AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬೂಟುಗಾಲಿನಿಂದ ಮುಖಕ್ಕೆ ಒದ್ದ ಟಿಕೆಟ್ ಕಲೆಕ್ಟರುಗಳ ಅಮಾನತು

Viral Video : ಟಿಕೆಟ್​ ಇಲ್ಲದೇ ಪ್ರಯಾಣಿಸುತ್ತಿದ್ದ ಮಾತ್ರಕ್ಕೆ ಟಿಕೆಟ್​ ಕಲೆಕ್ಟರ್​ಗಳು ಹೀಗೆಲ್ಲ ಥಳಿಸಬಾರದಿತ್ತು ಎಂದು ಅಲ್ಲಿದ್ದ ಪ್ರಯಾಣಿಕರು ಹೇಳಿದ್ದಾರೆ. ಅಮಾನವೀಯವೆನ್ನಿಸುವ ಈ ವಿಡಿಯೋ ಇದೀಗ ವೈರಲ್ ಆಗಿದೆ.

ಟಿಕೆಟ್​ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬೂಟುಗಾಲಿನಿಂದ ಮುಖಕ್ಕೆ ಒದ್ದ ಟಿಕೆಟ್ ಕಲೆಕ್ಟರುಗಳ ಅಮಾನತು
ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನನ್ನು ಥಳಿಸುತ್ತಿರುವ ಟಿಕೆಟ್​ ಕಲೆಕ್ಟರ್​ಗಳು
TV9 Web
| Edited By: ಶ್ರೀದೇವಿ ಕಳಸದ|

Updated on: Jan 06, 2023 | 11:24 AM

Share

Viral Video : ಬಿಹಾರದ ಮುಜಾಫರ್​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಟಿಕೆಟ್​ ಕಲೆಕ್ಟರ್​ ಥಳಿಸಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಟಿಕೆಟ್​ ಇಲ್ಲದೇ ಪ್ರಯಾಣಿಸುತ್ತಿದ್ದುದೇ ಇದಕ್ಕೆ ಕಾರಣವಾಗಿದೆ. ಪ್ರಯಾಣಿಕ ಮತ್ತು ಟಿಕೆಟ್​ ಕಲೆಕ್ಟರ್ ಮಧ್ಯೆ ಜಗಳ ಶುರುವಾಗಿ ನಂತರ ಅದು ಪರಸ್ಪರ ಹೊಡೆದಾಟಕ್ಕೆ ತಿರುಗಿದೆ. ಪರಿಣಾಮವಾಗಿ ಟಿಕೆಟ್​ ಕಲೆಕ್ಟರ್​ನನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರೊಬ್ಬರು ಈ ವಿಡಿಯೋ ಮಾಡಿದ್ದಾರೆ.

ಟಿಕೆಟ್​ ಕಲೆಕ್ಟರ್​ ಪ್ರಯಾಣಿಕನ ಕಾಲನ್ನು ಹಿಡಿದು ಬರ್ತ್​ನಿಂದ ಕೆಳಗಿಳಿಸಲು ಪ್ರಯತ್ನಿಸುವಾಗ ಪ್ರಯಾಣಿಕ ಕಲೆಕ್ಟರ್​ನನ್ನು ಒದೆಯುತ್ತಾನೆ. ಆಗ ಕಲೆಕ್ಟರ್​ ಇನ್ನೊಬ್ಬ ಸಹೋದ್ಯೋಗಿಯೊಂದಿಗೆ ಜೊತೆಗೂಡಿ ಈ ಪ್ರಯಾಣಿಕನನ್ನು ನೆಲಕ್ಕುರುಳಿಸಿ ಹೊಡೆಯುತ್ತಾರೆ. ಬೂಟುಗಾಲಿನಲ್ಲಿ ಮುಖಕ್ಕೆ ಒದೆಯುತ್ತಾರೆ. ನಂತರ ಪ್ರಯಾಣಿಕರು ಮಧ್ಯೆ ಪ್ರವೇಶಿಸಿ ಈ ಹೊಡೆದಾಟವನ್ನು ನಿಲ್ಲಿಸುತ್ತಾರೆ.

ಇದನ್ನೂ ಓದಿ : ಪಾರ್ಕಿನ್ಸನ್ಸ್​ಗೆ ಒಳಗಾದ ವಯೋವೃದ್ಧರಿಗೆ ದಿನಪತ್ರಿಕೆ ಓದಲು ಸಹಾಯ ಮಾಡಿದ ಅಪರಿಚಿತ ಮಹಿಳೆಯ ವಿಡಿಯೋ ವೈರಲ್

ಜನವರಿ 2 ರ ರಾತ್ರಿ ಮುಂಬೈನಿಂದ ಜೈನಗರಕ್ಕೆ ಹೊರಟಾಗ ಧೋಲಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಕ್ಕೆ ಈ ಸಂದರ್ಭ ಸೃಷ್ಟಿಯಾಗಿದ್ದರೂ ಹೀಗೆ ಹಲ್ಲೆ ಮಾಡಬಾರದಿತ್ತು ಎನ್ನುವುದು ಘಟನೆಗೆ ಸಾಕ್ಷಿಯಾದ ಅನೇಕರ ಅಭಿಪ್ರಾಯವಾಗಿದೆ. ಅಮಾನತುಗೊಂಡ ಇಬ್ಬರೂ ಟಿಕೆಟ್​ ಕಲೆಕ್ಟರ್​ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ