AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬೂಟುಗಾಲಿನಿಂದ ಮುಖಕ್ಕೆ ಒದ್ದ ಟಿಕೆಟ್ ಕಲೆಕ್ಟರುಗಳ ಅಮಾನತು

Viral Video : ಟಿಕೆಟ್​ ಇಲ್ಲದೇ ಪ್ರಯಾಣಿಸುತ್ತಿದ್ದ ಮಾತ್ರಕ್ಕೆ ಟಿಕೆಟ್​ ಕಲೆಕ್ಟರ್​ಗಳು ಹೀಗೆಲ್ಲ ಥಳಿಸಬಾರದಿತ್ತು ಎಂದು ಅಲ್ಲಿದ್ದ ಪ್ರಯಾಣಿಕರು ಹೇಳಿದ್ದಾರೆ. ಅಮಾನವೀಯವೆನ್ನಿಸುವ ಈ ವಿಡಿಯೋ ಇದೀಗ ವೈರಲ್ ಆಗಿದೆ.

ಟಿಕೆಟ್​ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಬೂಟುಗಾಲಿನಿಂದ ಮುಖಕ್ಕೆ ಒದ್ದ ಟಿಕೆಟ್ ಕಲೆಕ್ಟರುಗಳ ಅಮಾನತು
ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನನ್ನು ಥಳಿಸುತ್ತಿರುವ ಟಿಕೆಟ್​ ಕಲೆಕ್ಟರ್​ಗಳು
TV9 Web
| Edited By: ಶ್ರೀದೇವಿ ಕಳಸದ|

Updated on: Jan 06, 2023 | 11:24 AM

Share

Viral Video : ಬಿಹಾರದ ಮುಜಾಫರ್​ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಟಿಕೆಟ್​ ಕಲೆಕ್ಟರ್​ ಥಳಿಸಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಟಿಕೆಟ್​ ಇಲ್ಲದೇ ಪ್ರಯಾಣಿಸುತ್ತಿದ್ದುದೇ ಇದಕ್ಕೆ ಕಾರಣವಾಗಿದೆ. ಪ್ರಯಾಣಿಕ ಮತ್ತು ಟಿಕೆಟ್​ ಕಲೆಕ್ಟರ್ ಮಧ್ಯೆ ಜಗಳ ಶುರುವಾಗಿ ನಂತರ ಅದು ಪರಸ್ಪರ ಹೊಡೆದಾಟಕ್ಕೆ ತಿರುಗಿದೆ. ಪರಿಣಾಮವಾಗಿ ಟಿಕೆಟ್​ ಕಲೆಕ್ಟರ್​ನನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರೊಬ್ಬರು ಈ ವಿಡಿಯೋ ಮಾಡಿದ್ದಾರೆ.

ಟಿಕೆಟ್​ ಕಲೆಕ್ಟರ್​ ಪ್ರಯಾಣಿಕನ ಕಾಲನ್ನು ಹಿಡಿದು ಬರ್ತ್​ನಿಂದ ಕೆಳಗಿಳಿಸಲು ಪ್ರಯತ್ನಿಸುವಾಗ ಪ್ರಯಾಣಿಕ ಕಲೆಕ್ಟರ್​ನನ್ನು ಒದೆಯುತ್ತಾನೆ. ಆಗ ಕಲೆಕ್ಟರ್​ ಇನ್ನೊಬ್ಬ ಸಹೋದ್ಯೋಗಿಯೊಂದಿಗೆ ಜೊತೆಗೂಡಿ ಈ ಪ್ರಯಾಣಿಕನನ್ನು ನೆಲಕ್ಕುರುಳಿಸಿ ಹೊಡೆಯುತ್ತಾರೆ. ಬೂಟುಗಾಲಿನಲ್ಲಿ ಮುಖಕ್ಕೆ ಒದೆಯುತ್ತಾರೆ. ನಂತರ ಪ್ರಯಾಣಿಕರು ಮಧ್ಯೆ ಪ್ರವೇಶಿಸಿ ಈ ಹೊಡೆದಾಟವನ್ನು ನಿಲ್ಲಿಸುತ್ತಾರೆ.

ಇದನ್ನೂ ಓದಿ : ಪಾರ್ಕಿನ್ಸನ್ಸ್​ಗೆ ಒಳಗಾದ ವಯೋವೃದ್ಧರಿಗೆ ದಿನಪತ್ರಿಕೆ ಓದಲು ಸಹಾಯ ಮಾಡಿದ ಅಪರಿಚಿತ ಮಹಿಳೆಯ ವಿಡಿಯೋ ವೈರಲ್

ಜನವರಿ 2 ರ ರಾತ್ರಿ ಮುಂಬೈನಿಂದ ಜೈನಗರಕ್ಕೆ ಹೊರಟಾಗ ಧೋಲಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಕ್ಕೆ ಈ ಸಂದರ್ಭ ಸೃಷ್ಟಿಯಾಗಿದ್ದರೂ ಹೀಗೆ ಹಲ್ಲೆ ಮಾಡಬಾರದಿತ್ತು ಎನ್ನುವುದು ಘಟನೆಗೆ ಸಾಕ್ಷಿಯಾದ ಅನೇಕರ ಅಭಿಪ್ರಾಯವಾಗಿದೆ. ಅಮಾನತುಗೊಂಡ ಇಬ್ಬರೂ ಟಿಕೆಟ್​ ಕಲೆಕ್ಟರ್​ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಡಿಕೆಶಿ ದಿಟ್ಟ ಹೆಜ್ಜೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಸರ್ಕಾರಿ ಬಸ್ ಮಾಜಿ ಚಾಲಕನ ಮನೆಯಲ್ಲಿ 28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಪ್ರಧಾನಿ ಮೋದಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರದ ಸಿದ್ಧತೆ, ಬಿಗಿ ಭದ್ರತೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಮಗಳ ಕೊನೆಯ ಕ್ಷಣ ನೆನೆದು ಕಣ್ಣೀರಿಟ್ಟ ತಂದೆ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಕಾವೇರಿ ವಿವಾದ: ಮಂಡ್ಯದಲ್ಲಿ ವಿಜಯ್ ‘ಜನನಾಯಗನ್’ ಪ್ರದರ್ಶನ ತಡೆಗೆ ಯತ್ನ
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬ್ಯಾಡರಹಳ್ಳಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಮತ್ತೆ ಪ್ರತ್ಯಕ್ಷವಾದ ಚಿರತೆ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಪ್ರಧಾನಿ ಮೋದಿಗೆ ಮೈಸೂರಿನಲ್ಲಿ ವಿಶೇಷ ಉಡುಗೊರೆ ಸಿದ್ಧ
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್