AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಕತ್ತು ಸೀಳಿ, ಪಿಸ್ತೂಲಿನಿಂದ ಫಯರ್​​ ಮಾಡಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್

ಕುತ್ತಿಗೆಯಿಂದ  ಸುರಿಯುತ್ತಿರುವ ರಕ್ತ, ಒಂದು ಕೈಯಲ್ಲಿ ಚಾಕು, ಇನ್ನೊಂದರಲ್ಲಿ ಪಿಸ್ತೂಲ್​​ ಹಿಡಿದು ಫಯರ್​​ ಮಾಡಿಕೊಂಡು ವ್ಯಕ್ತಿಯೊಬ್ಬ ರಸ್ತೆಯಲ್ಲಿ ಓಡಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. 

ರಸ್ತೆಯಲ್ಲಿ ಕತ್ತು ಸೀಳಿ, ಪಿಸ್ತೂಲಿನಿಂದ ಫಯರ್​​ ಮಾಡಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್
ಸಿಸಿಟಿವಿ ದೃಶ್ಯಾವಳಿImage Credit source: Twitter
ಅಕ್ಷತಾ ವರ್ಕಾಡಿ
|

Updated on: Mar 18, 2023 | 6:05 PM

Share

ಕುತ್ತಿಗೆಯಿಂದ  ಸುರಿಯುತ್ತಿರುವ ರಕ್ತ, ಒಂದು ಕೈಯಲ್ಲಿ ಚಾಕು, ಇನ್ನೊಂದರಲ್ಲಿ ಪಿಸ್ತೂಲ್​​ ಹಿಡಿದು ಫಯರ್​​ ಮಾಡಿಕೊಂಡು ವ್ಯಕ್ತಿಯೊಬ್ಬ ರಸ್ತೆಯಲ್ಲಿ ಓಡಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಇಂತಹ ಆಘಾತಕಾರಿ ಘಟನೆ ಮಾರ್ಚ್ 16 ರಂದು ದೆಹಲಿಯಲ್ಲಿ ನಡೆದಿದೆ. ದೆಹಲಿಯ ನಾಥು ಕಾಲೋನಿ ಚೌಕ್ ಬಳಿ ವ್ಯಕ್ತಿ ಕತ್ತು ಸೀಳಿಕೊಂಡು ಜನದಟ್ಟನೆ ಇರುವ ಪ್ರದೇಶದಲ್ಲಿ ಓಡಿಕೊಂಡು ಬರುತ್ತಿರುವುದು ಹತ್ತಿರದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈತನನ್ನು ಕಂಡು ಜನರು ಹೆದರಿ ಓಡಿಹೋಗುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ನಂತರ ಇತನನ್ನು ಪೊಲೀಸರು ಬಂಧಿಸಿ, ಆತನ ಮೇಲೆ ಕೇಸು ದಾಖಲಿಸಿಕೊಂಡಿದ್ದಾರೆ.

ಎಎನ್‌ಐ ಟ್ಟಿಟರ್​​ ಖಾತೆಯಲ್ಲಿ ಹಂಚಿಕೊಂಡ ಆಘಾತಕಾರಿ ಘಟನೆಯ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: RRR ಚಿತ್ರಕ್ಕೂ ಟಾಮ್​ ಆ್ಯಂಡ್​ ಜೆರ್ರಿಗೂ ಏನು ಸಂಬಂಧ? ಇಲ್ಲಿದೆ ನೋಡಿ ಇಂಟರೆಸ್ಟಿಂಗ್​​​​​​ ಕಹಾನಿ

ಆರೋಪಿ ಕ್ರಿಶನ್ ಶೇರ್ವಾಲ್(29) ಎಂದು ಗುರುತಿಸಲಾಗಿದೆ. ಈತ ತನ್ನ ಹೆಂಡತಿಯಿಂದ ವಿಚ್ಛೇದನ ಪಡೆದುಕೊಂಡಿದ್ದು, ಇದೇ ಕಾರಣಕ್ಕಾಗಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾನೆ ಎಂದು ಪೊಲೀಸರ ವಿಚಾರಣೆಯ ವೇಳೆಗೆ ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಈ ವ್ಯಕ್ತಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪಿಸಿಆರ್ ವ್ಯಾನ್ ಸ್ಥಳಕ್ಕೆ ಧಾವಿಸಿದೆ. ಆತನ ಕೈಯಿಂದ ಪಿಸ್ತೂಲ್​ ಚಾಕು ವಶಪಡಸಿಕೊಳ್ಳುವ ವೇಳೆ ಪೊಲೀಸ್​​​ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದೆ. ಶೇರ್ವಾಲ್ ವಿರುದ್ಧ ಐಪಿಸಿ ಸೆಕ್ಷನ್ 307, 394, 397, 186, 353 ಮತ್ತು 27 ಅಡಿಯಲ್ಲಿ ಎಂಎಸ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ