AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಂಗ್ರಾ ನೃತ್ಯ ಮಾಡಿದ ರಾವಣ ನೆಟ್ಟಿಗರ ಅಚ್ಚರಿ, ವಿಡಿಯೋ ವೈರಲ್

Bhangra Dance : ಪ್ರೇಕ್ಷಕರನ್ನು ರಂಜಿಸಲು ರಾವಣ ಪಾತ್ರಧಾರಿ ಭಾಂಗ್ರಾ ನೃತ್ಯ ಮಾಡಿದ ವಿಡಿಯೋ ವೈರಲ್ ಮತ್ತೆ ವೈರಲ್ ಆಗುತ್ತಿದೆ. ನೀವು ನೋಡಿ ಆನಂದಿಸಿ.

ಭಾಂಗ್ರಾ ನೃತ್ಯ ಮಾಡಿದ ರಾವಣ ನೆಟ್ಟಿಗರ ಅಚ್ಚರಿ, ವಿಡಿಯೋ ವೈರಲ್
ರಾವಣನ ಭಾಂಗ್ರಾ
TV9 Web
| Edited By: ಶ್ರೀದೇವಿ ಕಳಸದ|

Updated on:Oct 06, 2022 | 2:37 PM

Share

Viral Video : ಹತ್ತುದಿನಗಳ ಕಾಲ ದೇಶಾದ್ಯಂತ ವಿಜಯದಶಮಿಯ ಸಂಭ್ರಮವಿತ್ತು. ಈ ಸಂದರ್ಭದಲ್ಲಿ ಎಲ್ಲೆಡೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನೋರಂಜಾ ಕಾರ್ಯಕ್ರಮಗಳು ಏರ್ಪಾಡಾಗಿದ್ದವು. ಈ ಪೈಕಿ  ಪ್ರೇಕ್ಷಕರನ್ನು ರಂಜಿಸಲು ರಾವಣ ಪಾತ್ರಧಾರಿಯು ಭಾಂಗ್ರಾ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ. 30 ಸೆಕೆಂಡುಗಳ ವಿಡಿಯೋ ಹಳೆಯದೇ ಆಗಿದ್ದರೂ ಈಗ ಮತ್ತೆ ಎಲ್ಲರನ್ನೂ ಹಿಡಿದಿಡುತ್ತಿದೆ. ರಾಮಲೀಲಾದ ಪಾತ್ರಗಳು ವೇಷಭೂಷಣ ಧರಿಸಿ ನರ್ತಿಸಿರುವುದು ಆಕರ್ಷಕವಾಗಿದೆ. ‘ಮಿತ್ರ ದ ನಾ ಚಲ್ದಾ’ ಪಂಜಾಬಿ ಹಾಡಿಗೆ ರಾವಣ ಭಾಂಗ್ರಾ ನರ್ತಿಸುವುದಂತೂ ಬಹಳ ಸುಂದರವಾಗಿದೆ.

ಈ ನೃತ್ಯಕ್ಕೆ ರಾವಣನನ್ನು ಪ್ರೇಕ್ಷಕರು ಹುರಿದುಂಬಿಸುತ್ತಿರುವುದನ್ನು ನೋಡಬಹುದು. ಜೊತೆಗಿರುವ ಪಾತ್ರಧಾರಿಗಳು ಅವನ ಹೆಜ್ಜೆಗೆ ಹೆಜ್ಜೆ ಸೇರಿಸುವುದನ್ನು ಕಾಣಬಹುದು. ಈ ವಿಡಿಯೋ ಈಗಾಗಲೇ 23,000ಕ್ಕೂ ಹೆಚ್ಚು ವೀಕ್ಷಕರನ್ನು ತಲುಪಿದೆ. ಸುಮಾರು 300 ರೀಟ್ವೀಟ್​ ಹೊಂದಿದೆ.

ಸೂಪರ್​ ಆಗಿದೆ ಪಂಜಾಬಿ ನೃತ್ಯ ಎಂದಿದ್ದಾರೆ ಒಬ್ಬ ಖಾತೆದಾರರು. ಹಿಂದೆ ಎಂದೂ ನೋಡದಂಥ ಅತ್ಯಂತ ಉಲ್ಲಾಸದ ವಿಡಿಯೋ ಇದು ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋ ನೋಡಿ ನನ್ನ ಈ ದಿನ ಸಾರ್ಥಕವಾಯಿತು ಎಂದಿದ್ದಾರೆ ಮಗದೊಬ್ಬರು.

ನಿಮಗೇನೆನ್ನಿಸುತ್ತಿದೆ ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:16 am, Thu, 6 October 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ