AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಕ್ ಶೋನಲ್ಲಿ ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ

ಪಾಕಿಸ್ತಾನಿ ಗಾಯಕಿ ಶಾಜಿಯಾ ಮಂಜೂರ್ ಲೈವ್ ಟಿವಿ ಕಾರ್ಯಕ್ರಮವೊಂದರಲ್ಲಿ ಕೋಪಗೊಂಡು ಸಹ-ನಿರೂಪಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 'ಹನಿಮೂನ್' ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗಾಯಕಿ ಸಹ ನಿರೂಪಕನ ಮೇಲೆ ಕೋಪಗೊಂಡಿರುವುದು ತಿಳಿದುಬಂದಿದೆ.

ಟಾಕ್ ಶೋನಲ್ಲಿ  'ಹನಿಮೂನ್' ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ
ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ
ಅಕ್ಷತಾ ವರ್ಕಾಡಿ
|

Updated on:Feb 28, 2024 | 12:28 PM

Share

ಪಾಕಿಸ್ತಾನಿ ಟಾಕ್​​ ಶೋಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನಪ್ರಿಯವಾಗುತ್ತಿವೆ. ಇತ್ತೀಚಿಗಷ್ಟೇ ಟಾಕ್​​ ಶೋ ಒಂದರಲ್ಲಿ ಪಾಕಿಸ್ತಾನಿ ಗಾಯಕಿ ಶಾಜಿಯಾ ಮಂಜೂರ್ ಲೈವ್​​​​ ಕಾರ್ಯಕ್ರಮದಲ್ಲೇ ಸಹ ನಿರೂಪಕನಿಗೆ ಸರಿಯಾಗಿ ಬೈದು ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗಾಯಕಿ ಸಹ ನಿರೂಪಕ ವಿರುದ್ಧ ಕೋಪಗೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋದಲ್ಲಿ ಹಾಸ್ಯನಟ ಹಾಗೂ ಸಹ-ನಿರೂಪಕ ಶೆರ್ರಿ ನನ್ಹಾ “ನಮ್ಮ ಮದುವೆಯ ನಂತರ ಹನಿಮೂನ್​​​ಗಾಗಿ ನಾನು ನಿಮ್ಮನ್ನು ನೇರವಾಗಿ ಮಾಂಟೆ ಕಾರ್ಲೋಗೆ ಕರೆದುಕೊಂಡು ಹೋಗುತ್ತೇನೆ” ಎಂದು ಗಾಯಕಿ ಶಾಜಿಯಾ ಅವರಿಗೆ ಹಾಸ್ಯಸ್ಪದವಾಗಿ ಹೇಳಿದ್ದಾನೆ.

ಸಹ ನಿರೂಪಕನಿಗೆ ಗಾಯಕಿ ಕಪಾಳಮೋಕ್ಷ ಮಾಡಿರುವ ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು

ಲೈವ್​​ ಕಾರ್ಯಕ್ರಮದಲ್ಲಿ ಹಾಸ್ಯನಟನ ಮಾತಿಗೆ ಗಾಯಕಿ ಕೋಪಗೊಂಡಿದ್ದಾಳೆ. “ಕಳೆದ ಬಾರಿಯೂ ನೀವು ಹೀಗೆಯೇ ವರ್ತಿಸಿದ್ದೀರೀ. ಪ್ರತೀ ಬಾರಿಯೂ ತಮಾಷೆಯಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮಹಿಳೆಯರೊಂದಿಗೆ ಈ ರೀತಿ ಅಸಭ್ಯವಾಗಿ ಮಾತನಾಡುವುದು ಎಷ್ಟು ಸರಿ?” ಎಂದು ಗಾಯಕಿ ವಾಗ್ವಾದಕ್ಕೀಳಿದ್ದಿದ್ದಾರೆ. ಇದಲ್ಲದೆ ಸಹ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Wed, 28 February 24

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ