AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಕತ್ತು ಸೀಳಿ, ಪಿಸ್ತೂಲಿನಿಂದ ಫಯರ್​​ ಮಾಡಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್

ಕುತ್ತಿಗೆಯಿಂದ  ಸುರಿಯುತ್ತಿರುವ ರಕ್ತ, ಒಂದು ಕೈಯಲ್ಲಿ ಚಾಕು, ಇನ್ನೊಂದರಲ್ಲಿ ಪಿಸ್ತೂಲ್​​ ಹಿಡಿದು ಫಯರ್​​ ಮಾಡಿಕೊಂಡು ವ್ಯಕ್ತಿಯೊಬ್ಬ ರಸ್ತೆಯಲ್ಲಿ ಓಡಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. 

ರಸ್ತೆಯಲ್ಲಿ ಕತ್ತು ಸೀಳಿ, ಪಿಸ್ತೂಲಿನಿಂದ ಫಯರ್​​ ಮಾಡಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್
ಸಿಸಿಟಿವಿ ದೃಶ್ಯಾವಳಿImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on: Mar 18, 2023 | 6:05 PM

ಕುತ್ತಿಗೆಯಿಂದ  ಸುರಿಯುತ್ತಿರುವ ರಕ್ತ, ಒಂದು ಕೈಯಲ್ಲಿ ಚಾಕು, ಇನ್ನೊಂದರಲ್ಲಿ ಪಿಸ್ತೂಲ್​​ ಹಿಡಿದು ಫಯರ್​​ ಮಾಡಿಕೊಂಡು ವ್ಯಕ್ತಿಯೊಬ್ಬ ರಸ್ತೆಯಲ್ಲಿ ಓಡಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಇಂತಹ ಆಘಾತಕಾರಿ ಘಟನೆ ಮಾರ್ಚ್ 16 ರಂದು ದೆಹಲಿಯಲ್ಲಿ ನಡೆದಿದೆ. ದೆಹಲಿಯ ನಾಥು ಕಾಲೋನಿ ಚೌಕ್ ಬಳಿ ವ್ಯಕ್ತಿ ಕತ್ತು ಸೀಳಿಕೊಂಡು ಜನದಟ್ಟನೆ ಇರುವ ಪ್ರದೇಶದಲ್ಲಿ ಓಡಿಕೊಂಡು ಬರುತ್ತಿರುವುದು ಹತ್ತಿರದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈತನನ್ನು ಕಂಡು ಜನರು ಹೆದರಿ ಓಡಿಹೋಗುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ನಂತರ ಇತನನ್ನು ಪೊಲೀಸರು ಬಂಧಿಸಿ, ಆತನ ಮೇಲೆ ಕೇಸು ದಾಖಲಿಸಿಕೊಂಡಿದ್ದಾರೆ.

ಎಎನ್‌ಐ ಟ್ಟಿಟರ್​​ ಖಾತೆಯಲ್ಲಿ ಹಂಚಿಕೊಂಡ ಆಘಾತಕಾರಿ ಘಟನೆಯ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: RRR ಚಿತ್ರಕ್ಕೂ ಟಾಮ್​ ಆ್ಯಂಡ್​ ಜೆರ್ರಿಗೂ ಏನು ಸಂಬಂಧ? ಇಲ್ಲಿದೆ ನೋಡಿ ಇಂಟರೆಸ್ಟಿಂಗ್​​​​​​ ಕಹಾನಿ

ಆರೋಪಿ ಕ್ರಿಶನ್ ಶೇರ್ವಾಲ್(29) ಎಂದು ಗುರುತಿಸಲಾಗಿದೆ. ಈತ ತನ್ನ ಹೆಂಡತಿಯಿಂದ ವಿಚ್ಛೇದನ ಪಡೆದುಕೊಂಡಿದ್ದು, ಇದೇ ಕಾರಣಕ್ಕಾಗಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾನೆ ಎಂದು ಪೊಲೀಸರ ವಿಚಾರಣೆಯ ವೇಳೆಗೆ ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಈ ವ್ಯಕ್ತಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪಿಸಿಆರ್ ವ್ಯಾನ್ ಸ್ಥಳಕ್ಕೆ ಧಾವಿಸಿದೆ. ಆತನ ಕೈಯಿಂದ ಪಿಸ್ತೂಲ್​ ಚಾಕು ವಶಪಡಸಿಕೊಳ್ಳುವ ವೇಳೆ ಪೊಲೀಸ್​​​ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದೆ. ಶೇರ್ವಾಲ್ ವಿರುದ್ಧ ಐಪಿಸಿ ಸೆಕ್ಷನ್ 307, 394, 397, 186, 353 ಮತ್ತು 27 ಅಡಿಯಲ್ಲಿ ಎಂಎಸ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು