AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೊಸರು ತರಲು ಮಾರ್ಗಮಧ್ಯೆ ರೈಲು ನಿಲ್ಲಿಸಿದ ಚಾಲಕ ಅಮಾನತು!

ಲಾಹೋರ್‌ನ ರೈಲ್ವೇ ನಿಲ್ದಾಣಕ್ಕೂ ಮೊದಲು ಮೊಸರು ಖರೀದಿಸಲು ಪಾಕಿಸ್ತಾನದ ರೈಲು ಚಾಲಕ ಮತ್ತು ಅವರ ಸಹಾಯಕ ರೈಲನ್ನು ನಿಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

Viral Video: ಮೊಸರು ತರಲು ಮಾರ್ಗಮಧ್ಯೆ ರೈಲು ನಿಲ್ಲಿಸಿದ ಚಾಲಕ ಅಮಾನತು!
ಲಾಹೋರ್​ನ ರೈಲು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 08, 2021 | 9:21 PM

ಲಾಹೋರ್: ಸಾಮಾನ್ಯವಾಗಿ ಬಸ್​, ಲಾರಿ ಡ್ರೈವರ್​​ಗಳು ಊಟಕ್ಕೆಂದು ತಮ್ಮ ಖಾಯಂ ಹೋಟೆಲ್​ ಬಳಿ ವಾಹನ ನಿಲ್ಲಿಸಿ ಪಾರ್ಸಲ್ ಕಟ್ಟಿಸಿಕೊಳ್ಳುತ್ತಾರೆ. ಬಸ್ ಚಾಲಕರು ಈ ರೀತಿ ಕೆಲಕಾಲ ಬಸ್​ ನಿಲ್ಲಿಸಿದರೂ ಅದರ ಪ್ರಯಾಣಿಕರು ಹೆಚ್ಚೇನೂ ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ, ರೈಲು ಚಾಲಕ ಈ ರೀತಿ ತನಗೆ ಬೇಕಾದ ಕಡೆ ರೈಲು ನಿಲ್ಲಿಸಿದರೆ ಪ್ರಯಾಣಿಕರು ಸುಮ್ಮನಿರಲು ಸಾಧ್ಯವೇ? ರೈಲು ನಿಗದಿತ ನಿಲ್ದಾಣವನ್ನು ಹೊರತುಪಡಿಸಿ ಬೇರೆಡೆ ನಿಲ್ಲುವಂತಿಲ್ಲ. ಯಾರಾದರೂ ಚೈನ್ ಎಳೆದು ರೈಲನ್ನು ತುರ್ತಾಗಿ ನಿಲ್ಲಿಸಿದರೂ ಅದಕ್ಕೆ ಅಷ್ಟೇ ಗಂಭೀರವಾದ ಕಾರಣವಿಲ್ಲದಿದ್ದರೆ ಅವರಿಗೆ ದಂಡ ವಿಧಿಸಬಹುದು, ಜೈಲಿಗೂ ಹಾಕಬಹುದು.

ಲಾಹೋರ್‌ನ ರೈಲ್ವೇ ನಿಲ್ದಾಣಕ್ಕೂ ಮೊದಲು ಮೊಸರು ಖರೀದಿಸಲು ಪಾಕಿಸ್ತಾನದ ರೈಲು ಚಾಲಕ ಮತ್ತು ಅವರ ಸಹಾಯಕ ರೈಲನ್ನು ನಿಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ ರೈಲು ಚಾಲಕನ ಸಹಾಯಕನು ಮೊಸರು ಪ್ಯಾಕೆಟ್ ಹಿಡಿದು ರೈಲಿನತ್ತ ವಾಪಾಸ್ ಆಗುವುದನ್ನು ನೋಡಬಹುದು. ಈ ಘಟನೆಯು ಪಾಕಿಸ್ತಾನದಲ್ಲಿ ರೈಲ್ವೆಯ ಸುರಕ್ಷತೆ ಬಗ್ಗೆ ಪ್ರಶ್ನೆಯೇಳುವಂತೆ ಮಾಡಿದೆ. ಪಾಕಿಸ್ತಾನದಲ್ಲಿ ಚಾಲಕರ ನಿರ್ಲಕ್ಷ್ಯದಿಂದ ರೈಲು ಅಪಘಾತಗಳು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೀಗೆ ಮನಬಂದಂತೆ ರೈಲನ್ನು ನಿಲ್ಲಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಹೀಗೆ ರೈಲನ್ನು ನಿಲ್ಲಿಸಿ, ಮೊಸರು ತಂದ ಇಬ್ಬರು ರೈಲ್ವೆ ಸಿಬ್ಬಂದಿಯನ್ನು ರಾಣಾ ಮೊಹಮ್ಮದ್ ಶೆಹಜಾದ್ ಮತ್ತು ಆತನ ಸಹಾಯಕ ಇಫ್ತಿಕರ್ ಹುಸೇನ್ ಎಂದು ಗುರುತಿಸಲಾಗಿದೆ. ವಿಡಿಯೋ ವೈರಲ್ ಆದ ನಂತರ ರೈಲ್ವೆ ಸಚಿವ ಅಜಂ ಖಾನ್ ಸ್ವಾತಿ ಆ ಚಾಲಕ ಮತ್ತು ಆತನ ಸಹಾಯಕನನ್ನು ಅಮಾನತುಗೊಳಿಸಿದ್ದಾರೆ.

‘ನೀವು ರೈಲನ್ನು ಹಳಿಗಳ ಮಧ್ಯದಲ್ಲಿ ಮನಬಂದಂತೆ ನಿಲ್ಲಿಸಿದಾಗ ಅದರಿಂದ ಸುರಕ್ಷತೆಯ ಸಮಸ್ಯೆಯಾಗುತ್ತದೆ. ಸುರಕ್ಷತೆ ನಮ್ಮ ಆದ್ಯತೆಯಾಗಿದೆ. ಸುರಕ್ಷತೆಗೆ ಧಕ್ಕೆ ತರುವ ಯಾವುದನ್ನೂ ನಾವು ಸಹಿಸುವುದಿಲ್ಲ ಎಂದು ಪಾಕಿಸ್ತಾನದ ರೈಲ್ವೇ ಸಚಿವಾಲಯದ ವಕ್ತಾರ ಸೈಯದ್ ಇಜಾಜ್-ಉಲ್-ಹಸನ್ ಶಾ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ನಾನು ಸಹಿಸುವುದಿಲ್ಲ ಮತ್ತು ರಾಷ್ಟ್ರೀಯ ಸ್ವತ್ತುಗಳನ್ನು ವೈಯಕ್ತಿಕ ಬಳಕೆಗೆ ಬಳಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಪಾಕಿಸ್ತಾನದ ರೈಲ್ವೆ ಸಚಿವರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Viral Video: ಮದುವೆ ಮಂಟಪಕ್ಕೆ ನುಗ್ಗಿ ಪ್ರೇಯಸಿಯ ಹಣೆಗೆ ಸಿಂಧೂರವಿಟ್ಟ ಯುವಕ; ತಾಳಿ ಕಟ್ಟಲು ರೆಡಿಯಾಗಿದ್ದ ವರ ಶಾಕ್!

Shocking News: ಹೋಂ ವರ್ಕ್ ಮಾಡದ ಮಗನ ಕೈ-ಕಾಲು ಕಟ್ಟಿ ಫ್ಯಾನ್​ಗೆ ನೇತು ಹಾಕಿದ ಅಪ್ಪ!

ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ