AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಕತ್ತು ಸೀಳಿ, ಪಿಸ್ತೂಲಿನಿಂದ ಫಯರ್​​ ಮಾಡಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್

ಕುತ್ತಿಗೆಯಿಂದ  ಸುರಿಯುತ್ತಿರುವ ರಕ್ತ, ಒಂದು ಕೈಯಲ್ಲಿ ಚಾಕು, ಇನ್ನೊಂದರಲ್ಲಿ ಪಿಸ್ತೂಲ್​​ ಹಿಡಿದು ಫಯರ್​​ ಮಾಡಿಕೊಂಡು ವ್ಯಕ್ತಿಯೊಬ್ಬ ರಸ್ತೆಯಲ್ಲಿ ಓಡಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. 

ರಸ್ತೆಯಲ್ಲಿ ಕತ್ತು ಸೀಳಿ, ಪಿಸ್ತೂಲಿನಿಂದ ಫಯರ್​​ ಮಾಡಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್
ಸಿಸಿಟಿವಿ ದೃಶ್ಯಾವಳಿImage Credit source: Twitter
ಅಕ್ಷತಾ ವರ್ಕಾಡಿ
|

Updated on: Mar 18, 2023 | 6:05 PM

Share

ಕುತ್ತಿಗೆಯಿಂದ  ಸುರಿಯುತ್ತಿರುವ ರಕ್ತ, ಒಂದು ಕೈಯಲ್ಲಿ ಚಾಕು, ಇನ್ನೊಂದರಲ್ಲಿ ಪಿಸ್ತೂಲ್​​ ಹಿಡಿದು ಫಯರ್​​ ಮಾಡಿಕೊಂಡು ವ್ಯಕ್ತಿಯೊಬ್ಬ ರಸ್ತೆಯಲ್ಲಿ ಓಡಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಇಂತಹ ಆಘಾತಕಾರಿ ಘಟನೆ ಮಾರ್ಚ್ 16 ರಂದು ದೆಹಲಿಯಲ್ಲಿ ನಡೆದಿದೆ. ದೆಹಲಿಯ ನಾಥು ಕಾಲೋನಿ ಚೌಕ್ ಬಳಿ ವ್ಯಕ್ತಿ ಕತ್ತು ಸೀಳಿಕೊಂಡು ಜನದಟ್ಟನೆ ಇರುವ ಪ್ರದೇಶದಲ್ಲಿ ಓಡಿಕೊಂಡು ಬರುತ್ತಿರುವುದು ಹತ್ತಿರದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈತನನ್ನು ಕಂಡು ಜನರು ಹೆದರಿ ಓಡಿಹೋಗುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ನಂತರ ಇತನನ್ನು ಪೊಲೀಸರು ಬಂಧಿಸಿ, ಆತನ ಮೇಲೆ ಕೇಸು ದಾಖಲಿಸಿಕೊಂಡಿದ್ದಾರೆ.

ಎಎನ್‌ಐ ಟ್ಟಿಟರ್​​ ಖಾತೆಯಲ್ಲಿ ಹಂಚಿಕೊಂಡ ಆಘಾತಕಾರಿ ಘಟನೆಯ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: RRR ಚಿತ್ರಕ್ಕೂ ಟಾಮ್​ ಆ್ಯಂಡ್​ ಜೆರ್ರಿಗೂ ಏನು ಸಂಬಂಧ? ಇಲ್ಲಿದೆ ನೋಡಿ ಇಂಟರೆಸ್ಟಿಂಗ್​​​​​​ ಕಹಾನಿ

ಆರೋಪಿ ಕ್ರಿಶನ್ ಶೇರ್ವಾಲ್(29) ಎಂದು ಗುರುತಿಸಲಾಗಿದೆ. ಈತ ತನ್ನ ಹೆಂಡತಿಯಿಂದ ವಿಚ್ಛೇದನ ಪಡೆದುಕೊಂಡಿದ್ದು, ಇದೇ ಕಾರಣಕ್ಕಾಗಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾನೆ ಎಂದು ಪೊಲೀಸರ ವಿಚಾರಣೆಯ ವೇಳೆಗೆ ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಈ ವ್ಯಕ್ತಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪಿಸಿಆರ್ ವ್ಯಾನ್ ಸ್ಥಳಕ್ಕೆ ಧಾವಿಸಿದೆ. ಆತನ ಕೈಯಿಂದ ಪಿಸ್ತೂಲ್​ ಚಾಕು ವಶಪಡಸಿಕೊಳ್ಳುವ ವೇಳೆ ಪೊಲೀಸ್​​​ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದೆ. ಶೇರ್ವಾಲ್ ವಿರುದ್ಧ ಐಪಿಸಿ ಸೆಕ್ಷನ್ 307, 394, 397, 186, 353 ಮತ್ತು 27 ಅಡಿಯಲ್ಲಿ ಎಂಎಸ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್