ಹಾವು ಆಕಳಿಸಿದಾಗ; ‘ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ’ ಎಂದ ನೆಟ್ಟಿಗ

Snake : ಹಸು, ಬೆಕ್ಕು, ನಾಯಿ ಆಕಳಿಸುವುದನ್ನು ನೋಡಿದ್ದೀರಿ. ಆದರೆ ಹಾವು? ಬಹುಶಃ ನೀವು ಹಾವಿನ ಆಕಳಿಕೆ ಈತನಕ ನೋಡಿಯೇ ಇಲ್ಲವೇನೋ. ಬನ್ನಿ ಹಾಗಿದ್ದರೆ ಈ ವಿಡಿಯೋ ನೋಡಿ.

ಹಾವು ಆಕಳಿಸಿದಾಗ; 'ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ' ಎಂದ ನೆಟ್ಟಿಗ
ಆಕಳಿಸುತ್ತಿರುವ ಹಾವು
Follow us
| Updated By: ಶ್ರೀದೇವಿ ಕಳಸದ

Updated on:May 03, 2023 | 12:07 PM

Viral Video : ಹಾವು! ಆದಿ, ಜಾನಪದ ಮತ್ತು ಪುರಾಣಕಾಲದಿಂದಲೂ ಈ ಜೀವಿಗೆ ವಿಶಿಷ್ಟ ಸ್ಥಾನ. ಭಯ ಭಕ್ತಿ ಮೋಹದೊಂದಿಗೆ ಮನುಷ್ಯನನ್ನು ಅಂತರದಲ್ಲಿರಿಸಿಕೊಂಡೇ ತನ್ನ ಬಗ್ಗೆ ವಿಶೇಷ ಆಕರ್ಷಣೆ ಉಳಿಸಿಕೊಂಡು ಬಂದಿದೆ. ಕಾವ್ಯ, ಸಿನೆಮಾ, ನಾಟಕ, ನೃತ್ಯ ಮುಂತಾದ ಕಲಾಪ್ರಕಾರಗಳಲ್ಲಿ ನಾಗರಾಜ, ನಾಗಿಣಿಯರ ವೈಭವ ಹೇಳತೀರದು. ಉಳಿದಂತೆ ಈ ಚುರುಕಾದ ಜೀವಿಗಳ ಚಲನವಲನದ ಬಗ್ಗೆಯಂತೂ ಎಂದಿಗೂ ಕುತೂಹಲ ಕಟ್ಟಿಟ್ಟಿದ್ದೇ.

ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಬಹುಶಃ ಹಾವು ಆಕಳಿಸುವುದನ್ನು ನೀವು ನೋಡುತ್ತಿರುವುದು ಇದೇ ಮೊದಲಿರಬಹುದು. ಯಾವ ಪರಿ ಇದು ತನ್ನ ಬಾಯನ್ನು ಹಿಗ್ಗಿಸಿದೆ ನೋಡಿ. ಅಚ್ಚರಿ ಮತ್ತು ಭಯ ಒಮ್ಮೆಲೇ ಆಗುವುದಲ್ಲದೆ?

ಇದನ್ನೂ ಓದಿ : ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​

ಇಷ್ಟೊಂದು ದೊಡ್ಡದಾಗಿ ಆಕಳಿಸಲು ಅದೆಷ್ಟು ರಾತ್ರಿ ನಿದ್ದೆಗೆಟ್ಟಿತ್ತೋ ಏನೋ. ಯಾವೂರಿಗೆ ಪ್ರವಾಸಕ್ಕೆ ಹೋಗಿತ್ತೋ ಏನೋ. ನೆಟ್ಟಿಗರೊಬ್ಬರಂತೂ, ಬೆಳಗಿನ ಹೊತ್ತು ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ ಎಂದಿದ್ದಾರೆ. ಹಾವನ್ನು ಮತ್ತು ಹೆಂಡತಿಯನ್ನು ಹೀಗೆಲ್ಲ ಪ್ರೀತಿಸುವವರೂ ಇದ್ದಾರೆ ಎಂದಾಯಿತಲ್ಲವೆ?

ಇದನ್ನೂ ಓದಿ : Viral Video: ಏರ್​ಪೋರ್ಟ್​ನಲ್ಲಿ ತಪಾಸಣೆಗೆಂದು ಮಹಿಳೆಯ ಬ್ಯಾಗ್​ ತೆರೆದು ನೋಡಿ ದಂಗಾದ ಸಿಬ್ಬಂದಿ, ಅಲ್ಲಿತ್ತು 22 ಜೀವಂತ ಹಾವುಗಳು

ಮುದ್ದು ಮಗುವಿನಂತೆ ಇದು ಎಷ್ಟು ನಿರಾಯಾಸವಾಗಿ ಆಕಳಿಸಿದೆಯಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ. ಆಹಾ ಇದನ್ನು ಈಗಲೇ ಎತ್ತಿಕೊಂಡು ಮಲಗಿಸಬೇಕು ಎನ್ನಿಸುತ್ತಿದೆ ಎಂದು ಮಗದೊಬ್ಬರು ಹೇಳಿದ್ದಾರೆ. ಈ ವಿಡಿಯೋ ನೋಡಿದ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:05 pm, Wed, 3 May 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ