Viral Video : ಈ ಮಳೆಗೆ ಸ್ಕೂಟರ್ ಸೀಟಿನೊಳಗೆ ಬೆಚ್ಚಗೆ ಕುಳಿತಿದ್ದ ಹೆಬ್ಬಾವು, ಬೈಕ್ ಸವಾರ ಶಾಕ್

ಮಳೆಗಾಲದಲ್ಲಿ ಹಾವುಗಳು ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಳ್ಳುವುದೇ ಹೆಚ್ಚು, ಅದರಲ್ಲಿ ಬೆಚ್ಚಗಿರುವ ಸ್ಥಳಗಳಲ್ಲಿ ಕಾಣಿಸಿಕೊಳ್ಳುತ್ತವೆ. ಈಗಾಗಲೇ ಇಂತಹ ಅದೆಷ್ಟೋ ಘಟನೆಗಳು ಬೆಳಕಿಗೆ ಬಂದಿವೆ. ಆದರೆ ಇದೀಗ ಸಣ್ಣ ಹೆಬ್ಬಾವೊಂದು ಸ್ಕೂಟರ್‌ನ ಪೆಟ್ರೋಲ್ ಟ್ಯಾಂಕಿಗೆ ಸುರುಳಿ ಸುತ್ತಿಕೊಂಡು ಮಲಗಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿ ನೆಟ್ಟಿಗರು ಗಾಬರಿಗೊಂಡಿದ್ದಾರೆ.

Viral Video : ಈ ಮಳೆಗೆ ಸ್ಕೂಟರ್ ಸೀಟಿನೊಳಗೆ ಬೆಚ್ಚಗೆ ಕುಳಿತಿದ್ದ ಹೆಬ್ಬಾವು, ಬೈಕ್ ಸವಾರ ಶಾಕ್
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 29, 2024 | 4:17 PM

ಹಾವುಗಳೆಂದರೆ ಎಲ್ಲರಿಗೂ ಭಯನೇ, ಇದನ್ನು ನೋಡುವುದು ಬಿಡಿ, ಹಾವು ಎಂದರೆ ಸಾಕು ನಡುಕ ಶುರುವಾಗುತ್ತದೆ. ಇನ್ನು ನಮ್ಮ ಕಣ್ಣಿಗೆ ಬಿದ್ದರಂತೂ ಒಂದು ಕ್ಷಣವು ಅಲ್ಲಿ ನಿಲ್ಲುವುದೇ ಇಲ್ಲ ಬಿಡಿ. ಈ ಮಳೆಗಾಲದಲ್ಲಿ ವಿಷಕಾರಿ ಹಾವುಗಳ ಉಪಟಳ ಹೆಚ್ಚು, ಈ ಋತುವಿನಲ್ಲಿ ಬೆಚ್ಚಗಿರುವ ತಾಣಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಹೀಗಾಗಿ ಮನೆಯ ಮೂಲೆ, ಶೂ ಹಾಗೂ ಬೈಕ್ ಸೇರಿದಂತೆ ಇನ್ನಿತ್ತರ ಸ್ಥಳಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಕಾರಣ ಸ್ವಲ್ಪ ಎಚ್ಚರ ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಈ ಹಾವುಗಳಿಂದ ಪ್ರಾಣಕ್ಕೆ ಕುತ್ತು ಬರುವುದು ಖಂಡಿತ. ಇದೀಗ ಸ್ಕೂಟರಿನ ಪೆಟ್ರೋಲ್ ಟ್ಯಾಂಕ್‌ಗೆ ಸಣ್ಣ ಹೆಬ್ಬಾವೊಂದು ಸುತ್ತಿಕೊಂಡಿರುವ ವಿಡಿಯೋ ಮೈ ಜುಮ್ ಎನ್ನುವಂತಿದೆ.

ಸಾಲಿತ್ ಮುಲ್ಲಂಬತ್ ಎಂಬ ವ್ಯಕ್ತಿಯೂ ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋದ ಪ್ರಾರಂಭದಲ್ಲಿ ವ್ಯಕ್ತಿಯೊಬ್ಬರು, ಒಂದು ಕೋಲಿನಿಂದ ಸ್ಕೂಟರ್‌ ಸೀಟನ್ನು ತೆರೆದಿದ್ದಾರೆ. ಈ ವೇಳೆ ಸಣ್ಣ ಗಾತ್ರದ ಹೆಬ್ಬಾವೊಂದು ಪೆಟ್ರೋಲ್ ಟ್ಯಾಂಕ್ ಸುತ್ತ ಸುರುಳಿ ಸುತ್ತಿಕೊಂಡು ಮಲಗಿರುವುದು ಕಾಣಬಹುದು. ಈ ಹಾವು ಅಲ್ಲಿಗೆ ಹೇಗೆ ಹೋಯಿತು ಎನ್ನುವುದು ಮಾತ್ರ ತಿಳಿದಿಲ್ಲ. ಆದರೆ ವ್ಯಕ್ತಿಯೂ ಮಲಯಾಳಂ ಮಾತನಾಡುತ್ತಿರುವ ಕಾರಣ ಈ ಘಟನೆ ನಡೆದಿರುವುದು ಕೇರಳದ್ದು ಎನ್ನಲಾಗಿದೆ.

ಇದನ್ನೂ ಓದಿ: ಪುತ್ತೂರಿನಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಹೊತ್ತಿ ಉರಿದ ಮನೆ, ಕಲ್ಲುರ್ಟಿ ದೈವದ ಪೀಠಕ್ಕೆ ತಗಲದ ಬೆಂಕಿ

ವೈರಲ್​​ ವಿಡಿಯೋ:

ವೈರಲ್ ಆಗಿರುವ ಈ ವಿಡಿಯೋವ ಏಳು ಮಿಲಿಯನ್ ಗೂ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಬಳಕೆದಾರನೊಬ್ಬ, “ಪೆಟ್ರೋಲ್ ಟ್ಯಾಂಕ್‌ನಲ್ಲಿ ಎಷ್ಟು ಇಂಧನವಿದೆ ಎಂದು ನೋಡಲು ಅದು ಅಲ್ಲಿಗೆ ಹೋದಂತೆ ತೋರುತ್ತಿದೆ!” ಎಂದಿದ್ದಾನೆ. ಮತ್ತೊಬ್ಬನು “ಇದು ಭಾರತೀಯ ಹೆಬ್ಬಾವು, ಇದು ವಿಷರಹಿತವಾಗಿದೆ” ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌