AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಆಕಳಿಸಿದಾಗ; ‘ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ’ ಎಂದ ನೆಟ್ಟಿಗ

Snake : ಹಸು, ಬೆಕ್ಕು, ನಾಯಿ ಆಕಳಿಸುವುದನ್ನು ನೋಡಿದ್ದೀರಿ. ಆದರೆ ಹಾವು? ಬಹುಶಃ ನೀವು ಹಾವಿನ ಆಕಳಿಕೆ ಈತನಕ ನೋಡಿಯೇ ಇಲ್ಲವೇನೋ. ಬನ್ನಿ ಹಾಗಿದ್ದರೆ ಈ ವಿಡಿಯೋ ನೋಡಿ.

ಹಾವು ಆಕಳಿಸಿದಾಗ; 'ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ' ಎಂದ ನೆಟ್ಟಿಗ
ಆಕಳಿಸುತ್ತಿರುವ ಹಾವು
TV9 Web
| Edited By: |

Updated on:May 03, 2023 | 12:07 PM

Share

Viral Video : ಹಾವು! ಆದಿ, ಜಾನಪದ ಮತ್ತು ಪುರಾಣಕಾಲದಿಂದಲೂ ಈ ಜೀವಿಗೆ ವಿಶಿಷ್ಟ ಸ್ಥಾನ. ಭಯ ಭಕ್ತಿ ಮೋಹದೊಂದಿಗೆ ಮನುಷ್ಯನನ್ನು ಅಂತರದಲ್ಲಿರಿಸಿಕೊಂಡೇ ತನ್ನ ಬಗ್ಗೆ ವಿಶೇಷ ಆಕರ್ಷಣೆ ಉಳಿಸಿಕೊಂಡು ಬಂದಿದೆ. ಕಾವ್ಯ, ಸಿನೆಮಾ, ನಾಟಕ, ನೃತ್ಯ ಮುಂತಾದ ಕಲಾಪ್ರಕಾರಗಳಲ್ಲಿ ನಾಗರಾಜ, ನಾಗಿಣಿಯರ ವೈಭವ ಹೇಳತೀರದು. ಉಳಿದಂತೆ ಈ ಚುರುಕಾದ ಜೀವಿಗಳ ಚಲನವಲನದ ಬಗ್ಗೆಯಂತೂ ಎಂದಿಗೂ ಕುತೂಹಲ ಕಟ್ಟಿಟ್ಟಿದ್ದೇ.

ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಬಹುಶಃ ಹಾವು ಆಕಳಿಸುವುದನ್ನು ನೀವು ನೋಡುತ್ತಿರುವುದು ಇದೇ ಮೊದಲಿರಬಹುದು. ಯಾವ ಪರಿ ಇದು ತನ್ನ ಬಾಯನ್ನು ಹಿಗ್ಗಿಸಿದೆ ನೋಡಿ. ಅಚ್ಚರಿ ಮತ್ತು ಭಯ ಒಮ್ಮೆಲೇ ಆಗುವುದಲ್ಲದೆ?

ಇದನ್ನೂ ಓದಿ : ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​

ಇಷ್ಟೊಂದು ದೊಡ್ಡದಾಗಿ ಆಕಳಿಸಲು ಅದೆಷ್ಟು ರಾತ್ರಿ ನಿದ್ದೆಗೆಟ್ಟಿತ್ತೋ ಏನೋ. ಯಾವೂರಿಗೆ ಪ್ರವಾಸಕ್ಕೆ ಹೋಗಿತ್ತೋ ಏನೋ. ನೆಟ್ಟಿಗರೊಬ್ಬರಂತೂ, ಬೆಳಗಿನ ಹೊತ್ತು ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ ಎಂದಿದ್ದಾರೆ. ಹಾವನ್ನು ಮತ್ತು ಹೆಂಡತಿಯನ್ನು ಹೀಗೆಲ್ಲ ಪ್ರೀತಿಸುವವರೂ ಇದ್ದಾರೆ ಎಂದಾಯಿತಲ್ಲವೆ?

ಇದನ್ನೂ ಓದಿ : Viral Video: ಏರ್​ಪೋರ್ಟ್​ನಲ್ಲಿ ತಪಾಸಣೆಗೆಂದು ಮಹಿಳೆಯ ಬ್ಯಾಗ್​ ತೆರೆದು ನೋಡಿ ದಂಗಾದ ಸಿಬ್ಬಂದಿ, ಅಲ್ಲಿತ್ತು 22 ಜೀವಂತ ಹಾವುಗಳು

ಮುದ್ದು ಮಗುವಿನಂತೆ ಇದು ಎಷ್ಟು ನಿರಾಯಾಸವಾಗಿ ಆಕಳಿಸಿದೆಯಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ. ಆಹಾ ಇದನ್ನು ಈಗಲೇ ಎತ್ತಿಕೊಂಡು ಮಲಗಿಸಬೇಕು ಎನ್ನಿಸುತ್ತಿದೆ ಎಂದು ಮಗದೊಬ್ಬರು ಹೇಳಿದ್ದಾರೆ. ಈ ವಿಡಿಯೋ ನೋಡಿದ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:05 pm, Wed, 3 May 23

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​