AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬೂಟುಗಾಲಿನಿಂದ ಮುಖಕ್ಕೆ ಒದ್ದ ಟಿಕೆಟ್ ಕಲೆಕ್ಟರುಗಳ ಅಮಾನತು

Viral Video : ಟಿಕೆಟ್​ ಇಲ್ಲದೇ ಪ್ರಯಾಣಿಸುತ್ತಿದ್ದ ಮಾತ್ರಕ್ಕೆ ಟಿಕೆಟ್​ ಕಲೆಕ್ಟರ್​ಗಳು ಹೀಗೆಲ್ಲ ಥಳಿಸಬಾರದಿತ್ತು ಎಂದು ಅಲ್ಲಿದ್ದ ಪ್ರಯಾಣಿಕರು ಹೇಳಿದ್ದಾರೆ. ಅಮಾನವೀಯವೆನ್ನಿಸುವ ಈ ವಿಡಿಯೋ ಇದೀಗ ವೈರಲ್ ಆಗಿದೆ.

ಟಿಕೆಟ್​ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬೂಟುಗಾಲಿನಿಂದ ಮುಖಕ್ಕೆ ಒದ್ದ ಟಿಕೆಟ್ ಕಲೆಕ್ಟರುಗಳ ಅಮಾನತು
ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನನ್ನು ಥಳಿಸುತ್ತಿರುವ ಟಿಕೆಟ್​ ಕಲೆಕ್ಟರ್​ಗಳು
TV9 Web
| Updated By: ಶ್ರೀದೇವಿ ಕಳಸದ|

Updated on: Jan 06, 2023 | 11:24 AM

Share

Viral Video : ಬಿಹಾರದ ಮುಜಾಫರ್​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಟಿಕೆಟ್​ ಕಲೆಕ್ಟರ್​ ಥಳಿಸಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಟಿಕೆಟ್​ ಇಲ್ಲದೇ ಪ್ರಯಾಣಿಸುತ್ತಿದ್ದುದೇ ಇದಕ್ಕೆ ಕಾರಣವಾಗಿದೆ. ಪ್ರಯಾಣಿಕ ಮತ್ತು ಟಿಕೆಟ್​ ಕಲೆಕ್ಟರ್ ಮಧ್ಯೆ ಜಗಳ ಶುರುವಾಗಿ ನಂತರ ಅದು ಪರಸ್ಪರ ಹೊಡೆದಾಟಕ್ಕೆ ತಿರುಗಿದೆ. ಪರಿಣಾಮವಾಗಿ ಟಿಕೆಟ್​ ಕಲೆಕ್ಟರ್​ನನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರೊಬ್ಬರು ಈ ವಿಡಿಯೋ ಮಾಡಿದ್ದಾರೆ.

ಟಿಕೆಟ್​ ಕಲೆಕ್ಟರ್​ ಪ್ರಯಾಣಿಕನ ಕಾಲನ್ನು ಹಿಡಿದು ಬರ್ತ್​ನಿಂದ ಕೆಳಗಿಳಿಸಲು ಪ್ರಯತ್ನಿಸುವಾಗ ಪ್ರಯಾಣಿಕ ಕಲೆಕ್ಟರ್​ನನ್ನು ಒದೆಯುತ್ತಾನೆ. ಆಗ ಕಲೆಕ್ಟರ್​ ಇನ್ನೊಬ್ಬ ಸಹೋದ್ಯೋಗಿಯೊಂದಿಗೆ ಜೊತೆಗೂಡಿ ಈ ಪ್ರಯಾಣಿಕನನ್ನು ನೆಲಕ್ಕುರುಳಿಸಿ ಹೊಡೆಯುತ್ತಾರೆ. ಬೂಟುಗಾಲಿನಲ್ಲಿ ಮುಖಕ್ಕೆ ಒದೆಯುತ್ತಾರೆ. ನಂತರ ಪ್ರಯಾಣಿಕರು ಮಧ್ಯೆ ಪ್ರವೇಶಿಸಿ ಈ ಹೊಡೆದಾಟವನ್ನು ನಿಲ್ಲಿಸುತ್ತಾರೆ.

ಇದನ್ನೂ ಓದಿ : ಪಾರ್ಕಿನ್ಸನ್ಸ್​ಗೆ ಒಳಗಾದ ವಯೋವೃದ್ಧರಿಗೆ ದಿನಪತ್ರಿಕೆ ಓದಲು ಸಹಾಯ ಮಾಡಿದ ಅಪರಿಚಿತ ಮಹಿಳೆಯ ವಿಡಿಯೋ ವೈರಲ್

ಜನವರಿ 2 ರ ರಾತ್ರಿ ಮುಂಬೈನಿಂದ ಜೈನಗರಕ್ಕೆ ಹೊರಟಾಗ ಧೋಲಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಕ್ಕೆ ಈ ಸಂದರ್ಭ ಸೃಷ್ಟಿಯಾಗಿದ್ದರೂ ಹೀಗೆ ಹಲ್ಲೆ ಮಾಡಬಾರದಿತ್ತು ಎನ್ನುವುದು ಘಟನೆಗೆ ಸಾಕ್ಷಿಯಾದ ಅನೇಕರ ಅಭಿಪ್ರಾಯವಾಗಿದೆ. ಅಮಾನತುಗೊಂಡ ಇಬ್ಬರೂ ಟಿಕೆಟ್​ ಕಲೆಕ್ಟರ್​ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!