ ಅಧಿಕಾರಿಗಳು ಈ ಕೆಲಸ ಮಾಡಬೇಕು ಎಂದು ಕೆಲವರು ಆಗ್ರಹಿಸಿದ್ದಾರೆ. ಕೆಲವರು ಈ ವ್ಯಕ್ತಿಯನ್ನು ನವಿ ಮುಂಬೈ ನಿಲ್ದಾಣದಲ್ಲಿ ನೋಡಿರುವುದಾಗಿ ನೆನಪು ಹಂಚಿಕೊಂಡಿದ್ದಾರೆ.

ಈ ವೈರಲ್ ಟ್ವೀಟ್​ಗೆ ಬಂದಿರುವ ಕೆಲ ಪ್ರತಿಕ್ರಿಯೆಗಳ ಸ್ಯಾಂಪಲ್ ಹೀಗಿದೆ ನೋಡಿ…

Published On - 11:15 am, Sun, 3 July 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ